TV10 Kannada Exclusive

ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು,ನ20,Tv10 ಕನ್ನಡ ಹುಣಸೂರು ಟೌನ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳವು ಆರೋಪಿ ಬಂಧನವಾಗಿದೆ.ಬಂಧಿತನಿಂದ 1.72 ಲಕ್ಷ ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ಬೆಲವತ್ತ ಗ್ರಾಮದ ಸೈಯದ್ ಉಸ್ಮಾನ್(35) ಬಂಧಿತ ಆರೋಪಿ.ಹುಣಸೂರಿನ ಬಜಾರ್ ರಸ್ತೆ,ಜೆ.ಎಲ್.ಬಿ.ರಸ್ತೆ,ಹಳೇ ಸೇತುವೆ ರಸ್ತೆಯ ಮೆಡಿಕಲ್ ಶಾಪ್ ಗಳಲ್ಲಿ ಕನ್ನ ಕಳುವು ಪ್ರಕರಣಗಳು ನಡೆದಿತ್ತು.ಈ ಸಂಭಂಧ ಖದೀಮನ ಬಂಧನಕ್ಕೆ ಹುಣಸೂರು ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಜಾಲ ಬೀಸಿದ್ದರು.ಖತರ್ನಾಕ್ ಕಳ್ಳ ಪೊಲೀಸರು ಹಣೆದ
Read More

ರಸ್ತೆ ಬದಿ ವ್ಯಾಪಾರಸ್ಥರಿಂದ ಕಿರಿಕಿರಿ ತಪ್ಪಿಸಿ…ದಸರಾ ವಸ್ತುಪ್ರದರ್ಶನ ಅಧ್ಯಕ್ಷರಿಗೆ ಗ್ರಾಹಕ ಪಂಚಾಯತ್ ನಿಂದ ಮನವಿ…

ಮೈಸೂರು,ನ19,Tv10 ಕನ್ನಡ ದಸರಾ ವಸ್ತುಪ್ರದರ್ಶನದಲ್ಲಿ ಅನಧಿಕೃತ ರಸ್ತೆಬದಿ ವ್ಯಾಪಾರಸ್ಥರಿಂದ ಪ್ರವಾಸಿಗರಿಗೆ ಹಾಗೂ ಗ್ರಾಹಕರಿಗೆ ಆಗುತ್ತಿರುವ ತೊಂದರೆ ಕಿರುಕುಳ, ತಪ್ಪಿಸಬೇಕೆಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ರವರಿಗೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನಿಂದ ಇಂದು ಮನವಿ ನೀಡಲಾಯಿತು. ದಸರಾ ವಸ್ತುಪ್ರದರ್ಶನಕ್ಕೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ, ಮಳಿಗೆಗಳ ವ್ಯಾಪಾರಸ್ಥರು ಕೂಡ ಲಕ್ಷಾಂತರ ಹಣ ವ್ಯಯಿಸಿ 3 ತಿಂಗಳು ವ್ಯಾಪಾರಕ್ಕೆಂದು ಶ್ರಮ ವಹಿಸುತ್ತಾರೆ, ಆದರೆ ಕರ್ನಾಟಕ ವಸ್ತುಪ್ರದರ್ಶನದ ಕಾರ್ಯನಿರ್ವಾಹಣಾಧಿಕಾರಿ
Read More

ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ಮೈಸೂರು,ನ19,Tv10 ಕನ್ನಡ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಮುಡಾದಿಂದ ಬದಲಿ ನಿವೇಶನ ಪಡೆದ ಆರೋಪದ ಹಿನ್ನಲೆ ಲೋಕಾಯುಕ್ತ ತೆನಿಖೆಮಹತ್ವದ ಘಟ್ಟ ತಲುಪಿದೆ.ಮತ್ತೆ ಎ4 ದೇವರಾಜುಗೆ ಲೋಕಾಯುಕ್ತ ನೋಟಿಸ್ ನೀಡಿದ್ದಾರೆ.ನಾಳೆ 20/11/2024ರಂದು ಲೋಕಾಯುಕ್ತ ಕಚೇರಿಗೆ ಆಗಮಿಸವಂತೆ ನೋಟಿಸ್ ನೀಡಲಾಗಿದೆ.ದೇವರಾಜು ಸ‌.ನಂ 464ರ ಜಮೀನು ಮಾಲೀಕ.ಈಹಿಂದೆ ಪೂರ್ತಿ ದಿನ ದೇವರಾಜು ವಿಚಾರಣೆ ಮಾಡಿದ್ದ ಲೋಕಾಯುಕ್ತಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ.ಹಿಂದಿನ ಮುಡಾ ಆಯುಕ್ತ ಕಾಂತರಾಜು ಹಾಗೂ ಮಾಜಿ ಅಧ್ಯಕ್ಷ ಡಿ
Read More

