TV10 Kannada Exclusive

ರೇಡಿಯೆಂಟ್ ಆಸ್ಪತ್ರೆ ಉಸ್ತುವಾರಿ ಡಾ.ರಾಜೀವ್ ವಿರುದ್ದ ವಂಚನೆ ಆರೋಪ…ಟ್ರಸ್ಟಿಗಳಿಂದ FIR ದಾಖಲು

… ಮೈಸೂರು,ಫೆ4,Tv10 ಕನ್ನಡ ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರೇಡಿಯೆಂಟ್ ಆಸ್ಪತ್ರೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಡಾ.ರಾಜೀವ್ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಟ್ರಸ್ಟಿಗಳ ಗಮನಕ್ಕೆ ಬಾರದಂತೆ ಮತ್ತೊಂದು ಸಂಸ್ಥೆ ಜೊತೆ ರೇಡಿಯೆಂಟ್ ಆಸ್ಪತ್ರೆಯನ್ನ ವಿಲೀನ ಮಾಡಿ ಹಣ ಪಡೆದುಕೊಂಡಿದ್ದಾರೆಂದು ಆರೋಪಿಸಿ ವಂಚನೆ ಪ್ರಕರಣ ದಾಖಲಿಸಲಾಗಿದೆ.ಟ್ರಸ್ಟಿಗಳಾದ ಬಿ.ಜಗದೀಶ್,ಹರಿಪ್ರಕಾಶ್ ಶರ್ಮ ಹಾಗೂ ಸರಿತಾ ಶರ್ಮ ರವರು ಡಾ.ರಾಜೀವ್ ವಿರುದ್ದ FIR ದಾಖಲಿಸಿದ್ದಾರೆ. 1997 ರಲ್ಲಿ ಬಿ.ಜಗದೀಶ್ ರವರು ಡಾ.ಬಸಪ್ಪ ಮತ್ತು
Read More

ಆನೆ ತುಳಿತಕ್ಕೆ ವ್ಯಕ್ತಿ ಬಲಿ ಪ್ರಕರಣ…15 ಲಕ್ಷ ಪರಿಹಾರ ಚೆಕ್ ವಿತರಣೆ…

ಹುಣಸೂರು,ಫೆ3,Tv10 ಕನ್ನಡ ಆನೆ ತುಳಿತಕ್ಕೆ ಮೃತಪಟ್ಟ ಚೆಲುವಯ್ಯ ರವರ ಮನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ 15 ಲಕ್ಷ ಪರಿಹಾರದ ಚೆಕ್ ವಿತರಿಸಿದರು.ಇಂದು ಬೆಳಿಗ್ಗೆ ವೀರನಹೊಸಳ್ಳಿಯ ಜಮೀನಿನಲ್ಲಿ ಚೆಲುವಯ್ಯ ಕೆಲಸ ಮಾಡುತ್ತಿದ್ದ ವೇಳೆ ಧಿಢೀರ್ ಪ್ರತ್ಯಕ್ಷವಾದ ಸಲಗ ದಾಳಿ ನಡೆಸಿ ಬಲಿ ಪಡೆದಿತ್ತು.ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿ ಲಿಂಗರಾಜು ರವರು ಚೆಲುವಯ್ಯ ರವರ ಮನೆಗೆ ಭೇಟಿ ನೀಡಿ ಮೃತರ
Read More

