TV10 Kannada Exclusive

ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಮೈಸೂರು,ಮೇ31,Tv10 ಕನ್ನಡ ಇಂದಿನಿಂದ 2024-25 ನೇ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದೆ.ರಜೆ ಮುಗಿಸಿ ಮುಂದಿನ ತರಗತಿಗಳಿಗೆ ತೆರಳುತ್ತಿರುವ ವಿಧ್ಯಾರ್ಥಿಗಳು ಹೊಸ ಹುರುಪಿನಿಂದ ಸಮವಸ್ತ್ರಗಳನ್ನ ಧರಿಸಿ ಶಾಲೆಗಳಿಗೆ ತೆರಳಿದ್ದಾರೆ.ರಜೆಯಲ್ಲಿ ಆಟಗಳಲ್ಲಿ ತೊಡಗಿ ಮತ್ತೆ ಓದಿನತ್ತ ಗಮನಹರಿಸುವ ವಿಧ್ಯಾರ್ಥಿಗಳು ಇಂದು ತಮ್ಮ ಶಾಲೆಗಳ ಮೆಟ್ಟಿಲು ಹತ್ತುತ್ತಿದ್ದಾರೆ.ಹೊಸ ಚೈತನ್ಯ ತುಂಬಿಕೊಂಡು ಶಾಲೆಗಳಿಗೆ ಬಂದ ವಿಧ್ಯಾರ್ಥಿಗಳಿಗೆ ಗುಲಾಬಿ ಹೂವು, ಮೈಸೂರ್ ಪಾಕ್, ಪುಸ್ತಕ ಪೆನ್ನು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ
Read More

ಗುರಾಯಿಸಿ ನೋಡಿದ್ದಕ್ಕೆ ಮರ್ಡರ್…ನಾಲ್ವರಿಂದ ಕೃತ್ಯ…

ಮೈಸೂರು,ಮೇ31,Tv10 ಕನ್ನಡ ಗುರಾಯಿಸಿ ನೋಡಿದ ಯುವಕನನ್ನ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.ಅರ್ಬಾಜ್ ಖಾನ್(18) ಮೃತ ಯುವಕ.ಶಾದಿಲ್,ಶಹಬಾಜ್,ಶೋಯಬ್ ಹಾಗೂ ಸಾಹಿಲ್ ಕೃತ್ಯವೆಸಗಿದೆ ಆರೋಪಿಗಳು.ಪರಸ್ಪರ ಗಲಾಟೆಯಲ್ಲಿ ಆರೋಪಿ ಶಹಬಾಜ್ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ.ಈ ವಿಚಾರದಲ್ಲಿ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಪೊಲೀಸರಿಗೆ ಸಾಕ್ಷಿ ಹೇಳಿದ್ದಕ್ಕೆ ಮಹಿಳೆ ಮೇಲೆ ಹಿಗ್ಗಾಮುಗ್ಗ ಹಲ್ಲೆ…ನಾಲ್ವರ ವಿರುದ್ದ FIR ದಾಖಲು…

ಪಕ್ಕದ ಮನೆಯ ಯುವತಿಯೊಬ್ಬಳ ರಕ್ಷಣೆಗಾಗಿ ಪೊಲೀಸರಿಗೆ ಸಾಕ್ಷಿ ಹೇಳಿದ ಹಿನ್ನಲೆ ಮಹಿಳೆಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ಮೈಸೂರಿನ ಏಕಲವ್ಯನಗರದಲ್ಲಿ ನಡೆದಿದೆ.ಲಕ್ಷ್ಮಿ ಎಂಬುವರು ಹಲ್ಲೆಗೆ ಒಳಹಾದವರು.ಸುರೇಶ,ನಂದೀಶ,ರಂಗಪ್ಪ ಹಾಗೂ ಲಕ್ಷ್ಮಿ ಹಲ್ಲೆ ನಡೆಸಿದವರು.ಯುವತಿಯೊಬ್ಬಳ ರಕ್ಷಣೆಗಾಗಿ ಲಕ್ಷ್ಮಿ ರವರು ಪೊಲೀಸರಿಗೆ ಸಾಕ್ಷಿ ಹೇಳಿದ್ದಾರೆ.ನನ್ನ ಮಗನ ವಿರುದ್ದ ಸಾಕ್ಷಿ ಹೇಳಿದ್ದೀಯ ಎಂದು ಲಕ್ಷ್ಮಿ ಮೇಲೆ ತಿರುಗಿಬಿದ್ದ ಸುರೇಶ್,ನಂದೀಶ್,ರಂಗಪ್ಪ ಹಾಗೂ ಲಕ್ಷ್ಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.ಈ ಸಂಭಂಧ ಹಲ್ಲೆಗೆ ಒಳಗಾದ ಲಕ್ಷ್ಮಿ
Read More

ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ…

ಟಿ.ನರಸೀಪುರ,ಮೇ30,Tv10 ಕನ್ನಡ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದ ಸೇಂಟ್ ನಾರ್ಬರ್ಟ್ ಪಿಯು ಕಾಲೇಜಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿ ಗಳಿಗೆ ಶಿಕ್ಷಕರಿಗೆ ಪ್ರಾಧ್ಯಾಪಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ಸಿಬ್ಬಂದಿಗಳಾದ ಮಹದೇವಸ್ವಾಮಿ ಕೆ ಎನ್, ಮಹೇಶ್ ಸಿ ಎನ್ ಟಿ ನರಸೀಪುರ ಇನ್ಸ್ಪೆಕ್ಟರ್ ಮೇದಪ್ಪ ಹಾಗೂ ಸಿಬ್ಬಂದಿಗಳು ಸೈಬರ್ ಅಪರಾಧಗಳಾದಫಿಶಿಂಗ್,ಲೋನ್ ಫ್ರಾಡ್,ಇನ್ವೆಸ್ಟ್ ಮೆಂಟ್ ಫ್ರಾಡ್,OLX ಫ್ರಾಡ್,OTP
Read More

ಪಿಎಸ್ಸೈ ಕು.ರಾಧ ಲೋಕಾಯುಕ್ತ ಬಲೆಗೆ…50 ಸಾವಿರ ಲಂಚ ಸ್ವೀಕರಿಸುವಾಗ ಲಾಕ್…

ಮೈಸೂರು,ಮೇ30,Tv10 ಕನ್ನಡಮೈಸೂರು ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಕು.ರಾಧ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.50 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ಗಿ ಬಲೆಗೆ ಬಿದ್ದಿದ್ದಾರೆ.ಪ್ರಕರಣದ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು1 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ರಾಧ ರವರುಪೊಲೀಸ್ ಠಾಣೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಎಸ್ ಪಿ ಸಜಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಡಿವೈಎಸ್‌ಪಿ ಮಾಲ್ತೇಶ್, ಕೃಷ್ಣಯ್ಯ ಸೇರಿ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…
Read More

ಬೇಕರಿ ಪೀಠೋಪಕರಣಗಳು ಧ್ವಂಸ ಪ್ರಕರಣ…7 ಮಂದಿ ವಿರುದ್ದ FIR ದಾಖಲು…ನ್ಯಾಯಾಲಯದ ಆದೇಶದಂತೆ ಕ್ರಮ…

ನಂಜನಗೂಡು,ಮೇ29,Tv10 ಕನ್ನಡ ಬೇಕರಿಯೊಂದರ ಪೀಠೋಪಕರಣಗಳನ್ನ ಕಿಡಿಗೇಡಿಗಳು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ನಂಜನಗೂಡು ತಾಲೂಕು ಹುರಾ ಗ್ರಾಮದಲ್ಲಿ ಬೇಕರಿಯೊಂದರ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದ ಆರೋಪದ ಹಿನ್ನಲೆ ನ್ಯಾಯಾಲಯ ನೀಡಿದ ಆದೇಶದಂತೆ FIR ದಾಖಲಿಸಲಾಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುರಾ ಗ್ರಾಮದ ಕಾಡಯ್ಯ,ಶಿವಮೂರ್ತಿ,ಶಶಿಧರ್,ಕುಮಾರ್,ಕಮಾಲ್ ಕುಮಾರ್,ಪ್ರವೀಣ್ ಕುಮಾರ್ ಹಾಗೂ ವರುಣ ಎಂಬುವರ ಮೇಲೆ ಪ್ರಕರಣ
Read More

ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ಮೈಸೂರು,ಮೇ29,Tv10 ಕನ್ನಡ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸುದ್ದಿಯಾಗಿದ್ದಾರೆ.ಆಡಳಿತ ತರಬೇತಿ ಸಂಸ್ಥೆಯ ವಸ್ತುಗಳನ್ನು ತೆಗೆದುಕೊಂಡ ಹೋದ ವಿಚಾರ ಮುನ್ನಲೆಗೆ ಬಂದಿದೆ.ವಸ್ತುಗಳನ್ನು ಹಿಂದಿರುಗಿಸದ ಹಿನ್ನೆಲೆ ಸಂಬಳದಲ್ಲಿ ಹಣ ಕಡಿತಗೊಳಿಸುವಂತೆಆಡಳಿತ ತರಬೇತಿ ಸಂಸ್ಥೆ ಜಂಟಿ‌ ನಿರ್ದೇಶಕರು ಪತ್ರ ಬರೆದಿದ್ದಾರೆ.ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ರೋಹಿಣಿ ಸಿಂಧೂರಿಜಿಲ್ಲಾಧಿಕಾರಿ ಕಚೇರಿ ಅಧಿಕೃತ ನಿವಾಸದಲ್ಲಿ ವಾಸಕ್ಕೂ ಮುನ್ನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಾಸ್ತವ್ಯ ಹೂಡಿದ್ದರು.ಅಲ್ಲಿಂದ ಅಧಿಕೃತ ನಿವಾಸಕ್ಕೆ ತೆರಳಿದ್ದ ವೇಳೆ ಆಡಳಿಯ ತರಬೇತಿ ಸಂಸ್ಥೆಯ ನಿವಾಸದ
Read More

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆ…ಮೈಸೂರು ಯುವಕ ರನರ್ ಅಪ್…

ಮೈಸೂರು,ಮೇ29,Tv10 ಕನ್ನಡ ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಮೈಸೂರು ಯುವಕ ರನ್ನರ್ ಅಪ್ ಆಗಿದ್ದಾರೆ.ಅಂತರಾಷ್ಟ್ರೀಯ ಕ್ಲಾಸಿ ಮಾಡೆಲ್ ಸ್ಪರ್ಧೆಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಿತು.ಮೈಸೂರಿನ ಎನ್ ಎಸ್ ಯೋಗ ಗೌಡ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.ಯೋಗ ಗೌಡ ಮೈಸೂರಿನ ವಕೀಲರಾದ ಡಿ ಎಸ್ ಶಿವಪ್ರಕಾಶ್ ಹಾಗೂ ಎಚ್ ಕೆ ಲತಾ ದಂಪತಿ ಪುತ್ರರಾಗಿದ್ದಾರೆ.ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೈಸೂರಿಗೆ ಕೀರ್ತಿ ತಂದಿದ್ದಾರೆ…
Read More

ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಮೇ28,Tv10 ಕನ್ನಡ ಮಹಿಳೆಯ ಮೇಲೆ ಕಾಮದೃಷ್ಟಿಯಿಂದ ನೋಡುತ್ತಿದ್ದ ಕಿರಾತಕನೊಬ್ಬ ಆಕೆಯ ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಪರಿಣಾಮ ಮನನೊಂದ ಗೃಹಿಣಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(40) ಮೃತ ಗೃಹಿಣಿ.ಘಟನೆಗೆ ಸಂಭಂಧಿಸಿದಂತೆ ಕಾಮದೃಷ್ಟಿ ಬೀರಿ ಅಪಪ್ರಚಾರ ಮಾಡಿದ ದಡದಹಳ್ಳಿ ಗ್ರಾಮದ ನಿವಾಸಿ ನಾಗರಾಜು ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಹಾಗೂ ಕುಟುಂಬ ದಡದಹಳ್ಳಿ ಗ್ರಾಮದ ನಿವಾಸಿಗಳು.ಅದೇ ಗ್ರಾಮದ ನಾಗರಾಜು ಆಗಾಗ
Read More

ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ…ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಧಾನ…

ಮೈಸೂರು,ಮೇ27,Tv10 ಕನ್ನಡ ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರಾಂಡ್ ಹೋಟೆಲ್ ನಲ್ಲಿಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ನ 18ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆ ಬಿ ಲಿಂಗರಾಜು (ಕೈಗಾರಿಕಾ ಕ್ಷೇತ್ರ), ಡಾಕ್ಟರ್ ವೈ ಡಿ ರಾಜಣ್ಣ (ಸಾಹಿತ್ಯ ಕ್ಷೇತ್ರ), ಆರ್ ಕೃಷ್ಣ (ಮಾಧ್ಯಮ ಕ್ಷೇತ್ರ), ಶ್ರೀಧರ್ ಸಿ ಎಂ (ಸೈನಿಕ ಕ್ಷೇತ್ರ), ಶಿವಪ್ರಸಾದ್
Read More