ಮೊದಲ ಪತ್ನಿ ಇದ್ದರೂ ಲೇಡೀಸ್ ಪಿಜಿ ಓನರ್ ನ ಬಲೆಗೆ ಬೀಳಿಸಿದ…ಗರ್ಭಿಣಿ ಮಾಡಿ 9 ಲಕ್ಷಕ್ಕೆ ಉಂಡನಾಮ…ಉಂಡೂ ಹೋದ ಕೊಂಡೂ

ಮೈಸೂರು,ನ19,Tv10 ಕನ್ನಡ ಮೊದಲನೇ ಹೆಂಡತಿ ಜೊತೆ ಸಂಸಾರ ನಡೆಸುತ್ತಿದ್ದರೂ ಲೇಡೀಸ್ ಪಿಜಿ ಓನರ್ ಜೊತೆ ಪ್ರೀತಿಸುವ ನಾಟಕವಾಡಿ ಮದುವೆ ಮಾಡಿಕೊಂಡ ಭೂಪ ಆಕೆಯನ್ನ ಗರ್ಭಿಣಿ ಮಾಡಿ ಸುಮಾರು 9 ಲಕ್ಷ ಹಣಕ್ಕೆ ಉಂಡೆನಾಮ ಇಟ್ಟು ವಂಚಿಸಿದ ಪ್ರಕರಣವೊಂದು ಮೈಸೂರಿನ ವಿವಿ ಮೊಹಲ್ಲಾದಲ್ಲಿ ಬೆಳಕಿಗೆ ಬಂದಿದೆ.ಈ ಸಂಭಂಧ ವಂಚನೆಗೆ ಇಳಗಾದ ಗೃಹಿಣಿ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪತಿ,ಅತ್ತೆ,ಮಾವನ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ನಿವಾಸಿ ಭರತ್ ಗೌಡ ಹಾಗೂ ಈತನ ತಂದೆ
Read More

ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಮೈಸೂರು,ನ18,Tv10 ಕನ್ನಡ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ರವರ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ಅಗ್ರಹಾರದಲ್ಲಿ ನೆರವೇರಿತು.ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಡಳಿತ ಮಂಡಳಿ ಸದಸ್ಯರು ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಿದುರು. ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್,ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್
Read More

ದಂಪತಿ ನಡುವೆ ಜಗಳ…ಪತ್ನಿ ಸಾವಿನಲ್ಲಿ ಅಂತ್ಯ…

ಮೈಸೂರು,ನ18,Tv10 ಕನ್ನಡ ಪ್ರೀತಿಸ ಮದುವೆಯಾದ ದಂಪತಿ ಮಧ್ಯೆ ಶುರುವಾದ ಜಗಳ ಪತ್ನಿ ಸಾವಿನಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆಯಲ್ಲಿ ನಡೆದಿದೆ.ಪತ್ನಿಕೋಮಲ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಎರಡು ವರ್ಷದ ಹಿಂದೆ ರಾಜು ಎಂಬಾತನನ್ನ ಕೋಮಲ ಪ್ರೀತಿಸಿ ಮದುವೆಯಾಗಿದ್ದರು.ನಿನ್ನೆ ತಡ ರಾತ್ರಿ ಗಂಡ ಹೆಂಡತಿ ನಡುವೆ ಗಲಾಟೆ ಆಗಿದೆ.ಮನನೊಂದ ಕೋಮಲ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸ್ಥಳಕ್ಕೆ ಎನ್.ಆರ್. ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ…
Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆ ಅಕ್ರಮ ಬಡ್ಡಿ ದಂಧೆ ಆರೋಪ..ದಾಖಲೆಗಳ ಪರಿಶೀಲನೆಗೆ ಘನ ನ್ಯಾಯಾಲಯ ಆದೇಶ…