ಹುಣಸೂರು: ಬೋನಿಗೆ ಬಿದ್ದ ಚಿರತೆ…ಅರಣ್ಯ ವಲಯಕ್ಕೆ ರವಾನೆ…

ಹುಣಸೂರು,ಫೆ2,Tv10 ಕನ್ನಡ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಚಿರತೆ ಬೋನಿಗೆ ಬಿದ್ದಿದೆ.ಸುಮಾರು ಎರಡು ವರ್ಷದ ಗಂಡು ಚಿರತೆ ಸೆರೆಯಾಗಿದೆ.ಹುಣಸೂರು ಅಗ್ನಿಶಾಮಕ ಠಾಣೆ ಬಳಿಗಿರೀಶ್ ಎಂಬುವವರ ಮನೆ ಬಳಿ ಕಾಣಿಸಿಕೊಂಡಿತ್ತು.ಅರಣ್ಯ ಇಲಾಖೆ ಸಿಬ್ಬಂದಿಗಳು ನಾಯಿ ಕಟ್ಟಿದ ಬೋನು ಇರಿಸಿದ್ದರು.ನಾಯಿ ಬೇಟೆಗೆ ಬಂದ ಚಿರತೆ ಬೋನಿಗೆ ಬಿದ್ದಿದೆ.ಸೆರೆ ಸಿಕ್ಕ ಚಿರತೆಗೆ ಚಿಪ್ ಅಳವಡಿಸಿ ನಾಗರಹೊಳೆ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ…
Read More

ನಿರ್ಲಕ್ಷ್ಯಕ್ಕೆ ಒಳಗಾದ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು…ಕಾಯಕಲ್ಪ ಒದಗಿಸುವರೇ ಅಧಿಕಾರಿಗಳು…?

ಮೈಸೂರು,ಫೆ1,Tv10 ಕನ್ನಡ ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣಗೊಂಡ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು ಸಂಪೂರ್ಣ ನಿರ್ಲಕ್ಯಕ್ಕೆ ಒಳಗಾಗಿದೆ.ಸ್ವಂತ ಕಟ್ಟಡಗಳನ್ನ ನಿರ್ಲಕ್ಷಿಸಿ ಬಾಡಿಗೆ ಕಟ್ಟಡಗಳನ್ನ ಆಶ್ರಯಿಸಿರುವ ಅಧಿಕಾರಿಗಳ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ ಆಕಾಶವಾಣಿ ಕಚೇರಿ ಬಳಿಯ ಚೆಲುವಾಂಬ ಪಾರ್ಕ್ ಮುಂಭಾಗ ಇರುವ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳ ಸ್ಥಿತಿ ಶೋಚನೀಯವಾಗಿದೆ.ಇಲ್ಲಿ ಮೂರು ಕಟ್ಟಡಗಳಿದೆ.ಎಲ್ಲವನ್ನೂ ನಿರ್ಲಕ್ಷಿಸಲಾಗಿದೆ.ತೋಟಗಾರಿಕೆ,ಆಶ್ರಯ ಇಲಾಖೆಗೆ ಸೇರಿದ ಎರಡು ಕಚೇರಿಗಳು ಹಾಗೂ ಖಾಲಿ ಬಿದ್ದಿರುವ ಒಂದು
Read More

ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಮೈಸೂರು ಕಾಪ್ಸ್…ಹಿಂಪಡೆದ ಪ್ರತಿಭಟನೆ…ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸೆ…

ಮೈಸೂರು,ಫೆ1,Tv10 ಕನ್ನಡ ಸಾರ್ವಜನಿಕರ ಸಮಸ್ಯೆಗೆ ಪೊಲೀಸರು ಸ್ಪಂದಿಸುವುದಿಲ್ಲ ಎಂಬ ಆರೋಪವನ್ನ ಹುಸಿ ಮಾಡುವ ಪ್ರಸಂಗವೊಂದು ಬೆಳಕಿಗೆ ಬಂದಿದೆ.ಪೊಲೀಸರ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದ ಸಂಸ್ಥೆಯೊಂದು ಕರೆ ನೀಡಿದ ಪ್ರತಿಭಟನೆಯನ್ನ ಹಿಂದಕ್ಕೆ ಪಡೆದು ಪೊಲೀಸ್ ಅಧಿಕಾರಿಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಪೊಲೀಸ್ ಕಾಪ್ ಗಳಿಗೆ ಧನ್ಯವಾದ ತಿಳಿಸಿ ಅವರ ಕಾರ್ಯವೈಖರಿಯನ್ನ ಶ್ಲಾಘಿಸಿದ್ದಾರೆ. ಕುವೆಂಪುನಗರ ಠಾಣೆ ನಿರೀಕ್ಷಕರಾದ ಅರುಣ್ ಹಾಗೂ ಕುವೆಂಪುನಗರ ಸಂಚಾರಿ ಠಾಣೆ ಉಪನಿರೀಕ್ಷಕರಾದ ಮದನ್ ಕುಮಾರ್ ಮೆಚ್ಚುಗೆಗೆ ಪಾತ್ರರಾದ ಕಾಪ್ಸ್.ಮೈಸೂರಿನ ವಿವೇಕಾನಂದ ನಗರ
Read More

