TV10 Kannada Exclusive

ಕಿಂಗ್ ವಿರಾಟ್ ಕೋಹ್ಲಿ ಹುಟ್ಟುಹಬ್ಬ…ಸಾಂಸಕೃತಿಕ ನಗರಿ ಮೈಸೂರಿನಲ್ಲಿ ಆಚರಣೆ…

ಮೈಸೂರು,ನ5,Tv10 ಕನ್ನಡ ಇಂದು ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಕಿಂಗ್ ವಿರಾಟ್ ಕೋಹ್ಲಿ ಹುಟ್ಟುಹಬ್ಬ.ಸಾಂಸಗಕೃತಿಕ ನಗರಿ ಮೈಸೂರಿನಲ್ಲಿ ಅಭಿಮಾನಿಗಳು ವಿಶಿಷ್ಟವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.ಯಾದವಗಿರಿಯ ಸ್ವಾಗತ್ ಕ್ರಿಕೆಟರ್ಸ್ ತಂಡದ ಸದಸ್ಯರು ವಿರಾಟ್ ಕೋಹ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ.ಸಾರ್ವಜನಿಕರಿಗೆ ತಿಂಡಿ ವಿತರಿಸುವ ಮೂಲಕ ಆಚರಿಸಿದ್ದಾರೆ. ಭಾರತ ತಂಡಕ್ಕೆ ಕೊಹ್ಲಿ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯ ಎಂದು ಕೊಂಡಾಡಿದ ಅಭಿಮಾನಿಗಳು ತಿಂಡಿ ವಿತರಿಸಿ ಸಂಭ್ರಮಿಸಿದ್ದಾರೆ.ಈಗಾಗಲೇ ದಾಖಲೆಗಳನ್ನ ಉಡೀಸ್ ಮಾಡಿರುವ ಕೋಹ್ಲಿ ಮತ್ತಷ್ಟು ದಾಖಲೆಗಳನ್ನ ನಿರ್ಮಿಸಿ
Read More

ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ…ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ಧಾಳಿ…

ಮೈಸೂರು,ನ4,Tv10 ಕನ್ನಡ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ ಎಂದುಮೈಸೂರಿನಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು.ನಾನೆ ಐದು ವರ್ಷ ಸಿಎಂ ಅಂದರುವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು.ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ ಎಂದು ವ್ಯಂಗ್ಯವಾಡಿದರು.ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ.ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು.ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ
Read More

ಸಚಿವರೊಂದಿಗೆ ಸಿಎಂ‌ ಸಿದ್ದು ಉಪಹಾರಕೂಟ…ಡಿಕೆಶಿ ಸೇರಿದಂತೆ ಹಲವರು ಭಾಗಿ…

ಬೆಂಗಳೂರು,ನ4,Tv10 ಕನ್ನಡ ಲೋಕಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ.ಮುಖ್ಯ ಮಂತ್ರಿಗಳ ಕಾವೇರಿ ನಿವಾಸದಲ್ಲಿ ಶನಿವಾರ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್ ಮೀಟಿಂಗ್ ಆಯೋಜಿಸಿದ್ದಾರೆ.ಉಪಾಹಾರಕೂಟದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಸಚಿರಾದ ಡಾ.ಜಿ.ಪರಮೇಶ್ವರ್, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೃಷ್ಣ ಭೈರೇಗೌಡ,ಸಂತೋಷ್ ಲಾಡ್, ಬೋಸರಾಜು ಸೇರಿ 15 ಸಚಿವರು ಭಾಗಿಯಾಗಿದ್ದಾರೆ.ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಇತ್ತೀಚಿನ ರಾಜಕೀಯ ಬೆಳವಣಿಗೆಗಳ
Read More