ಮೈಸೂರು,ನ18,Tv10 ಕನ್ನಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ಬಡ್ಡಿ ವ್ಯವಹಾರದ ದಾಖಲೆಗಳನ್ನ ಕೂಲಂಕುಶವಾಗಿ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಘನ ನ್ಯಾಯಾಲಯ ನೀಡಿರುವ ಆದೇಶವನ್ನ ಪೊಲೀಸ್ ಇಲಾಖೆ ಎತ್ತಿಹಿಡಿದಿದೆ.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳ ದಾಖಲೆಗಳನ್ನ ಪರಿಶೀಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ರವಾನಿಸಲಾಗಿದೆ.ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಕುರಿತಂತೆ ಮಾಹಿತಿ ರವಾನಿಸಿ ಅಗತ್ಯ ಕಾನೂನು ಕ್ರಮ
Read More

ಸಕ್ಕರೆನಾಡು ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ.ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ.

ಘಟನೆಯಲ್ಲಿ ಡ್ರೈವರ್ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವು.ಮಂಡ್ಯ ಹೊರವಲಯದ ಬೆಂ-ಮೈ ನೂತನ ಹೈವೇನಲ್ಲಿ ಘಟನೆ.ಚಾಲಕ ಸೈಯದ್ ಮಂಡಲ್, ಕ್ಲೀನರ್ ಸಿರಾಜುದ್ದೀನ್ ದುರ್ಮರಣ.ಡಿಕ್ಕಿ ರಭಸಕ್ಕೆ ಲಾರಿ ಮುಂಭಾಗ ಸಂಪೂರ್ಣ ಜಖಂ.ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿಗಳುಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ.ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More

ರಸ್ತೆಬದಿ ನಿಂತಿದ್ದ ಬೈಕ್ ಹಾಗೂ ಪಾದಚಾರಿಗಳಿಗೆ ಅಪರಿಚಿತ ಕಾರು ಢಿಕ್ಕಿ ಓರ್ವ ಮಹಿಳೆ ಸಾವು…ಐವರಿಗೆ ಗಂಭೀರ ಗಾಯ…

ನಂಜನಗೂಡು,ನ15,Tv10 ಕನ್ನಡರಸ್ತೆ ಬದಿ ನಿಂತಿದ್ದ ಬೈಕ್‌ಗಳು ಹಾಗೂ ಪಾದಾಚಾರಿಗಳಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದುಐವರು ಗಂಭೀರವಾಗಿ ಗಾಯಗೊಂಡ ಘಟನೆನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ (32) ಮೃತ ದುರ್ದೈವಿ.ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು.ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು
Read More

ಕುವೆಂಪುನಗರ ಪೊಲೀಸರ ಭರ್ಜರಿ ಬೇಟೆ…ಖತರ್ನಾಕ್ ಮನೆಗಳ್ಳನ ಬಂಧನ…36.22 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ನ15,Tv10 ಕನ್ನಡ ಖತರ್ನಾಕ್ ಮನೆಗಳ್ಳನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 36.12 ಲಕ್ಷ ಮೌಲ್ಯದ 516 ಗ್ರಾಂ ಚಿನ್ನಾಭರಣ ಹಾಗೂ 10 ಸಾವಿರ ಮೌಲ್ಯದ 28.70 ಗ್ರಾಂ ಬೆಳ್ಳಿ ಪದಾರ್ಥ ಒಟ್ಟು 36.22 ಲಕ್ಷ ಮೌಲ್ಯದ ಪದಾರ್ಥಗಳನ್ನ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ಸಹ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ನಿವಾಸಿ ಪ್ರಸಾದ್ @ ಆಸಿಫ್ ಬಂಧಿತ ಆರೋಪಿ.ಮತ್ತೋರ್ವ ಆರೋಪಿ ಮಹಮದ್ ಮುನ್ನಾ ತಲೆ ಮರೆಸಿಕೊಂಡಿದ್ದಾನೆ. ಶ್ರೀರಂಗಪಟ್ಟಣ ತಾಲೂಕು
Read More