TV10 Kannada Exclusive

ದರೋಡೆಗೆ ಹೊಂಚು…ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ…

ಪಿರಿಯಾಪಟ್ಟಣ,ಫೆ19,Tv10 ಕನ್ನಡ ದರೋಡೆ ಮಾಡಲು ಹೊಂಚು ಹಾಕುತ್ತಿರುವ ಖತರ್ನಾಕ್ ಕಳ್ಳರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸಿಸಿ ಕ್ಯಾಮೆರಾವನ್ನು ಕಿತ್ತುಹಾಕಿ ಪ್ಲಾನ್ ಮಾಡುತ್ತಿರುವ ಮುಸುಕುಧಾರಿಗಳ ದೃಶ್ಯ ಸೆರೆಯಾಗಿದೆ.ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ ಫಸ್ಟ್ ಕ್ಯಾಂಪ್ ರಸ್ತೆಯಲ್ಲಿ ಘಟನೆ ನಡೆದಿದೆ.ಸುರೇಶ್ ಎಂಬುವರ ಮನೆ ಬಳಿ ಸಂಚು ರೂಪಿಸುತ್ತಿದ್ದಾಗಪಕ್ಕದ ಮನೆಯವರು ಎಚ್ಚೆತ್ತು ಲೈಟ್ ಆನ್ ಮಾಡಿದ ಕಾರಣ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದರೋಡೆಕೋರರ ಸಂಚಿನ ಬಗ್ಗೆಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದುಷ್ಕರ್ಮಿಗಳ ಬೇಟೆಗೆ ಪೊಲೀಸ್ ತಂಡ ಸಜ್ಜಾಗಿದೆ…
Read More

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ…ಸಬ್ ಇನ್ಸ್ಪೆಕ್ಟರ್ ವರ್ಗಾವಣೆ…

ಮೈಸೂರು,ಫೆ18,Tv10 ಕನ್ನಡ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಭಂಧಿಸಿದಂತೆ ಸಬ್ ಇನ್ಸ್‌ ಪೆಕ್ಟರ್ ಎತ್ತಂಗಡಿಯಾಗಿದೆ.ಸಬ್ಇನ್ಸ್ಪೆಕ್ಟರ್ ರೂಪೇಶ್ ವರ್ಗಾವಣೆ ಮಾಡಲಾಗಿದೆ.ನಗರ ಪೊಲೀಸ್ ಆಯುಕ್ತರ ಕಚೇರಿಯ ಆಟೋಮೇಷನ್ ಸೆಂಟರ್‌ ಸಬ್ ಇನ್ಸ್‌ ಪೆಕ್ಟರ್ ರೂಪೇಶ್ ಎತ್ತಂಗಡಿಯಾಗಿದ್ದಾರೆ.ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.ಗಲಾಟೆ ತಡೆಯಲು ಅವಕಾಶ ಇದ್ದರೂ ನಿರ್ಲಕ್ಷ್ಯ ಮಾಡಿದ ಆರೋಪ ಹಿನ್ನಲೆ ವರ್ಗಾವಣೆ ಮಾಡಲಾಗಿದೆ.ಆಕ್ಷೇಪಾರ್ಹ ಪೊಸ್ಟ್ ಹಾಕಿದ್ದ ಆರೋಪಿ ಸತೀಶ್ ಆಲಿಯಾಸ್ ಪಾಂಡುರಂಗನನ್ನ ರೂಪೇಶ್‌ ಠಾಣೆಗೆ ಕರೆತಂದಿದ್ದರು. ಆದರೆ
Read More

ಐಪಿಎಲ್ ಬೆಟ್ಟಿಂಗ್ ಎಫೆಕ್ಟ್…ತಂಗಿಗೆ ಸಾಲದ ಹೊರೆ…ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣು…ಪ್ರಕರಣ ದಾಖಲಾಗುತ್ತಿದ್ದಂತೆಯೇ ಮತ್ತೊಬ್ಬ ಅಣ್ಣ ಅತ್ತಿಗೆ

ಮೈಸೂರು,ಫೆ18,Tv10 ಕನ್ನಡ ಐಪಿಎಲ್ ಬೆಟ್ಟಿಂಗ್ ಹಿನ್ನಲೆ ತಂಗಿಗೆ ಸ್ವಂತ ಅಣ್ಣ ಹಾಗೂ ಅತ್ತಿಗೆ ಮಾಡಿಸಿದ ಸಾಲ ಇಂದು ಒಂದೇ ಕುಟುಂಬದ ಮೂವರ ಸಾವಿಗೆ ಕಾರಣವಾಗಿದೆ.ತಂಗಿ ಮೇಲಿದ್ದ ಸಾಲದ ಕಿರುಕುಳಕ್ಕೆ ಬೇಸತ್ತ ಒಬ್ಬ ಅಣ್ಣ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣಾದ ಬೆನ್ನ ಹಿಂದೆಯೇ ಪ್ರಕರಣ ದಾಖಲಾದ ಹಿನ್ನಲೆ ಮತ್ತೊಬ್ಬ ಅಣ್ಣ ಹಾಗೂ ಅತ್ತಿಗೆ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಸಂಭಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಾಗೂ ವಿಜಯನಗರ
Read More