ಭಾರಿ ಮಳೆಗೆ ಕುಸಿದ ಮನೆ…ಪರಿಹಾರ ಮಂಜೂರಾತಿಯಲ್ಲಿ ತಾರತಮ್ಯ…ದಸರಾ ಪೈಲ್ವಾನ್ ಕುಟುಂಬ ಹೈರಾಣು…

ನಂಜನಗೂಡು,ನ3,Tv10 ಕನ್ನಡ ಎರಡು ವರ್ಷಗಳ ಹಿಂದೆ ಬಿದ್ದ ಭಾರಿ ಮಳೆಗೆ ಕುಸಿದ ಬಿದ್ದ ಮನೆಗೆ ಇನ್ನೂ ಪರಿಹಾರ ಬಂದಿಲ್ಲ.ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದು ಸುಸ್ತಾಗಿರುವ ದಸರಾ ಪೈಲ್ವಾನ್ ಖ್ಯಾತಿ ಗಾಂಧಿ ಕುಟುಂಬ ಹೈರಾಣವಾಗಿದೆ.ಪರಿಹಾರ ನೀಡದಿದ್ದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ನಂಜನಗೂಡು ತಾಲೂಕು ಕಳಲೆ ಗ್ರಾಮದ ಪೈಲ್ವಾನ್ ಗಾಂಧಿ ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.2022 ರಲ್ಲಿ ಬಿದ್ದ ಭಾರಿ ಮಳೆ ಮತ್ತು ಬಿರುಗಾಳಿಗೆ ಪೈ.ಗಾಂಧಿ ಕುಟುಂಬ ವಾಸವಿದ್ದ ಮಣ್ಣಿನ
Read More

ಮೊರಾರ್ಜಿ ವಸತಿ ಶಾಲೆ ಹಾಸ್ಟೆಲ್ ನ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ…

ಮೊರಾರ್ಜಿ ವಸತಿ ಶಾಲೆ ಹಾಸ್ಟೆಲ್ ನ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ… ಮೈಸೂರು,ನ3,10 ಕನ್ನಡ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹುಂಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಿಂದ ನಾಲ್ವರು ವಿಧ್ಯಾರ್ಥಿಗಳು ಕಾಣೆಯಾಗಿದ್ದಾರೆ.10ನೇ ತರಗತಿ ಓದುತಿದ್ದು ದಿನಾಂಕ 02/11/23 ರ ರಾತ್ರಿ 8 ಗಂಟೆಯಿಂದ ಕಾಣೆಯಾಗಿದ್ದಾರೆ.ಅಕ್ಷಯ್,ವೇಣುಗೋಪಾಲ್,ಮಾನ್ವಿತ್ ಹಾಗೂ ಅಮೋಘ್ ಕಾಣೆಯಾದ ವಿಧ್ಯಾರ್ಥಿಗಳು.ಈ ಕುರಿತಂತೆ ಜಯಪುರ ಪೊಲೀಸ್ ಠಾಣೆಯಲ್ಲಿ 197/23 ಕಲಂ 363 ಐಪಿಸಿ ರೀತ್ಯ ಪ್ರಕರಣ ದಾಖಲಾಗಿದ್ದು ಇವರ ಬಗ್ಗೆ ಮಾಹಿತಿ ದೊರೆತಲ್ಲಿ
Read More

ಹಿಟ್ ಅಂಡ್ ರನ್ …ಇಬ್ಬರು ಬೈಕ್ ಸವಾರರ ಸಾವು…

ಮೈಸೂರು,ನ3,Tv10 ಕನ್ನಡ ಬೈಕ್ ಹಾಗೂ ಬೊಲೆರೋ ನಡುವೆ ನಡೆದ ಅಪಘಾತದಲ್ಲಿಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಮೈಸೂರು ಪೊಲೀಸ್ ಬಡಾವಣೆ ರಿಂಗ್ ರಸ್ತೆ ಬಳಿ ನಡೆದಿದೆ.ಅಪಘಾತದ ನಂತರ ಬೊಲೆರೋ ವಾಹನ ಪರಾರಿಯಾಗಿದೆ.ಸಿದ್ದಾರ್ಥ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ…
Read More

