TV10 Kannada Exclusive

ವಿಷ್ಣು ಸಮಾಧಿ ಇದ್ದ ಸ್ಥಳ ಮುಟ್ಟುಗೋಲು…ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮ…

ಮೈಸೂರು,ಆ29,Tv10 ಕನ್ನಡ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಕ್ರಮವನ್ನ ಅಭಿಮಾನಿಗಳು ಸಂತಸದಿಂದ ಸ್ವಾಗತಿಸಿದ್ದಾರೆ. ಪುಣ್ಯಭೂಮಿಯನ್ನುಸಂರಕ್ಷಿಸಲು ಮುಂದಾಗಿರುವ ಸರ್ಕಾರದ ನಿಲುವನ್ನು ಸಮರ್ಥಿಸಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಸಾಹಸಸಿಂಹ ನ ಭಾವಚಿತ್ರ ಹಿಡಿದು ಜೈಕಾರ ಕೂಗುತ್ತಾ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.ಅಭಿಮಾನಿಗಳ 15 ವರ್ಷಗಳ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ
Read More

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಹಿಂಪಡೆಯಿರಿ…ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು,ಆ29,Tv10 ಕನ್ನಡ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಮಾಡಿರುವ ವಿಚಾರ ದಿನೇ ದನೇ ವಿರೋಧ ಹೆಚ್ಚಾಗುತ್ತಿದೆ.ಆಯ್ಕೆ ಹಿಂಪಡೆಯುವಂತೆ ಅಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ.ಹಳೇ ಜಿಲ್ಲಾಧಿಕಾರಿ ಬಳಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.ತಾಯಿ ಚಾಮುಂಡೇಶ್ವರಿಯನ್ನ ನವರಾತ್ರಿಯ 9 ದಿನಗಳ ಕಾಲ ಆರಾಧಿಸುವ ಹಿಂದೂಗಳು ಈ ಆಯ್ಕೆಯನ್ನ ವಿರೋಧಿಸುತಿದ್ದೇವೆ.ಕನ್ನಡಾಂಬೆ ತಾಯಿ ಭುವನೇಶ್ವರಿಯ ಬಗ್ಗೆ, ಅರಿಶಿನ ಕುಂಕುಮದ ಬಗ್ಗೆ, ಕನ್ನಡ ಭಾಷೆಯ ವೈಶಾಲ್ಯತೆಯ ಬಗ್ಗೆ, ನಾಡಿನ ಸಂಸ್ಕೃತಿಯ ಬಗ್ಗೆ ಸಂಕುಚಿತವಾಗಿ
Read More

ಧರ್ಮಸ್ಥಳ ವಿವಾದ…ಮೈಸೂರಿನಲ್ಲೂ ಮಹೇಶ್ ತಿಮ್ಮರೋಡಿ ಸಭೆ…?ಎರಡು ವರ್ಷಗಳ ಹಿಂದಿನ ಫೋಟೋ ವೈರಲ್…

ಮೈಸೂರು,ಆ29,Tv10 ಕನ್ನಡ ಧರ್ಮಸ್ಥಳದ ವಿಚಾರವಾಗಿ ಮಹೇಶ್ ತಿಮ್ಮರೋಡಿ ಮೈಸೂರಿನಲ್ಲೂ ಸಭೆ ನಡೆಸಿದ್ದ ಬಗ್ಗೆ ಗುಮಾನಿ ವ್ಯಕ್ತವಾಗಿದೆ.ಸದ್ಯ ಮೈಸೂರು ಹುಣಸೂರು ರಸ್ತೆಯಲ್ಲಿರುವ ಸರ್ಕಾರಿ ಅತಿಥಿ ಗೃಹದ ಮುಂಭಾಗ ನಿಂತಿರುವ 2 ವರ್ಷದ ಹಿಂದಿನ ಪೋಟೋ ವೈರಲ್ ಆಗಿದೆ.ಪ್ರವೀಣ್ ಎಂಬುವರುಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡಿದ್ದಾರೆ.ಅಂದು ತಿಮ್ಮರೋಡಿ ಜೊತೆಗಿದ್ದ ವಸಂತ್ ಗಿಳಿಯಾರ್ ಕಾಣಿಸಿಕೊಂಡಿದ್ದಾರೆ.ಇಂದು ತಿಮ್ಮರೋಡಿ ವಿರುದ್ದ ಹಾಗೂ ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ.ಅಣ್ಣನ ಜೊತೆ ಎರಡು ವರ್ಷದ ಹಿಂದೆ ಸತ್ಯಶೋಧನೆ ಆರಂಭದ ದಿನ ಅಂತಾ
Read More

ಕಡಿಮೆ ದರದಲ್ಲಿ ಸಿಮೆಂಟ್,ಕಬ್ಬಿಣ ಕೊಡಿಸುವ ಆಮಿಷ…2.30 ಕೋಟಿ ಪಂಗನಾಮ…ರಾತ್ರೋ ರಾತ್ರಿ ಎಸ್ಕೇಪ್…ದಂಪತಿ ವಿರುದ್ದ FIR…

