TV10 Kannada Exclusive

ಮುಡಾದಲ್ಲಿ 50-50 ಅನುಪಾತದಲ್ಲಿ ಭಾರಿ ಗೋಲ್ ಮಾಲ್… ಅಕ್ರಮ ಆಸ್ತಿ ಹಂಚಿಕೆ ಆರೋಪ…ಸರ್ಕಾರದ ಅಧೀನ ಕಾರ್ಯದರ್ಶಿ ಯಿಂದ ಜಿಲ್ಲಾಧಿಕಾರಿಗೆ ನಿರ್ದೇಶನ…ತಪ್ಪಿತಸ್ಥರ

ಮೈಸೂರು,ನ9,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಿಯಮಬಾಹಿರವಾಗಿ ಭೂಮಾಲೀಕರಿಗೆ ಪರಿಹಾರ ನೀಡದೆ ಬದಲಾಗಿ ಅಭಿವೃದ್ದಿ ಹೊಂದಿದ ಸ್ಥಳಗಳಲ್ಲಿ 50-50 ಅನುಪಾತದಡಿಯಲ್ಲಿ ಆಸ್ತಿ ಹಂಚಿಕೆ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದಾಗಿ ಮುಡಾದ ಮಾಜಿ ಅಧ್ಯಕ್ಷರು,ಹಿಂದಿನ ಆಯುಕ್ತರು,ಹಾಲಿ ಆಯುಕ್ತರು,ವಿಶೇಷ ಭೂಸ್ವಾಧೀನಾಧಿಕಾರಿಗಳು,ವಿಶೇಷ ತಹಸೀಲ್ದಾರ್ ಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ನಟರಾಜ್ ಎಂಬುವರು ದೂರು ನೀಡಿದ್ದರು.ಈ ಕುರಿತಂತೆ ನಿಯಮಾನುಸಾರ ದಾಖಲೆಗಳನ್ನ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.ಆದರೆ ಇದುವರೆಗೆ ಸರ್ಕಾರಕ್ಕೆ ಯಾವುದೇ ವರದಿ ಸ್ವೀಕೃತವಾಗಿಲ್ಲ.ಜಿಲ್ಲಾಧಿಕಾರಿಗಳಿಗೆ
Read More

ರಾಮ ಭಕ್ತರನ್ನ ದಾರಿ ತಪ್ಪಿಸುತ್ತಿರುವ ಕಿಲಾಡಿಗಳು…ದೇವಾಲಯ ಪ್ರವೇಶಕ್ಕೆ ಸುಳ್ಳು ಮಾಹಿತಿ ನೀಡುವ ಚಾಲಾಕಿ ಸಿಬ್ಬಂದಿಗಳು…

ರಾಮನಗರ,ನ9,Tv10 ಕನ್ನಡ ರಾಮನಗರದ ರಾಮದೇವರ ಬೆಟ್ಟಕ್ಕೆ ತೆರಳುವ ಭಕ್ತರೇ ಹುಷಾರ್.ಸರಿಯಾದ ಸಮಯ ತಿಳಿದುಕೊಂಡು ಬೆಟ್ಟಕ್ಕೆ ಹೋಗಿ ಇಲ್ಲಾಂದ್ರೆ ಪ್ರವೇಶ ಧ್ವಾರದಲ್ಲಿರುವ ಅರಣ್ಯ ಇಲಾಖೆ ವತಿಯಿಂದ ಶುಲ್ಕ ವಸೂಲಿ ಮಾಡುವ ಸಿಬ್ಬಂದಿಗಳು ಶುಲ್ಕಕ್ಕಾಗಿ ಸುಳ್ಳು ಮಾಹಿತಿ ನೀಡಿ ಹಣ ವಸೂಲಿ ಮಾಡ್ತಾರೆ.ರಾಮನ ದರುಶನ ಪಡೆಯುವ ಹಂಬಲದಿಂದ 400 ಮೆಟ್ಟಿಲು ಹತ್ತಿ ಹೋಗುವ ಭಕ್ತರು ಮುಚ್ಚಿದ ಬಾಗಿಲನ್ನ ನೋಡಿ ನಿರಾಸೆಯಿಂದ ವಾಪಸ್ ಹಿಂದಿರುಗುತ್ತಾರೆ.ಕೇವಲ ಪ್ರವೇಶ ಶುಲ್ಕ ವಸೂಲಿಗಾಗಿ ಭಕ್ತರನ್ನ ಸಿಬ್ಬಂದಿಗಳು ದಾರಿ ತಪ್ಪಿಸುತ್ತಿದ್ದಾರೆ.
Read More