ಬಿರುಗಾಳಿಗೆ ನೆಲಕಚ್ಚಿದ ಬಾಳೆ ಬೆಳೆ…ರೈತ ಹೈರಾಣು…

ಹುಣಸೂರು,ಅ30,Tv10 ಕನ್ನಡ ನಿನ್ನೆ ರಾತ್ರಿ ಬೀಸಿದ ಬಿರುಗಾಳಿಗೆಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾದ ಘಟನೆಹುಣಸೂರು ತಾಲ್ಲೂಕಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ಕೈಗೆ ಬಂದ ಬಾಳೆ ಬೆಳೆ ನೆಲಕಚ್ಚಿದೆ.ಬಿ.ಆರ್ ಕಾವಲು ಗ್ರಾಮದ ಚಿನ್ನಸ್ವಾಮಿ ಯವರಿಗೆ ಸೇರಿದ 2 ಎಕರೆ ಹಾಗೂ ಪ್ರಕಾಶ್ ರವರ 1 ಎಕರೆ ಬಾಳೆಬೆಳೆ ಸಂಪೂರ್ಣ ನಾಶವಾಗಿದೆ…
Read More

ಮೈಸೂರು:ಕೈಗಾರಿಕಾ ಪ್ರದೇಶದಲ್ಲಿ ಮುಳ್ಳುಹಂದಿ ರಕ್ಷಣೆ…ಅರಣ್ಯಕ್ಕೆ ರವಾನೆ…

ಮೈಸೂರು,ಅ30,Tv10 ಕನ್ನಡ ಮೈಸೂರಿನ ಹೆಬ್ಬಾಳು ಕೈಗಾರಿಕಾ‌ ಪ್ರದೇಶದಲ್ಲಿ ಕಾಣಿಸಿಕೊಂಡ ಮುಳ್ಳುಹಂದಿಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.ಮುಳ್ಳುಹಂದಿಯನ್ನ ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ.ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಸ್ಥಳೀಯರು ಸಾಥ್ ನೀಡಿದ್ದಾರೆ…
Read More

ಕರ್ನಾಟಕ ಹೆಸರಿಗೆ 50 ವರ್ಷ…ನವೆಂಬರ್ 1 ರಂದು ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಮನವಿ…

ಮೈಸೂರು,ಅ28,Tv10 ಕನ್ನಡ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ಪೂರ್ಣಗೊಂಡ ಹಿನ್ನಲೆ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ವಿಶೇಷವಾಗಿ ಆಚರಿಸಲು ಸರ್ಕಾರ ಉದ್ದೇಶಿಸಿದೆ.ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು ಕೆಲವು ತೀರ್ಮಾನಗಳನ್ನ ಕೈಗೊಳ್ಳಲಾಗಿದ್ದು ಸ್ವರೂಪಗಳನ್ನ ಸಿದ್ದಪಡಿಸಲಾಗಿದೆ. 1.ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಹಳದಿ ಬಣ್ಣದ ರಂಗೋಲಿ ಹಾಕಿ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ..ಉಸಿರಾಗಲಿ ಕನ್ನಡ
Read More

ಕಾಡಾನೆ ಅಟ್ಯಾಕ್…ಮುರಿದ ರೈತನ ಕಾಲು…

ನಂಜನಗೂಡು,ಅ28,Tv10 ಕನ್ನಡ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಬಲಗಾಲು ಮುರಿದ ಘಟನೆ ನಂಜನಗೂಡಿನ ಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.ಬೋಳಯ್ಯ(75) ಕಾಡಾನೆಯ ದಾಳಿಯಿಂದ ಕಾಲು ಮುರಿದುಕೊಂಡಿರುವ ರೈತ.ಸ್ಥಳಕ್ಕೆ ನಂಜನಗೂಡಿನ ಅರಣ್ಯ ಇಲಾಖೆಯ ಅಧಿಕಾರಿ ನಿಕಿತ್ ಮತ್ತು ಸಿಬ್ಬಂದಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ದೊಡ್ಡಯ್ಯ ಸೇರಿದಂತೆ ಇತರೆ ಸಿಬ್ಬಂದಿಗಳು ಗಾಯಳುನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಅರಣ್ಯ ಇಲಾಖೆ
Read More