ಮೈಸೂರು,ಆ28,Tv10 ಕನ್ನಡ ಕಡಿಮೆ ದರದಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಕೊಡಿಸುವುದಾಗಿ ನಂಬಿಸಿದ ದಂಪತಿ 16 ಮಂದಿಗೆ 2,30,85,000/- ವಂಚಿಸಿ ಪರಾರಿಯಾದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ವಂಚನೆಗೆ ಒಳಗಾದ 16 ಮಂದಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ರಾತ್ರೋ ರಾತ್ರಿ ದಂಪತಿ ಮನೆ ಹಾಗೂ ಮಳಿಗೆ ಬೀಗ ಹಾಕಿ ಎಸ್ಕೇಪ್ ಆಗಿದೆ. ಶ್ರೀರಾಂಪುರದಲ್ಲಿರುವ ಶುಭಂ ಸ್ಟೀಲ್ಸ್ ಅಂಡ್ ಸಿಮೆಂಟ್ಸ್ ಮತ್ತು ಬಿಲ್ಡರ್ಸ್ ಸಂಸ್ಥೆಯ
Read More

ಮಹಿಳಾ ಪೌರಕಾರ್ಮಿಕರಿಗೆ ಬಾಗಿನ…ಗೌರಿ ಗಣೇಶ ಹಬ್ಬದ ಅಂಗವಾಗಿ ಕಾರ್ಯಕ್ರಮ…

ಮಹಿಳಾ ಪೌರಕಾರ್ಮಿಕರಿಗೆ ಬಾಗಿನ…ಗೌರಿ ಗಣೇಶ ಹಬ್ಬದ ಅಂಗವಾಗಿ ಕಾರ್ಯಕ್ರಮ… ಮೈಸೂರು,ಆ22,Tv10 ಕನ್ನಡ ಅಥರ್ವ ಲೈಫ್ ಸ್ಕಿಲ್ಸ್ ಫೌಂಡೇಶನ್ ಹಾಗೂಕರುಣೆ ಸೇವಾ ಟ್ರಸ್ಟ್ ವತಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಅರಮನೆಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ ನೀಡಿ ಗೌರವಿಸಲಾಯಿತು.ಅರಿಶಿಣ -ಕುಂಕುಮ, ಸೀರೆ, ಬಳೆ ಮೊರದ ಬಾಗಿನ ನೀಡಲಾಯಿತು.ಇದೇ ವೇಳೆ ಮಾತನಾಡಿದಕರುಣೆ ಸೇವಾ ಟ್ರಸ್ಟ್ ಅಧ್ಯಕ್ಷರಾದ ರುಕ್ಮಿಣಿಮೈಸೂರಿನ ಅರಮನೆ ಸುಂದರವಾಗಿ ಹಾಗೂ ಸ್ವಚ್ಛವಾಗಿ ಕಾಣಲು ಪೌರಕಾರ್ಮಿಕರ ಶ್ರಮ ಹೆಚ್ಚು.ಅಂಥವರನ್ನು
Read More

ಸರ್ಕಾರಿ ಬಸ್ ಗಳ ಮೇಲೆ ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮಕ್ಕೆ ಒತ್ತಾಯ…ಬಿಜೆಪಿ ಯುವ ಮೋರ್ಚಾ ಆಗ್ರಹ…

ಮೈಸೂರು,ಆ20,Tv10 ಕನ್ನಡ ಮತಗಳ್ಳತನ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಬಸ್ ಗಳ ಮೇಲೆ STOP ಮತ ಕಳ್ಳತನ ಎಂಬ ಒಕ್ಕಣೆ ಇರುವ ಸ್ಟಿಕ್ಕರ್ ಗಳನ್ನ ನಿನ್ನೆ ಅಂಟಿಸಿ ಪ್ರತಿಭಟನೆ ನಡೆಸಲಾಗಿತ್ತು.ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ರವರ ನೇತೃತ್ವದಲ್ಲಿ ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆದಿತ್ತು.ಕಾಂಗ್ರೆಸ್ ಕಾರ್ಯವನ್ನ ಖಂಡಿಸಿರುವ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ಯರು ಇಂದು ಕೆಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು ಸ್ಟಿಕ್ಕರ್ ಅಂಟಿಸಲು
Read More

ಪಬ್ ನಲ್ಲಿ ಕಿರಿಕ್ ಪ್ರಕರಣ…ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್…ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ…

ಪಬ್ ನಲ್ಲಿ ಕಿರಿಕ್ ಪ್ರಕರಣ…ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್…ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ… ಮೈಸೂರು,ಆ18,Tv10 ಕನ್ನಡ ಪಬ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ಮಾಡಿದ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್ ಆಗಿದ್ದಾರೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.ಚಾಮುಂಡಿಬೆಟ್ಟದ ತಪ್ಪಲಿನ ಜೆಸಿ ನಗರದ ಪಬ್ ಒಂದಕ್ಕೆ ತೆರಳಿ ಕುಡಿದ ಮತ್ತಿನಲ್ಲಿ ಸಿಬ್ಬಂದಿಗಳ ಜೊತೆ ಜಗಳವಾಡಿದ್ದ ವಿಡಿಯೋ ವೈರಲ್ ಆಗಿತ್ತು.ಅವಾಚ್ಯ ಶಬ್ದಗಳನ್ನ ಬಳಸಿ ಆವಾಜ್ ಹಾಕಿದ್ದರು.ಈ
Read More

