TV10 Kannada Exclusive

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ…

ಹಾಡು ಹಗಲು ರಸ್ತೆಯಲ್ಲಿ ಗಜರಾಜನ ಬಿಂದಾಸ್ ವಾಕ್… ಗ್ರಾಮಸ್ಥರಲ್ಲಿ ಆತಂಕ… ವಿರಾಜಪೇಟೆ,ಜೂ13,Tv10 ಕನ್ನಡ ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಗಜರಾಜ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಮೂಡಿಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆಯ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಟ್ರಂಗಡರವರ ಮನೆಗೆ ತೆರಳುವ ಸಂಪರ್ಕ ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡಿ ಸಂಚರಿಸಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಮಾಡಿದೆ. ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಕಾಫಿ ಗಿಡಗಳು ಸೇರಿದಂತೆ
Read More

ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಮಂಡ್ಯ,ಜೂ12,Tv10 ಕನ್ನಡ ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಗೆ ತೀವ್ರ ವಿರೋಧ ವ್ಯಕ್ತವಾಗಿದೆ.ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆದಿದೆ.ಕೆಆರ್ ಎಸ್ ಬೃಂದಾವನದ ಬಳಿ ಪ್ರತಿಭಟನೆ ನಡೆಸಿದ್ದಾರೆ.ವಿರೋಧದ ನಡುವೆಯೂ ಕಾವೇರಿ ಆರತಿಗೆ ಸರ್ಕಾರ ಸಿದ್ದತೆ ನಡೆಸುತ್ತಿರದೆ.ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಆರತಿಗೆ ಸಿದ್ದತೆ ಮಾಡಲಾಗುತ್ತಿದೆ.ಸರ್ಕಾರದ ನಡೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೂಡಲೇ ಕಾವೇರಿ ಆರತಿ ಯೋಜನೆ ಕೈಬಿಡಬೇಕು.ಈ ಯೋಜನೆಯಿಂದ ಐತಿಹಾಸಿಕ ಕೆಆರ್ ಎಸ್ ಡ್ಯಾಂಗೆ ಮಾರಕ
Read More

ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಇ ಆಫೀಸ್ ಕಚೇರಿ ಆರಂಭಕ್ಕೆ ಕ್ಷಣಗಣನೆ…ಸಿಬ್ಬಂದಿಗಳಿಗೆ ತರಬೇತಿ…

ಮೈಸೂರು,ಜೂ11,Tv10 ಕನ್ನಡ ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ ಆಫೀಸ್ ವ್ಯವಸ್ಥೆ ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ.2021 ರಲ್ಲೇ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಅನುಷ್ಠಾನಗೊಳಿಸಲು ಮೈಸೂರು ಅಭಿವೃದ್ದಿ ಪ್ರಾಧಿಕಾರ ಸನ್ನದ್ಧವಾಗುತ್ತಿದೆ.ಆಯುಕ್ತರಾದ ಕೆ.ಆರ್.ರಕ್ಷಿತ್ ರವರು ವಿಶೇಷ ಆಸಕ್ತಿ ವಹಿಸಿ ಸೌಲಭ್ಯಗಳನ್ನ ಕಲ್ಪಿಸಿದ್ದಾರೆ.ಇ ಆಫೀಸ್ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ತರಬೇತಿ ಆರಂಭವಾಗಿದೆ.ಇ ಆಫೀಸ್ ನೂಡಲ್ ಅಧಿಕಾರಿ ಹಾಗೂ ವಲಯಾಧಿಕಾರಿ ಸಂಪತ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ.ಎರಡು ದಿನಗಳ ಕಾಲ ತರಬೇತಿ
Read More

ಮಾನವೀಯತೆ ಮರೆತ ಸಚಿವ ಚೆಲುವರಾಯ ಸ್ವಾಮಿ…ಅಪಘಾತದಲ್ಲಿ ನರಳಾಡುತ್ತಿದ್ದ ವ್ಯಕ್ತಿಯನ್ನ ನೋಡುತ್ತಾ ನಿಂತ ಸಚಿವ…

