TV10 Kannada Exclusive

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಸುತ್ತಮುತ್ತಲ ರೈತರಲ್ಲಿ ಆತಂಕ ಹೆಚ್ಚಾಗಿದೆ.ವ್ಯಾಘ್ರನ ಸೆರೆ ಹಿಡಿಯುವಂತೆ ರೈತರು ಅಗ್ರಹಿಸಿದ್ದಾರೆ.ಅರಣ್ಯ ಇಲಾಖೆ ಅಲರ್ಟ್ ಆಗಿದೆ.ಕೆಲ ದಿನಗಳಿಂದ ಹುಕಿ ಹೆಡಿಯಾಲ ಸುತ್ತಮುತ್ತಲ ಈರೇಗೌಡನ ಹುಂಡಿ ಅಂಜನಾಪುರ ಗ್ರಾಮಗಳ ಬಳಿ ಕಾಣಿಸಿಕೊಂಡಿದೆ.ಜಮೀನಿನಲ್ಲಿ ಬಾರಿ ಗಾತ್ರದ ಹೆಜ್ಜೆ ಗುರುತುಗಳು ಕಂಡುಬಂದಿತ್ತು. ಅರಣ್ಯ ಇಲಾಖೆಯ ಎಸಿಎಫ್
Read More

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ. 2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿಧ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನ ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.30 ಲಕ್ಷ
Read More

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್‌ರವರು ಶಿವರಾಜ್ ಕುಮಾರ್ ಕುಟುಂಬಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು…
Read More

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ ಡ್ಯಾಂ ಬಳಿ ಅಲಂಕರಿಸಲಾಗಿದೆ.ಕನ್ನಂಬಾಡಿ ಕಟ್ಟೆ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ.ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನೆರವೇರಲಿದೆ.ಇಂದು 11.30ಕ್ಕೆ ಸಲ್ಲುವ ಅಭಿಜಿನ್ ಶುಭ ಮುಹೂರ್ತಲಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗುತ್ತದೆ.ಬಳಿಕ ಕಾವೇರಿ ಮಾತೆಗೆ ಪೂಜೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ
Read More

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷರಾದ ಕೇಶವಮೂರ್ತಿ ಎಂಬುವರು ಹಲ್ಲೆಗೆ ಒಳಗಾದವರು.ಮಂಡ್ಯ ಜಿಲ್ಲೆ ಸಬ್ಬನಗುಪ್ಪೆ ಗ್ರಾಮದ ಶ್ರೀಧರ್ ಆರಾಧ್ಯ ಹಲ್ಲೆ ನಡೆಸಿದವರು. ಪುರೋಹಿತ್ಯ ಮಾಡುವ ಕೇಶವಮೂರ್ತಿ ರವರು ಗೀತಾಮೃತ ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಿ ಗೋಶಾಲೆ,ವೇದಶಾಲೆ,ದೇವಸ್ಥಾನ ನಿರ್ಮಾಣ ಸೇರಿದಂತೆ ಸಮಾಜ ಸೇವೆ ಮಾಡುವ
Read More

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು ಬಂಧಿಸಿದ್ದಾರೆ. ಜಾನುವಾರು ಸಾಗಿಸುವ ವಾಹನಗಳ ತಡೆದು ಹಣ ವಸೂಲಿ ದಂಧೆಗಿಳಿದಿದ್ದ ಮಹಿಳೆ ಸೇರಿದಂತೆ ಏಳು ಮಂದಿ ತಂಡವನ್ನ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಕಟ್ಟೆಮಳಲವಾಡಿಯಲ್ಲಿಹಿಂದೂ ರಾಷ್ಟ್ರೀಯ ರಕ್ಷಣಾ ವೇದಿಕೆ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ
Read More

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ. ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.ಕೂಡಲೇ ಈ ಬಗ್ಗೆ ತೆನಿಖೆ ನಡೆಸುವುದಾಗಿ ತಿಳಿಸಿದ್ದಾರೆ…
Read More

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಆಯ್ಕೆಯಾದರು. ಅವರು ಮೈಸೂರು ಚೈಲ್ಡ್ ನ್ಯೂರೋಲಾಜಿ ಅಂಡ್ ರಿಹ್ಯಾಬಿಲಿಟೇಶನ್ ಸೆಂಟರ್ (MCNRC) ಸಂಸ್ಥಾಪಕರೂ ಹಾಗೂ ಪ್ರಸಿದ್ಧ ಕನ್ಸಲ್ಟೆಂಟ್ ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಆಗಿದ್ದಾರೆ. ಡಾ. ಅನುಷಾ ರಾಜ್ ರವರು ಡಾ. ಕೆ.ಎಚ್. ಬಸವರಾಜ್ (ಚರ್ಮ ತಜ್ಞ) ಹಾಗೂ ಡಾ. ಭಾರತೀ ಎಂ.ಬಿ
Read More

ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು…ವಿಧಿವಿಧಾನದಂತೆ ಅಂತ್ಯಕ್ರಿಯೆ…

ಮೈಸೂರು,ಜೂ24,Tv10 ಕನ್ನಡ ಹುಚ್ಚುನಾಯಿ ಕಡಿದು ಅನಾರೋಗ್ಯಕ್ಕೆ ಸಿಲುಕಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಮೃತಪಟ್ಟಿದೆ.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ಇಂದು ಮೃತಪಟ್ಟಿದೆ.ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿತ್ತು.ನಂತರ ನಾಯಿಯಂತೆ ಶಬ್ಧಮಾಡುತ್ತಾ ಸ್ಥಳೀಯರಿಗೆ ಭೀತಿ ಸೃಷ್ಟಿಸಿತ್ತು.ಗ್ರಾಮದ ಬಸವನಿಗೆ ಸ್ಥಳೀಯರು ಕಟ್ಟಿಹಾಕಿ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವ ಇಂದು ಮೃತಪಟ್ಟಿದೆ.ಮಹಾಲಿಂಗೇಶ್ವರ ದೇವಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಇಂದು ಸಂಜೆ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಲಿದೆ…
Read More

ಡ್ರಗ್ಸ್ ಮಾರಾಟಕ್ಕೆ ಯತ್ನ…ತೃತೀಯಲಿಂಗಿ ಅಂದರ್…MDMA ವಶ…

ಮೈಸೂರು,ಜೂ24,Tv10 ಕನ್ನಡ ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 4 ಗ್ರಾಂ 10 ಮಿಲೀ MDMA ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಸೈಯದ್ ನೂರುಲ್ಲಾ@ಇಮ್ರಾನ್@ಲಕ್ಷ್ಮಿ ಬಂಧಿತ ತೃತೀಯ ಲಿಂಗಿ.ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೋಲೀಸರು ದಾಳಿ ನಡೆಸಿದಾಗ ತೃತೀಯಲಿಂಗಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ.ಘಟನೆ ಸಂಭಂಧ ಸಿಸಿಬಿ ಠಾಣೆ ಪೊಲೀಸರು ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More