TV10 Kannada Exclusive

ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ಮೈಸೂರು,ಅ6,Tv10 ಕನ್ನಡ ಈ ಬಾರಿಯ ದಸರಾ ಶ್ವಾನ ಪ್ರದರ್ಶನದಲ್ಲಿ ನಗರದ ಸಿದ್ದಾರ್ಥ ಬಡಾವಣೆಯ ಸುಜಾತ ಅಶ್ವಿನ್ ಅವರ ಐರಿಸ್ ತಳಿಯ ಶ್ವಾನವು ಪ್ರಥಮ ಸ್ಥಾನ ಗಳಿಸಿದೆ.ಕಳೆದ ಮೂರು ವರ್ಷಗಳಿಂದ ದಸರಾ ಶ್ಚಾನ ಪ್ರದರ್ಶನದಲ್ಲಿಪಾಲ್ಗೊಂಡು ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಈ ಶ್ವಾನಕ್ಕಿದೆ.ಇಂಗ್ಲೆಂಡ್ ಮೂಲದಿಂದ ದೆಹಲಿಯ ಬ್ರೀಡರ್ ಮೂಲಕ ತರಿಸಿಕೊಳ್ಳಲಾದ ಈ ತಳಿಯು ಬುದ್ದಿವಂತ ಶ್ವಾನವೆಂದೆಜನಪ್ರಿಯವಾಗಿದೆ. ರಾಜ್ಯಸಭಾ ಸದಸ್ಯರು ಇನ್ಫೋಸಿಸ್ ಪ್ರತಿಷ್ಠಾನದ ಶ್ರೀಮತಿ ಸುಧಾ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕೆಎಂಪಿಕೆ ಚಾರಿಟಬಲ್ಟ್ರಸ್ಟ್
Read More

ಪೊಲೀಸರಿಗೆ ಕಳಪೆ ಗುಣಮಟ್ಟ ಆಹಾರ ಪೂರೈಕೆ ಆರೋಪ…ಡಿಸಿಪಿ ಮುತ್ತುರಾಜ್ ಭೇಟಿ ಪರಿಶೀಲನೆ…

ಮೈಸೂರು,ಅ5,Tv10 ಕನ್ನಡ ದಸರಾ ಕರ್ತವ್ಯಕ್ಕಾಗಿ ಮೈಸೂರಿಗೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿದೆ ಎಂಬ ಆರೋಪ ಹಿನ್ನಲೆ ಇಂದು ಆಹಾರ ತಯಾರಿಸಲಾಗುತ್ತಿರುವ ಪೊಲೀಸ್ ಭವನಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದಸರಾ ಕರ್ತವ್ಯಕ್ಕಾಗಿ ಇತರೆಡೆಗಳಿಂದ ಸುಮಾರು 1700 ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದಾರೆ.ಕರ್ತವ್ಯ ನಿರತ ಪೊಲೀಸರಿಗೆ ಇಲಾಖೆಯಿಂದ ಆಹಾರ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡಲಾಗುತ್ತಿದೆ.ಸಧ್ಯ ನೀಡುತ್ತಿರುವ ಆಹಾರ ಕಳಪೆ ಗುಣಮಟ್ಟ ಎಂಬ
Read More

ಮುಡಾ ಹಗರಣ…ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು…ಸಂಸದ ಯದಯವೀರ್ ಆಗ್ರಹ…

ಮೈಸೂರು,ಅ2,Tv10 ಕನ್ನಡ ಮುಡಾ‌ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್ ಸೈಟ್ ವಾಪಸ್ ಕೊಟ್ಟಿರುವುದು ನೋಡಿದರೇ ತಪ್ಪಾಗಿದೆ ಅಂತಾನೆ ಅರ್ಥ. ಸೈಟ್ ಗೆ ಇರುವ ವ್ಯಾಲ್ಯುಗಿಂತ ಐದಾರು ಪಟ್ಟು ಹಣ ಕೇಳಿದರು. ಸಿಎಂ ಅವರ ಹೆಸರೇ ಖುದ್ದು‌ ಪ್ರಕರಣದಲ್ಲಿ ಕೇಳಿ ಬಂದಿದೆ. ಆ ಕಾರಣಕ್ಕೆ ಸೂಕ್ತ ತನಿಖೆ ಆಗಲೇಬೇಕು. ಸಿಎಂ ಸಿದ್ದರಾಮಯ್ಯ
Read More