ಪಟಾಕಿ ಹಬ್ಬ…ನಿಯಮಗಳನ್ನ ಪಾಲಿಸುವಂತೆ ಜಿಲ್ಲಾಧಿಕಾರಿಗಳ ಆದೇಶ

ಮೈಸೂರು,ನ9,Tv10 ಕನ್ನಡ ಪಟಾಕಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ.ಪಟಾಕಿ ಬಳಕೆ ಹಾಗೂ ಮಾರಾಟಕ್ಕೆ ಜಿಲ್ಲಾಡಳಿತ ಕೆಲವು ನಿಭಂಧನೆಗಳನ್ನ ಜಾರಿಗೊಳಿಸಿದೆ.ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೆ ತರಲಾದ ನಿಯಮಗಳನ್ನ ಪಾಲಿಸದಿದ್ದಲ್ಲಿ ಅಂತಹವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 1.ಹಸಿರು ಪಟಾಕಿ ಹೊರತು ಪಡಿಸಿ ಇನ್ಯಾವುದೇ ಪಟಾಕಿಗಳ ಬಳಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ 2.ಹಸಿರು ಪಟಾಕಿಗಳ ಮೇಲೆ ಚಿಹ್ನೆ ಇರುತ್ತದೆ ಮತ್ತು ಕ್ಯೂ ಆರ್ ಕೋಡ್ ಇರುತ್ತದೆ.ಚಿಹ್ನೆ ಇಲ್ಲದ ಯಾವುದೇ ಪಟಾಕಿಗಳನ್ನ ಮಾರಾಟ
Read More

ಭಾರಿ ಮಳೆಗೆ ಉರುಳಿಬಿದ್ದ ವಿದ್ಯುತ್ ಕಂಬ…ತಪ್ಪಿದ ಅನಾಹುತ…

ಹುಣಸೂರು,ನ9,Tv10 ಕನ್ನಡ ನಿನ್ನೆ ರಾತ್ರಿ ಬಿದ್ದ ಭಾರಿ ಮಳೆಗೆ ವಿದ್ಯುತ್ ಕಂಬಗಳು ಉರುಳಿಬಿದ್ದ ಘಟನೆ ಹುಣಸೂರು ಜಿಲ್ಲೆಯ ಮರ್ದೂರು ಗ್ರಾಮದಲ್ಲಿ ನಡೆದಿದೆ.ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಪರಿಣಾಮ ಅನಾಹುತ ತಪ್ಪಿದಂತಾಗಿದೆ.ವಿದ್ಯುತ್ ತಂತಿ ಮೇಲೆ ಭಾರಿ ಮರ ಉರುಳಿದೆ ನಂತರ ಕಂಬಗಳು ಉರುಳಿದೆ.ವಾಹನಗಳು ಸಂಚರಿಸುವ ರಸ್ತೆಯ ಸಮೀಪ ಘಟನೆ ನಡೆದಿದೆ.ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.ವಿದ್ಯುತ್ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಉರುಳಿಬಿದ್ದ ಕಂಬಗಳನ್ನ ತೆರುವುಗೊಳಿಸುತ್ತಿದ್ದಾರೆ…
Read More

ಮುಡಾ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಕಾಮಗಾರಿ…ಕೂಡಲೇ ತೆರುವುಗೊಳಿಸುವಂತೆ ಮಾಲೀಕರಿಗೆ ನೋಟೀಸ್…