ಕುಡುಕರ ಅಡ್ಡೆಯಾದ ಅಪೂರ್ಣಗೊಂಡ ಅಂಗನವಾಡಿ ಕೇಂದ್ರ…ಕುರಿದೊಡ್ಡಿ ಆಶ್ರಯ ಪಡೆದ ಮಕ್ಕಳು…

ಮೈಸೂರು,ಫೆ1,Tv10 ಕನ್ನಡ ಅಪೂರ್ಣಗೊಂಡ ಅಂಗನವಾಡಿ ಕೇಂದ್ರವೊಂದು ಕುಡುಕರ ಅಡ್ಡೆಯಾಗಿ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.ಮಕ್ಕಳಿಗರ ಪಾಠಪ್ರವಚನ ನಡೆಯಬೇಕಿದ್ದ ಸ್ಥಳದಲ್ಲಿ ಮಧ್ಯದ ಬಾಟಲಿಗಳು ಪ್ಯಾಕೆಟ್ ಗಳ ರಾಶಿ ತುಂಬಿ ಅಧಿಕಾರಿಗಳನ್ನ ಹಂಗಿಸುವಂತೆ ಮಾಡಿದೆ.ಅಂಗನವಾಡಿಯಲ್ಲಿ ಪಾಠ ಪ್ರವಚನ ಕೇಳಬೇಕಿದ್ದ ಮಕ್ಕಳು ಕುರಿದೊಡ್ಡಿ ಆಶ್ರಯ ಪಡೆದಿದ್ದಾರೆ. ಮೈಸೂರು ತಾಲೂಕು ಜಯಪುರ ಹೋಬಳಿ ಹನಗಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ದುಃಸ್ಥಿತಿ ಇದು.6 ವರ್ಷಗಳ ಹಿಂದೆ ಅಂಗನವಾಡಿಗಾಗಿ ಕಟ್ಟಡ ಕಾಮಗಾರಿ ಆರಂಭವಾಯಿತು.ಅದ್ಯಾವ ಕಾರಣವೋ ಗೊತ್ತಿಲ್ಲ ಅರ್ಧಕ್ಕೇ ಕಾಮಗಾರಿ ಸ್ಥಗಿತಗೊಂಡಿದೆ.ಮಕ್ಕಳ
Read More

ವಿಶ್ವ ಕ್ಯಾನ್ಸರ್ ಜಾಗೃತಿ ಸಪ್ತಾಹ…ಅಂಕೊಲಾಜಿ ಬಗ್ಗೆ ಮಹಿಳೆಯರಿಗೆ ಕಾರ್ಯಾಗಾರ…

ಮೈಸೂರು,ಫೆ1,Tv10 ಕನ್ನಡ ವಿಶ್ವ ಕ್ಯಾನ್ಸರ್ ಜಾಗೃತಿ ಸಪ್ತಾಹದ ಅಂಗವಾಗಿ ಇಂದು ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳೆಯರಿಗೆ ಅಂಕೋಲಾಜಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮೈಸೂರಿನ ಮರುಳೆೇಶ್ವರ ನೇಗಿಲಯೋಗಿ ಸೇವಾಭವನದಲ್ಲಿ ನಡೆದ ಕಾರ್ಯಕ್ರಮವನ್ನ ….ಉದ್ಘಾಟಿಸಿದರು.ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಸ್ತ್ರೀರೋಗಶಾಸ್ತ್ರದ ಆಂಕೊಲಾಜಿಯ ಕಾರ್ಯಾಗಾರದಲ್ಲಿ ತಿಳುವಳಿಕೆ ಮೂಡಿಸಲಾಯಿತು.ಕಾರ್ಯಾಗಾರದಲ್ಲಿ ಸ್ತ್ರೀರೋಗಶಾಸ್ತ್ರದ ಆಂಕೊಲಾಜಿಯು ಮಹಿಳೆಯರಿಗೆ ನಿರ್ದಿಷ್ಟವಾದ ಕ್ಯಾನ್ಸರ್ ಗಳಾದ ಗರ್ಭಕಂಠದ ಕ್ಯಾನ್ಸರ್, ಸ್ಥನದ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್, ವಾಲ್ವಾರ್ ಕ್ಯಾನ್ಸರ್
Read More