ಮೈಸೂರಿನಲ್ಲಿ ಹನಿ ಟ್ರಾಪ್…ಪಾನಿಪುರಿ ವ್ಯಾಪಾರಿಯಿಂದ 75 ಸಾವಿರ ಸುಲಿಗೆ…ಮಹಿಳೆ,ರೌಡಿಶೀಟರ್ ಸೇರಿದಂತೆ ಐವರ ಬಂಧನ…

ಮೈಸೂರು,ಅ1,Tv10 ಕನ್ನಡ ಸಾಂಸ್ಕೃತಿಕ ನಗರಿಯಲ್ಲಿ ಹನಿಟ್ರಾಪ್ ಪ್ರಕರಣ ದಾಖಲಾಗಿದೆ.ಪಾನಿಪುರಿ ವ್ಯಾಪಾರಿಯೊಬ್ಬರನ್ನ ಟ್ರಾಪ್ ಮಾಡಿದ ತಂಡ 75 ಸಾವಿರ ಸುಲಿಗೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ. ನಂಜನಗೂಡಿನ ನಿವಾಸಿ ಪಾನಿಪುರಿ ವ್ಯಾಪಾರಿ ಮದನ್ ಲಾಲ್ ಗಯಾರಿ ಹನಿಟ್ರಾಪ್ ಗೆ ಒಳಗಾದವರು.ಕುಖ್ಯಾತ ರೌಡಿ ಶೀಟರ್ ಸೈಯದ್ ಶಾಬಾಜ್,ನೇಹಾ,ಸೈಯದ್ ಮುದಾಸರ್,ಕಫೀಉಲ್ಲಾ,ಸಿದ್ದಿಖ್ ಬಂಧಿತರು.ಡಕಾಯಿತಿ,ಕಳ್ಳತನ,ಸುಲಿಗೆ,ಕೊಲೆ ಬೆದರಿಕೆ,ವಾಹನ ಕಳುವು ಸೇರಿದಂತೆ 14 ಪ್ರಕರಣಗಳನ್ನ ಎದುರಿಸುತ್ತಿರುವ ಸೈಯದ್ ಶಾಬಾಜ್ ಕೃತ್ಯದ ರೂವಾರಿ.ನೇಹಾಳನ್ನ ಬಳಸಿಕೊಂಡ ಸೈಯದ್ ಶಾಬಾಜ್ ಪಾನಿಪುರ ವ್ಯಾಪಾರಿಯನ್ನ ಬುಟ್ಟಿಗೆ ಹಾಕಿಕೊಂಡಿದ್ದಾನೆ.ನೇಹಾ
Read More

ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಬಿದ್ದ ಕಾರು…ಚಾಲಕ ಪ್ರಾಣಾಪಾಯದಿಂದ ಪಾರು…

ಮೈಸೂರು,ಸೆ29,Tv10 ಕನ್ನಡ ಚರಂಡಿ ಕಾಮಗಾರಿಗಾಗಿ ತೆಗೆದ ಹಳ್ಳಕ್ಕೆ ಕಾರು ಉರುಳಿಬಿದ್ದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನ ಬಳಿ ನಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟ್ರಾಕ್ಟರ್ ಸಹಾಯದಿಂದ ಹಳ್ಳಕ್ಕೆ ಬಿದ್ದ ಕಾರನ್ನ ಹೊರ ತೆಗೆಯಲಾಗಿದೆ.ಕೆ.ಜಿ.ಕೊಪ್ಪಲು ಅಂಡರ್ ಬ್ರಿಡ್ಜ್ ಬಳಿ ಸರ್ಕಾರಿ ಶಾಲೆಯ ಹಿಂಬಾಗ ಘಟನೆ ನಡೆದಿದೆ. ಮೋರಿ ಕಾಮಗಾರಿಗಾಗಿ ಕಳೆದ 25 ದಿನಗಳ ಹಿಂದೆ ಭಾರಿ ಹಳ್ಳ ತೆಗೆಯಲಾಗಿದೆ. ನೆನ್ನೆ ಬಿದ್ದ ಭಾರಿ ಮಳೆಯಿಂದ ಮೋರಿ ಜಲಾವೃತವಾಗಿದೆ. ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮುನ್ನೆಚ್ಚರಿಕೆ
Read More

ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ…? ಯುವತಿಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ…

