TV10 Kannada Exclusive

ಬೇಕರಿ ಪೀಠೋಪಕರಣಗಳು ಧ್ವಂಸ ಪ್ರಕರಣ…7 ಮಂದಿ ವಿರುದ್ದ FIR ದಾಖಲು…ನ್ಯಾಯಾಲಯದ ಆದೇಶದಂತೆ ಕ್ರಮ…

ನಂಜನಗೂಡು,ಮೇ29,Tv10 ಕನ್ನಡ ಬೇಕರಿಯೊಂದರ ಪೀಠೋಪಕರಣಗಳನ್ನ ಕಿಡಿಗೇಡಿಗಳು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ನಂಜನಗೂಡು ತಾಲೂಕು ಹುರಾ ಗ್ರಾಮದಲ್ಲಿ ಬೇಕರಿಯೊಂದರ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದ ಆರೋಪದ ಹಿನ್ನಲೆ ನ್ಯಾಯಾಲಯ ನೀಡಿದ ಆದೇಶದಂತೆ FIR ದಾಖಲಿಸಲಾಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುರಾ ಗ್ರಾಮದ ಕಾಡಯ್ಯ,ಶಿವಮೂರ್ತಿ,ಶಶಿಧರ್,ಕುಮಾರ್,ಕಮಾಲ್ ಕುಮಾರ್,ಪ್ರವೀಣ್ ಕುಮಾರ್ ಹಾಗೂ ವರುಣ ಎಂಬುವರ ಮೇಲೆ ಪ್ರಕರಣ
Read More

ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ಮೈಸೂರು,ಮೇ29,Tv10 ಕನ್ನಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸುದ್ದಿಯಾಗಿದ್ದಾರೆ.ಆಡಳಿತ ತರಬೇತಿ ಸಂಸ್ಥೆಯ ವಸ್ತುಗಳನ್ನು ತೆಗೆದುಕೊಂಡ ಹೋದ ವಿಚಾರ ಮುನ್ನಲೆಗೆ ಬಂದಿದೆ.ವಸ್ತುಗಳನ್ನು ಹಿಂದಿರುಗಿಸದ ಹಿನ್ನೆಲೆ ಸಂಬಳದಲ್ಲಿ ಹಣ ಕಡಿತಗೊಳಿಸುವಂತೆಆಡಳಿತ ತರಬೇತಿ ಸಂಸ್ಥೆ ಜಂಟಿ‌ ನಿರ್ದೇಶಕರು ಪತ್ರ ಬರೆದಿದ್ದಾರೆ.ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ರೋಹಿಣಿ ಸಿಂಧೂರಿಜಿಲ್ಲಾಧಿಕಾರಿ ಕಚೇರಿ ಅಧಿಕೃತ ನಿವಾಸದಲ್ಲಿ ವಾಸಕ್ಕೂ ಮುನ್ನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಾಸ್ತವ್ಯ ಹೂಡಿದ್ದರು.ಅಲ್ಲಿಂದ ಅಧಿಕೃತ ನಿವಾಸಕ್ಕೆ ತೆರಳಿದ್ದ ವೇಳೆ ಆಡಳಿಯ ತರಬೇತಿ ಸಂಸ್ಥೆಯ ನಿವಾಸದ
Read More

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆ…ಮೈಸೂರು ಯುವಕ ರನರ್ ಅಪ್…

ಮೈಸೂರು,ಮೇ29,Tv10 ಕನ್ನಡ ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಮೈಸೂರು ಯುವಕ ರನ್ನರ್ ಅಪ್ ಆಗಿದ್ದಾರೆ.ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್ ಸ್ಪರ್ಧೆಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಿತು.ಮೈಸೂರಿನ ಎನ್ ಎಸ್ ಯೋಗ ಗೌಡ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.ಯೋಗ ಗೌಡ ಮೈಸೂರಿನ ವಕೀಲರಾದ ಡಿ ಎಸ್ ಶಿವಪ್ರಕಾಶ್ ಹಾಗೂ ಎಚ್ ಕೆ ಲತಾ ದಂಪತಿ ಪುತ್ರರಾಗಿದ್ದಾರೆ.ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೈಸೂರಿಗೆ ಕೀರ್ತಿ ತಂದಿದ್ದಾರೆ…
Read More

ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಮೇ28,Tv10 ಕನ್ನಡ ಮಹಿಳೆಯ ಮೇಲೆ ಕಾಮದೃಷ್ಟಿಯಿಂದ ನೋಡುತ್ತಿದ್ದ ಕಿರಾತಕನೊಬ್ಬ ಆಕೆಯ ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಪರಿಣಾಮ ಮನನೊಂದ ಗೃಹಿಣಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(40) ಮೃತ ಗೃಹಿಣಿ.ಘಟನೆಗೆ ಸಂಭಂಧಿಸಿದಂತೆ ಕಾಮದೃಷ್ಟಿ ಬೀರಿ ಅಪಪ್ರಚಾರ ಮಾಡಿದ ದಡದಹಳ್ಳಿ ಗ್ರಾಮದ ನಿವಾಸಿ ನಾಗರಾಜು ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಹಾಗೂ ಕುಟುಂಬ ದಡದಹಳ್ಳಿ ಗ್ರಾಮದ ನಿವಾಸಿಗಳು.ಅದೇ ಗ್ರಾಮದ ನಾಗರಾಜು ಆಗಾಗ
Read More

ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ…ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಧಾನ…

ಮೈಸೂರು,ಮೇ27,Tv10 ಕನ್ನಡ ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರಾಂಡ್ ಹೋಟೆಲ್ ನಲ್ಲಿಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ನ 18ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆ ಬಿ ಲಿಂಗರಾಜು (ಕೈಗಾರಿಕಾ ಕ್ಷೇತ್ರ), ಡಾಕ್ಟರ್ ವೈ ಡಿ ರಾಜಣ್ಣ (ಸಾಹಿತ್ಯ ಕ್ಷೇತ್ರ), ಆರ್ ಕೃಷ್ಣ (ಮಾಧ್ಯಮ ಕ್ಷೇತ್ರ), ಶ್ರೀಧರ್ ಸಿ ಎಂ (ಸೈನಿಕ ಕ್ಷೇತ್ರ), ಶಿವಪ್ರಸಾದ್
Read More

ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ…ವಾಚ್ ಟವರ್ ನಲ್ಲಿ ಮೃತದೇಹ ಪತ್ತೆ…

ಎಚ್.ಡಿ.ಕೋಟೆ,ಮೇ26,Tv10 ಕನ್ನಡ ಮೇಕೆಗಳನ್ನ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿನಡೆಸಿ ಹೊತ್ತೊಯ್ದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಸಮೀಪ ನಡೆದಿದೆ.ಶನಿವಾರ ಸಂಜೆ ಘಟನೆ ನಡೆದಿದ್ದು ವಾಚ್ ಟವರ್ ಮೇಲೆ ಮಹಿಳೆಯ ಮೃತ ದೇಹ ದೊರೆತಿದೆ.ಎನ್.ಬೇಗೂರು ಸಮೀಪದ ಮಾಳದ ನಿವಾಸಿ ಚಿಕ್ಕಿ(48) ಮೃತ ದುರ್ದೈವಿ.ಮಹಿಳೆ ಜೊತೆ ಇದ್ದ ವ್ಯಕ್ತಿಯಿಂದ ಮಾಹಿತಿ ಬೆಳಕಿಗೆ ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ
Read More