ಕುಡಿತಕ್ಕೆ ಹಣ ನೀಡದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಆರೋಪಿ ಅಂದರ್…

ಮೈಸೂರು,ಆ17,Tv10 ಕನ್ನಡ ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.ಪತ್ನಿ ಗಾಯಿತ್ರಿ ರವರನ್ಮ ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ ಅತಿಥಿಯಾಗಿದ್ದಾನೆ. ಈ ಹಿಂದೆ ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿದ್ದ.ಜೊತೆಗೆ ಕುಡಿತದ ಚಟಕ್ಕೆ ದಾಸನಾಗಿದ್ದ.ಕೆಲಸವಿಲ್ಲದೆ ಅಲೆಯುತ್ತಿದ್ದ ಪಾಪಣ್ಣ ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ.ಪಾಪಣ್ಣ ಮಗಳ ಮದುವೆಯನ್ನ
Read More

ಗ್ರಾ.ಪಂ.ಗೆ ಬೀಗ ಜಡಿದು ಆಕ್ರೋಷ…ಕೃಷಿ ಸಚಿವರ ತವರು ಕ್ಷೇತ್ರದಲ್ಲಿ ಘಟನೆ…ಬಿಂಡಿಗನವಿಲೆ ಹೋಬಳಿ ನಿವಾಸಿಗಳ ಸಿಟ್ಟು…

ಮಂಡ್ಯ,ಆ14,Tv10 ಕನ್ನಡ ಕೃಷಿ ಸಚಿವರ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲವೆಂದು ಆರೋಪಿಸಿ ನಾಗಮಂಗಲ ತಾಲೂಕು ಬಿಂಡಿಗನವಿಲೆ ಹೋಬಳಿಯ ಹೊನ್ನಾವರದ ಜನ ಗ್ರಾಮಪಂಚಾಯ್ತಿಗೆ ಬೀಗ ಜಡಿದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಹೊನ್ನಾವರ ಗ್ರಾಮದ ವಾರ್ಡ್ ನಂಬರ್ 2ರ ನಿವಾಸಿಗಳು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.ಗ್ರಾಮ ಸಭೆ ನಡೆಯುವಾಗ ಏಕಾಏಕಿ ಗ್ರಾಮ ಪಂಚಾಯ್ತಿಗೆ ಬೀಗ ಹಾಕಿ ಸಿಟ್ಟು ಪ್ರದರ್ಶಿಸಿದ್ದಾರೆ.ಚರಂಡಿ ಇಲ್ಲ, ವಿದ್ಯುತ್ ದೀಪ ಇಲ್ಲ, ರಸ್ತೆ ಇಲ್ಲ, ನಲ್ಲಿಯಲ್ಲಿ ನೀರು ಸರಿಯಾಗಿ ಬರಲ್ಲ.ಯಾರೊಬ್ಬರೂ ನಮ್ಮ ಸಮಸ್ಯೆಗಳಿಗೆ ಪರಿಹಾರ
Read More

ರೌಡಿ ಶೀಟ್ ಕ್ಲೋಸ್ ಮಾಡುವಂತೆ ಪೊಲೀಸರಿಗೆ ಬೆದರಿಕೆ…ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನ…ಮೈಮೇಲೆ ಡೀಸಲ್ ಸುರಿದುಕೊಂಡ ರೌಡಿ ಶೀಟರ್…

ಮೈಸೂರು,ಆ14,Tv10 ಕನ್ನಡ ರೌಡಿ ಶೀಟ್ ಕ್ಲೋಸ್ ಮಾಡುವಂತೆ ಒತ್ತಾಯಿಸಿ ರೌಡಿಶೀಟರ್ ಒಬ್ಬ ವಿಜಯನಗರ ಪೊಲೀಸ್ ಠಾಣೆಯಲ್ಲೇ ಡೀಸೆಲ್ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬೋಗಾದಿ ನಿವಾಸಿ ಸ್ವಾಮಿ.ಎಸ್.ಪೊಲೀಸರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್.ಈತನ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೆಲವು ಪ್ರಕರಣಗಳಿದ್ದ ಕಾರಣ ರೌಡಿಶೀಟ್ ಓಪನ್ ಮಾಡಲಾಗಿದೆ.ಮುಂಬರುವ ಗಣೇಶ ಹಬ್ಬ ಹಾಗೂ ದಸರಾ ಹಿನ್ನಲೆ ರೌಡಿಶೀಟರ್ ಗಳಿಂದ ಮುಚ್ಚಳಿಕೆ ಬರೆಸಿಕೊಳ್ಳುವ ನಿಯಮಗಳಿದ್ದು ಇದರಂತೆ ಪೊಲೀಸರು ಈತನ ಮನೆಗೆ ತೆರಳಿದ್ದಾರೆ.ಇದನ್ನೇ
Read More