ಮೈಸೂರು,ಸೆ29,Tv10 ಕನ್ನಡ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿದ್ದ ಸ್ಥಳದ ಮೇಲೆ ಇಲವಾಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ನಡೆಯುತ್ತಿದ್ದ ಪಾರ್ಟಿಗೆ ಬ್ರೇಕ್ ಹಾಕಿ ಯುವತಿಯರು ಸೇರಿದಂತೆ 50 ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.30 ಕ್ಕೂ ಹೆಚ್ಚು ಕಾರುಗಳನ್ನ ವಶಪಡಿಸಿಕೊಂಡಿದ್ದಾರೆ.ಕೆ.ಆರ್.ಎಸ್.ಬ್ಯಾಕ್ ವಾಟರ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ಆಯೋಜಿಸಿತ್ತೆಂದು ಹೇಳಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಇದನ್ನ ವ್ಯಕ್ತಿಯೊಬ್ಬ ಪ್ರಚಾರ ಮಾಡಿದ್ದ ಹಿನ್ನಲೆ ಸುಮಾರು 25 ಕ್ಕೂ ಹೆಚ್ಚು ಜೋಡಿಗಳು
Read More

ಮಹಿಷ ಮಂಡಲೋತ್ಸವ…ಟೌನ್ ಹಾಲ್ ಹೊರತುಪಡಿಸಿ ಮೈಸೂರಿನಲ್ಲಿ ನಿಷೇಧಾಜ್ಞೆ…

ಮೈಸೂರು,ಸೆ28,Tv10 ಕನ್ನಡ ಮಹಿಷ ಮಂಡಲೋತ್ಸವ ಆಚರಣೆ ವಿಚಾರ ಹಿನ್ನಲೆಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ಟೌನ್ ಹಾಲ್ ಹೊರತುಪಡಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ಹೇರಲಾಗಿದೆ.ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಕಮಿಷನರ್ ಸೀಮಾ ಲಾಟ್ಕರ್ ಆದೇಶ ಜಾರಿ ಮಾಡಿದ್ದಾರೆ..
Read More

ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶ…ಆರೋಪಿ ಬಂಧನ…

ಹುಣಸೂರು,ಸೆ26,Tv10 ಕನ್ನಡ ಹುಣಸೂರು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ ಠಾಣಾ ವ್ಯಸಪ್ತಿಯ ಕಂಚಿನ ಕೆರೆ ಹೊಸಕೋಟೆ ಗ್ರಾಮದಲ್ಲಿ ಘಟನೆ ನಡೆದಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಮಹಾದೇವ ನನ್ನು ಬಂಧಿಸಿದ್ದಾರೆ.ಮನೆ ಹಿತ್ತಲಿನಲ್ಲಿ ಬೆಳೆದಿದ್ದ ಸುಮಾರು 3 ಕೆಜಿ 985 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಎನ್ ಮುನಿಯಪ್ಪ ರವರ ನೇತೃತ್ವದಲ್ಲಿ ರತ್ನಪುರಿ ಗ್ರಾಮದ ಪಶು ವೈದ್ಯಾಧಿಕಾರಿಗಳಾದ ಡಾ.ಗಿರೀಶ್ ರವರು,ಪಂಚಾಯತ್
Read More

ನಾಡಹಬ್ಬ ದಸರಾ:ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಆಹ್ವಾನ…

ಬೆಂಗಳೂರು,ಸೆ26,Tv10 ಕನ್ನಡ ನಾಡಹಬ್ಬ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಸಿಇಓ ಗಾಯತ್ರಿ, ಅಪರ ಜಿಲ್ಲಾಧಿಕಾರಿ ಶಿವರಾಜ್ ಮತ್ತಿತರರ ಅಧಿಕಾರಿಗಳ ನಿಯೋಗವು ವಿಧಾನಸೌಧದಲ್ಲಿ ಇಂದು ಆಹ್ವಾನಿಸಿದರು…
Read More

ನಾಡಹಬ್ಬ ದಸರಾ:ಸಿಎಂ ಸಿದ್ದರಾಮಯ್ಯ ಗೆ ಅಧಿಕೃತ ಆಹ್ವಾನ…

ಬೆಂಗಳೂರು,ಸೆ26,Tv10 ಕನ್ನಡ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೂಡಿ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಲಾಯಿತು.ಈ ಸಂಧರ್ಭದಲ್ಲಿಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಉಪಸ್ಥಿತರಿದ್ದರು…
Read More