ಆನ್ ಲೈನ್ ಧೋಖಾ…ಅಕೌಂಟ್ ಬ್ಲಾಕ್ ಅನ್ನೋ ಮೆಸೇಜ್ ಗೆ 1.90 ಲಕ್ಷ ಕಳೆದುಕೊಂಡ ಮಹಿಳೆ…

ಮೈಸೂರು,ಮೇ25,Tv10 ಕನ್ನಡ ಕೆವೈಸಿ ವಿಚಾರದಲ್ಲಿ ಅಕೌಂಟ್ ಬ್ಲಾಕ್ ಆಗಿದೆ ಎಂಬ ಮೆಸೇಜ್ ಗೆ ಸ್ಪಂದಿಸಿದ ಮಹಿಳೆಯೊಬ್ಬರು 1.90 ಲಕ್ಷ ಹಣ ಕಳೆದುಕೊಂಡಿದ್ದಾರೆ.ಮಹದೇವಪುರ ನಿವಾಸಿ ಲತಾ ಎಂಬುವರೇ ಹಣ ಕಳೆದುಕೊಂಡವರು.ತಮ್ಮ ಮೊಬೈಲ್ ಗೆ ಅನಾಮಧೇಯ ನಂಬರ್ ನಿಂದ ಮೆಸೇಜ್ ಬಂದಿದೆ.ಅದ್ರಲ್ಲಿ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ,ಕೆವೈಸಿ ವಿಚಾರದಲ್ಲಿ ಎಂದು ನಮೂದಾಗಿದೆ.ಮಾಹಿತಿ ಬೇಕಿದ್ದಲ್ಲಿ ಕರೆ ಮಾಡಿ ಎಂಬ ಮೆಸೇಜ್ ಗೆ ಸ್ಪಂದಿಸಿದ ಲತಾ ರವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ.ವಂಚಕ ಕೇಳಿದಂತೆ ಆಧಾರ್
Read More

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82
Read More

ಬದುಕಿರುವ ವ್ಯಕ್ತಿಗೆ ಮರಣಪ್ರಮಾಣ ಪತ್ರ ಸೃಷ್ಠಿ…ವಿಎ,ಆರ್ ಐ,ಶಿರಸ್ತೇದಾರ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ನಂಜನಗೂಡು,ಮೇ25,Tv10 ಕನ್ನಡ ಬದುಕಿರುವ ವ್ಯಕ್ತಿಗೆ ಮೃತಪಟ್ಟಿರುವುದಾಗಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸಿದ ವ್ಯಕ್ತಿಗಳು ಹಾಗೂ ನಕಲಿ ದಾಖಲೆ ಸೃಷ್ಟಿಸಲು ಶಾಮೀಲಾದ ರೆವಿನ್ಯೂ ಇಲಾಖೆ ಅಧಿಕಾರಿಗಳ ವಿರುದ್ದ ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಓರ್ವ ಅಧಿಕಾರಿ ವಿರುದ್ದ ಇಲಾಖೆಯಿಂದ 1-4 ವಿಚಾರಣೆ ಆದೇಶ ಹೊರಡಿಸಲಾಗಿದೆ.ಅಲ್ಲದೆ ಮರಣ ಪ್ರಮಾಣ ಪತ್ರ ನೀಡಿದ ಅಂದಿನ ವಿಎ ಹಾಗೂ ಇಂದು  ಹೆಚ್.ಡಿ.ಕೋಟೆಯಲ್ಲಿ ಆರ್.ಐ.ಆಗಿ ಕರ್ತವ್ಯ
Read More

ಕಾರಿಗೆ ಸಿಲುಕಿ ಮಹಿಳೆ ಸಾವು…ಆತ್ಮಹತ್ಯೆ ಶಂಕೆ…

ಹುಣಸೂರು,ಮೇ24,Tv10 ಕನ್ನಡ ಚಲಿಸುತ್ತಿದ್ದ ಕಾರಿಗೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಣಸೂರಿನ ಜಡಗನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಮಹಿಳೆ ಸಾವು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.ಜಡಗನಕೊಪ್ಪಲು ಮುಖ್ಯರಸ್ತೆಯ ಮಧ್ಯದಲ್ಲಿ ನಿಂತ ಮಹಿಳೆ ಭಾರಿ ವಾಹನಗಳಿಗೆ ಸಿಲುಕಲು ಯತ್ನಿಸುತ್ತಿದ್ದಳೆಂದು ಹೇಳಲಾಗಿದೆ.ಲಾರಿಯೊಂದಕ್ಕೆ ಸಿಲುಕಬೇಕಿದ್ದ ಮಹಿಳೆ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡಿದ್ದಾಳೆ.ನಂತರ ಹಿಂದೆಯೇ ಬರುತ್ತಿದ್ದ ಕಾರಿಗೆ ಉದ್ದೇಶಪೂರ್ವಕವಾಗಿ ಸಿಲುಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದೆ.ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರನ್ನ ವಶಕ್ಕೆ ಪಡೆದಿದ್ದಾರೆ.ಮೃತಪಟ್ಟ ಮಹಿಳೆಯ ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ.ಪ್ರತ್ಯಕ್ಷದರ್ಶಿಯೊಬ್ಬರು ಮಹಿಳೆಯ
Read More