ಮಂಡ್ಯ,ಜೂ9,Tv10 ಕನ್ನಡ ಅಪಘಾತದಲ್ಲಿ ಸಿಲುಕಿದ ವ್ಯಕ್ತಿ ರಸ್ತೆಯಲ್ಲಿ ನರಳಾಡುತ್ತಿದ್ದರೆ ನೆರವಿಗೆ ಬಾರದೆ ಅಸಹಾಯಕನಾಗಿ ನೋಡುತ್ತಾ ನಿಂತ ಸಚಿವ ಚೆಲುವರಾಯಸ್ವಾಮಿ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.ದೃಶ್ಯಗಳನ್ನ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡು ಟೀಕೆಗೆ ಗುರಿಯಾಗಿದ್ದಲ್ಲದೆ ಪೇಚಿಗೆ ಸಿಲುಕಿದ್ದಾರೆ.ಮೈಸೂರು ಬೆಂಗಳೂರು ಹೆದ್ದಾರಿ ಶ್ರೀರಂಗಪಟ್ಟಣ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸುಲಿಲುಕಿದ ವ್ಯಕ್ತಿ ನರಳಾಡುತ್ತಿದ್ದರು.ಅದೇ ವೇಳೆ ಅದೇ ದಾರಿಯಲ್ಲಿ ಬಂದ ಸಚಿವರು ನೆರವಿಗೆ ಧಾವಿಸದೆ ನೋಡುತ್ತಾ ನಿಂತರು.ರಸ್ತೆ ಬದಿ ವ್ಯಕ್ತಿ
Read More

MCP ಹಂಟರ್ಸ್ ಗೆ MPPL ಕಪ್…5 ನೇ ಆವೃತ್ತಿಗೆ ತೆರೆ…

ಮೈಸೂರು,ಜೂ5,Tv10 ಕನ್ನಡ ಮೈಸೂರು ಸಿಟಿ ಪೊಲೀಸ್ ಪ್ರೀಮಿಯರ್ ಲೀಗ್ ನ 5 ನೇ ಆವೃತ್ತಿಯ ಕಪ್ ಮೈಸೂರು ಸಿಟಿ ಪೊಲೀಸ್ ಹಂಟರ್ಸ್ ತಂಡಕ್ಕೆ ಒಲಿದಿದೆ.ಚಾಮುಂಡಿಬೆಟ್ಟದ ತಪ್ಪಲಿನ ಫೈರಿಂಗ್ ರೇಂಜ್ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಮೈಸೂರು ಸಿಟಿ ಪೊಲೀಸ್ ಬುಲ್ಸ್ ತಂಡವನ್ನ ಮಣಿಸಿದ ಮೈಸೂರು ಸಿಟಿ ಪೊಲೀಸ್ ಹಂಟರ್ಸ್ ತಂಡ MPPL ಕಪ್ ತನ್ನ ಮಡಿಲಿಗೇರಿಸಿಕೊಂಡಿದೆ. ಮೈಸೂರು ನಗರ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗಾಗಿ ಪ್ರತಿ ವರ್ಷ
Read More

ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಮೈಸೂರು,ಜೂ2,Tv10 ಕನ್ನಡ ಟ್ರಿಣ್ ಟ್ರಿಣ್ ಸೈಕಲ್ ಗಳು ತುಂಬಿರಬೇಕಾದ ಸ್ಟ್ಯಾಂಡ್ ಇದೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.ಪರಿಸರ ಉಳಿವಿಗಾಗಿ ತಂದ ಯೋಜನೆ ನೈರ್ಮಲ್ಯಕ್ಕೆ ಕಾರಣವಾಗುತ್ತಿದೆ.ಸೈಕಲ್ ಗಳು ತುಂಬಿರಬೇಕಿದ್ದ ಸ್ಥಳದಲ್ಲಿ ಕುರಿಗಳನ್ನ ತುಂಬಿದ್ದರೂ ಅಧಿಕಾರಿಗಳ ಗಮನಕ್ಕೂ ಬಂದಿಲ್ಲ.ಸಿಎಂ ಸಿದ್ದರಾಮಯ್ಯ ರವರ ಮಹತ್ತರ ಯೋಜನೆ ಈ ಮೂಲಕ ಹಳ್ಳ ಹಿಡಿಯುವ ಸೂಚನೆ ತೋರಿಸುತ್ತಿದೆ. ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸಿದ್ದರಾಮಯ್ಯ ನವರು ಈ ಯೋಜನೆಯನ್ನ 2016 ರಲ್ಲಿ ಜಾರಿಗೆ ತಂದರು.ಪ್ರಾಯೋಗಿಕವಾಗಿ ಆರಂಭವಾದ ಯೋಜನೆಗೆ ಸಾರ್ವಜನಿಕರೂ ಸಹ
Read More

ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಮೈಸೂರು,ಮೇ31,Tv10 ಕನ್ನಡ ಗಣಪತಿ ಸಚ್ಚಿದಾನಂದ ಶ್ರೀಗಳ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.ಶಾಸಕ ಟಿಎಸ್. ಶ್ರೀವತ್ಸ ರವರು ಶೋಭಾಯಾತ್ರೆಯ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.ದತ್ತಸೇನೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಜೂನ್ 1ರಂದು ಬೆಳಗ್ಗೆ 10ಘಂಟೆಗೆ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವರೆಗೂ ಬೃಹತ್ ಶೋಭಾಯತ್ರೆ ಸಾಗಲಿದೆ.ಶೋಭಾಯಾತ್ರೆಯಲ್ಲಿ ಮಂಗಳವಾದ್ಯ ನಾದಸ್ವರ, ವೇದಬಳಗ, ಭಜನಾಮಂಡಳಿ, ಸ್ವಾಮೀಜಿ ರವರ ಸಾರೋಟು ರಥ ಸಾಗಲಿದ್ದು ಮೈಸೂರಿನ ಸಂಘ ಸಂಸ್ಥೆಗಳು
Read More

ಮೈಸೂರು ಮಹಾಸಂಸ್ಥಾನದ 27 ನೇ ಮಹಾರಾಜರಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷಕ್ತರಾಗಿ ಇಂದಿಗೆ 10 ವರ್ಷ…ಶುಭಾಶಯಗಳ ಸುರಿಮಳೆ…

ಮೈಸೂರು,ಮೇ29,Tv10 ಕನ್ನಡ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಯದುಕುಲದ ಅರಸರಾಗಿ ಹಾಗೂ 27 ನೇ ಮಹಾರಾಜರಾಗಿ ಪಟ್ಟಾಭಿಷಿಕ್ತರಾಗಿ ಇಂದಿಗೆ 10 ವರ್ಷ ಪೂರ್ಣಗೊಂಡಿದೆ.28 ಮೇ 2015 ರಂದು ಅರಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಯದುವೀರ್ ರವರಿಗೆ ಪಟ್ಟಾಭಿಷೇಕ ನೆರವೇರಿಸಲಾಗಿತ್ತು.ನಾಡಿನ ಹಾಗೂ ದೇಶವಿದೇಶಗಳಿಂದ ಆಗಮಿಸಿದ್ದ ಗಣ್ಯರು ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.ಇದೀಗ ಹತ್ತು ವರ್ಷ ಪೂರೈಸಿರುವ ಯದುವೀರ್ ರವರಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ.ಈ ಶುಭ ಸಂದರ್ಭದಲ್ಲಿ ಯದುಕುಲದ ಅರಸರಿಗೆ ತಾಯಿ ಚಾಮುಂಡೇಶ್ವರಿ ಸಕಲ
Read More

ಮೈಸೂರು ಉಪವಿಭಾಗಾಧಿಕಾರಿಯಾಗಿ ಆರ್.ಮಂಜುನಾಥ್ ನೇಮಕ…

ಮೈಸೂರು,ಮೇ29,Tv10 ಕನ್ನಡ ಮೈಸೂರು ಉಪವಿಭಾಗಾಧಿಕಾರಿಯಾಗಿ ಆರ್.ಮಂಜುನಾಥ್ ರನ್ನ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಈ ಹಿಂದೆ ಕಬಿನಿ ಜಲಾಶಯ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಉಪವಿಭಾಗಾಧಿಕಾರಿಯಾಗಿ ಇಂದಿನ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿರುವ ಕೆ.ಆರ್.ರಕ್ಷಿತ್ ಹುದ್ದೆ ಅಲಂಕರಿಸಿದ್ದರು.ಕೆ.ಆರ್.ರಕ್ಷಿತ್ ರವರ ಜಾಗಕ್ಕೆ ಆರ್.ಮಂಜುನಾಥ್ ರನ್ನ ಪ್ರಭಾರ ಆಗಿ ನೇಮಕ ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ…
Read More

ಸಾಲಬಾಧೆ:ರೈತ ಆತ್ಮಹತ್ಯೆ…

ಮಂಡ್ಯ,ಮೇ28,Tv10 ಕನ್ನಡ ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮತ್ಯೆಗೆ ಶರಣಾದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮರಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರೈತ ಮಂಜೇಗೌಡ (45) ಆತ್ಮತ್ಯೆಗೆ ಶರಣಾದವರು.ಮಂಡ್ಯದ ಕೆ.ಆರ್.ಪೇಟೆ ತಾ. ಸಾಧುಗೋನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ.ವಿವಿಧ ಬ್ಯಾಂಕಿನಲ್ಲಿ ಸಾಲ, ಖಾಸಗಿ ವ್ಯಕ್ತಿಗಳಿಂದಲೂ 5 ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದರು.ಸಾಲದ ಸುಳಿಯಲ್ಲಿ ಸಿಲುಕಿ ಮನನೊಂದು ನೇಣಿಗೆ ಶರಣಾಗಿದ್ದಾರೆ.ಘಟನಾ ಸ್ಥಳಕ್ಕೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ
Read More