ಮೈಸೂರು,ನ8,Tv10 ಕನ್ನಡ ಮೈಸೂರು ನಗರ ದೇವರಾಜ ಮೊಹಲ್ಲಾ ಗೋಕುಲಂ 1 ನೇ ಹಂತದ ಕೆ.ಅರ್.ಎಸ್.ರಸ್ತೆಯ ಸ್ವತ್ತಿನ ಸಂಖ್ಯೆ 97 ರಲ್ಲಿ ಅನಧಿಕೃತವಾಗಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಸ್ತಿಯನ್ನ ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಹಾಗೂ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿ ಆರಂಭಿಸಿರುವ ವ್ಯಕ್ತಿಗಳಿಗೆ ವಲಯ 4 ರ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.ಕೂಡಲೇ ಒತ್ತುವರಿ ಜಾಗವನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಸದರಿ ಸ್ವತ್ತಿನಲ್ಲಿ ಹೊನ್ನಮ್ಮ ಮತ್ತು ನೀತಾ ಎಂಬುವರಿಗೆ ಪ್ರಾಧಿಕಾರದಿಂದ (76.00+35.50)/2*64.21 ವಿಸ್ತೀರ್ಣ ಮಂಜೂರಾಗಿದೆ.ಇದಕ್ಕೆ
Read More

ಮುಡಾ ಕಾರ್ಯದರ್ಶಿ ಸಹಿ ನಕಲು ಆರೋಪ…ಜಿಲ್ಲಾಧಿಕಾರಿಗೆ ದೂರು…

ಮೈಸೂರು,ನ5,Tv10 ಕನ್ನಡ ವರ್ಗಾವಣೆಗೊಂಡ ಮುಡಾ ಕಾರ್ಯದರ್ಶಿ ಎಸ್.ಕುಸುಮಕುಮಾರಿ ರವರ ಸಹಿ ನಕಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಫೋರ್ಜರಿ ಮಾಡಿರುವ ಶಂಕಿತ ಇಬ್ಬರು ಮುಡಾ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಸುಮ ಕುಮಾರಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕುಸುಮಕುಮಾರಿ ರವರನ್ನ ಸರ್ಕಾರ ವರ್ಗಾವಣೆ ಮಾಡಿದ್ದು ಇದೇ ಸ್ಥಳಕ್ಕೆ ಶೇಖರ್ ಜಿ.ಡಿ.ರವರನ್ನ ನಿಯುಕ್ತಿಗೊಳಿಸಲಾಗಿದೆ.ವರ್ಗಾವಣೆಯನ್ನ ಪ್ರಶ್ನಿಸಿ ಕುಸುಮಕುಮಾರಿ ರವರು ನ್ಯಾಯಾಲಯದ ಮೊರೆ ಹೋಗಿ ಆದೇಶಕ್ಕಾಗಿ ಕಾಯುತ್ತಿದ್ದಾರೆ.ಇಂತಹ ಸಂಧರ್ಭದಲ್ಲಿ ಪ್ರಾಧಿಕಾರದ ನೌಕರರಾದ ನಂದೀಶ್ ಹಾಗೂ
Read More