ಮುಡಾ ಆಯುಕ್ತರಾಗಿ ಅರುಳ್ ಕುಮಾರ್ ನೇಮಕ…ಹಾಲಿ ಆಯುಕ್ತರಿಗೆ ಸ್ಥಳ ಸೂಚಿಸದ ಸರ್ಕಾರ…

ಮೈಸೂರು,ಫೆ1,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಅರುಳ್ ಕುಮಾರ್ ರವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಳ್ ಕುಮಾರ್ ಮುಡಾ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಹಾಲಿ ಆಯುಕ್ತರಾಗಿದ್ದ ದಿನೇಶ್ ಕುಮಾರ್ ರವರಿಗೆ ಸ್ಥಳ ಇನ್ನೂ ಸೂಚಿಸಿಲ್ಲ…
Read More

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು…

ನಂಜನಗೂಡು,ಫೆ1,Tv10 ಕನ್ನಡ ವಿದ್ಯುತ್ ಸ್ಪರ್ಶಿಸಿ ಕಾರ್ಖಾನೆ ಕಾರ್ಮಿಕ ಮೃತಪಟ್ಟ ಘಟನೆ ನಂಜನಗೂಡಿನ ಇಮ್ಮಾವು ಕೈಗಾರಿಕಾ ಪ್ರದೇಶದ ವಸತಿ ನಿಲಯದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸುಜನ್ ರಾವ್(23) ಮೃತ ದುರ್ದೈವಿ. ರಿಷಿ ಕಾರ್ಖಾನೆಯ ಕಾರ್ಮಿಕರ ವಸತಿ ನಿಲಯದಲ್ಲಿ ಘಟನೆ ವಸತಿ ನಿಲಯದ ಬಳಿ ಬಂದಾಗ ವಿದ್ಯುತ್ ಕಂಬವೊಂದರ ಬಳಿ ಬಂದ ಸುಜನ್ ರಾವ್ ಗೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ…
Read More

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಪೆಡ್ಲರ್ ಗಳ ಬಂಧನ…40 ಲಕ್ಷ ಮೌಲ್ಯದ ಗಾಂಜಾ ವಶ…

ಮೈಸೂರು,ಜ31,Tv10 ಕನ್ನಡ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪೆಡ್ಲರ್ ಗಳನ್ನ ಬಂಧಿಸಲಾಗಿದ್ದು ಆರೋಪಿಗಳಿಂದ 40 ಲಕ್ಷ ಮೌಲ್ಯದ 85 ಕೆಜಿ 730 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಒಡಿಸ್ಸಾ ಮೂಲದ ರಾಜಿಕ್ ಮಲ್ಲಿಕ್ ಹಾಗೂ ಆಂಧ್ರ ಮೂಲದ ಜಾಫರ್ ಬಂಧಿತರು.ಸಾತಗಳ್ಳಿ ಒಂದನೇ ಹಂತದಲ್ಲಿ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.ಒರಿಸ್ಸಾದಿಂದ ರೈಲಿನಲ್ಲಿ ಗಾಂಜಾ ತಂದು ಮೈಸೂರಿನಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳು ಇದೀಗ ಪೊಲೀಸರ
Read More