ಭಾರಿ ಮಳೆಗೆ ಕುಸಿದ ಕೊಟ್ಟಿಗೆ…ಮೂರು ಮೇಕೆ ಸಾವು…

ಹುಣಸೂರು,ನ7,Tv10 ಕನ್ನಡ ನಿನ್ನೆ ರಾತ್ರಿ ಬಿದ್ದ ಭಾರಿ ಮಳೆಗೆ ಕೊಟ್ಟಿಗೆ ಕುಸಿದುಬಿದ್ದ ಪರಿಣಾಮ ಮೂರು ಮೇಕೆಗಳು ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ವೆಂಕಟಶೆಟ್ಟಿ ಎಂಬುವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ.ಕೊಟ್ಟಿಗೆಯಲ್ಲಿ 20 ಕ್ಕೂ ಹೆಚ್ಚು ಕುರಿ ಮೇಕೆಗಳನ್ನ ಕಟ್ಟಿಹಾಕಲಾಗಿತ್ತು.ಮಳೆಗಾಳಿ ರಭಸಕ್ಕೆ ಕೊಟ್ಟಿಗೆ ಕುಸಿದುಬಿದ್ದಿದೆ.ಮೃತಪಟ್ಟ ಮೇಕೆಗಳ ಪೈಕಿ ಒಂದನ್ನ ನಾಯಿಗಳು ಎಳೆದೊಯ್ದಿವೆ ಎನ್ನಲಾಗಿದೆ.ಸ್ಥಳಕ್ಕೆ ಆರ್.ಐ ಹಾಗೂ ಪಿಡಿಓ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.ಮೇಕೆಗಳ ಸಾವಿಗೆ ಹಾಗೂ ಕೊಟ್ಟಿಗೆ ಪುನರ್
Read More

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ…

ಮೈಸೂರು,ನ7,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿರುವ ಶೇಕಡ 24.1 ಯೋಜನೆ ಅಡಿಯಲ್ಲಿನ 16 ಫಲಾನುಭವಿಗಳಿಗೆ ವಾರ್ಡ್ ನಂ 55 ರಲ್ಲಿ ನಗರಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್ ವಿತರಿಸಿದರು. ನಂತರ ಮಾತನಾಡಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಹಲವಾರು ಯೋಜನೆಗಳಿದ್ದು 24.1 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯೋಜನೆಗಳಾಗಿದ್ದು ಈ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರ, ವಿದ್ಯಾರ್ಥಿ ಪ್ರೋತ್ಸಾಹ ಧನ ಮತ್ತು ಇನ್ನು
Read More

ಸಿಡಿಲು ಬಡಿದು ಎರಡು ಹಸುಗಳು ಸಾವು… ಪ್ರಾಣಾಪಾಯದಿಂದ ರೈತ ಪಾರು…

ನಂಜನಗೂಡು,ನ5,Tv10 ಕನ್ನಡ ಸಿಡಿಲು ಬಡಿದ ಪರಿಣಾಮ ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚನ್ನಶೆಟ್ಟಿ ಎಂಬುವವರಿಗೆ ಸೇರಿದ ಹಸುಗಳಾಗಿದ್ದು ಜಮೀನಿನಲ್ಲಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ. ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಲಾಗಿತ್ತು.ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿದೆ.ಹಸುಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಚನ್ನಶೆಟ್ಟಿಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ…
Read More

ನನ್ನ ದೇಶ ನನ್ನ ಮಣ್ಣು…ದೆಹಲಿಯಲ್ಲಿ ಮೈಸೂರಿನ ವಿದ್ಯಾರ್ಥಿಗಳ ಹವಾ…

ಮೈಸೂರು,ನ5,Tv10 ಕನ್ನಡ ದೆಹಲಿಯಲ್ಲಿ ನಡೆದ ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದಲ್ಲಿ ಮೈಸೂರಿನ ವಿಧ್ಯಾರ್ಥಿಗಳು ಉತ್ಸಾಹದಿಂದ ಭಾಗಿಯಾಗಿದ್ದರು. ಅಕ್ಟೋಬರ್ 30 ಮತ್ತು 31 ರಂದು ನಡೆದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಮೈಸೂರಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವುದು,ಹೊಸ ವಿಚಾರಗಳನ್ನ ವಿನಿಮಯ ಮಾಡಿಕೊಳ್ಳುವುದು,ಹೊಸ ಪರಿಸರ ಕಂಡುಕೊಳ್ಳುವುದು, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು,ಕ್ರಿಯಾಶೀಲತೆಯನ್ನ ಬೆಳೆಸಿಕೊಳ್ಳುವುದು ಸೇರಿದಂತೆ ಹಲವು ಕೌಶಲ್ಯತೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಭಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗಿದ ವಿಧ್ಯಾರ್ಥಿಗಳನ್ನ
Read More