ವಾರ್ಡ್ ನಂ.61 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಫೆ17,Tv10 ಕನ್ನಡ ವಿದ್ಯಾರಣ್ಯಪುರಂ ನ ವಾರ್ಡ್ ನಂ.61 ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಪಾದಯಾತ್ರೆ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ಬಗೆ ಹರಿಸಲು ಮುಂದಾದರು.ಪಾರ್ಕ್ ನ‌ ಅಭಿವೃದ್ಧಿ ಪಡಿಸಿ ಇಲ್ಲಿಗೆ ಬರುವ ಪುಂಡರ ಹಾವಳಿ ತಪ್ಪಿಸುವಂತೆ ಮನವಿ ಮಾಡಿದರು. ಪಾರ್ಕಿನ ಸುತ್ತ ಗಿಡಗಳನ್ನು ಹಾಕಿಸಿಕೊಡುವುದು ಮತ್ತು ಬೆಳಗಿನ ಸಮಯದಲ್ಲಿ ಮಕ್ಕಳು ಕ್ರಿಕೆಟ್ ಆಡುವುದರ ಮೂಲಕ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿರುವುದು, ರಾತ್ರಿಯ ಸಮಯದಲ್ಲಿ ಪುಂಡ ಹುಡುಗರುಗಳು ಮಧ್ಯಪಾನ ಮಾಡುತ್ತಿರುವ ಬಗ್ಗೆ
Read More

ಮೈಸೂರು:ಒಂದೇ ಕುಟುಂಬದ ನಾಲ್ವರ ಸಾವು…ಅಪಾರ್ಟ್ ಮೆಂಟ್ ನಲ್ಲಿ ಘಟನೆ…

ಮೈಸೂರು,ಫೆ18,Tv10 ಕನ್ನಡ ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ‌ನಲ್ಲಿ ನಡೆದಿದೆ.ಚೇತನ (45) ರೂಪಾಲಿ (43) ಪ್ರಿಯಂವಧ (62) ಕುಶಾಲ್ (15) ಸಾವನ್ನಪ್ಪಿದ್ದಾರೆ.ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಸಾವನ್ನಪ್ಪಿದ ದುರ್ದಿವಿಗಳು.ಚೇತನ್ ಅವರ ಪತ್ನಿ ತಾಯಿ ಮಗ ಸಾವು.ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ ತಾನು ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಡಿಸಿಪಿ ಜಾನ್ಹವಿವಿದ್ಯಾರಣ್ಯಪುರಂ ಇನ್ಸಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಭೇಟಿ ನೀಡಿ
Read More

ಆನೆ ಕಂದಕ,ರೈಲ್ವೆ ಕಂಬಿ ನಿರ್ಮಾಣ ಕಾರ್ಯಕ್ಕೆ ಶಾಸಕ ದರ್ಶನ್ ಧೃವನಾರಾಯಣ್ ಚಾಲನೆ…11.70 ಕೋಟಿ ವೆಚ್ಚದಲ್ಲಿ ನಿರ್ಮಾಣ…ಮಾನವ ಮತ್ತು ಪ್ರಾಣಿ ಸಂಘರ್ಷಕ್ಕೆ

ನಂಜನಗೂಡು,ಫೆ16,Tv10 ಕನ್ನಡ ನಂಜನಗೂಡು ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಗಡಿಭಾಗಗಳಲ್ಲಿ ಕಾಡು ಪ್ರಾಣಿಗಳ ದಾಳಿಗೆ ನಲುಗಿ ಬೇಸತ್ತಿದ್ದ ಜನತೆಗೆ ಶಾಸಕ ದರ್ಶನ್ ಧೃವನಾರಾಯಣ್ ಶಾಶ್ವತ ಪರಿಹಾರ ಒದಗಿಸಲು ಮುಂದಾಗಿದ್ದಾರೆ.ಗಡಿಭಾಗಗಳಲ್ಲಿ ನುಸುಳುತ್ತಿದ್ದ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ಆನೆಕಂದಕ ಹಾಗೂ ರೈಲ್ವೆಕಂಬಿ ಬೇಲಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.ಸುಮಾರು 11.70 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಮಗಾರಿಗೆ ಚಾಲನೆ ದೊರೆತಿದೆ ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಇಂದು ಚುರುಕು ನೀಡಲಾಗಿದೆ.ಧೃವನಾರಾಯಣ್
Read More

ಸ್ಮಶಾನದಲ್ಲಿ ಗಾಂಜಾ ಗಮ್ಮತ್ತು…ರಾಜಾರೋಷವಾಗಿ ಧಂ ಎಳೆಯುವ ವ್ಯಸನಿಗಳು…ದೂರು ನೀಡಿದ್ರೂ ಕ್ಯಾರೆ ಎನ್ನದ ಪೊಲೀಸ್ರು…ಮೇಟಗಳ್ಳಿ ಸ್ಮಶಾನದ ದುಃಸ್ಥಿತಿ…

ಮೈಸೂರು,ಫೆ16,Tv10 ಕನ್ನಡ ಮೃತಪಟ್ಟವರ ಆತ್ಮ ಚಿರಶಾಂತಿಗೆ ಜಾರಬೇಕಾದ ಸ್ಮಶಾನ ಗಾಂಜಾ ವ್ಯಸನಿಗಳ ಆವಾಸ ಸ್ಥಾನವಾಗಿ ಪರಿಣಮಿಸಿದೆ.ಹಗಲು ಇರುಳೆನ್ನದೆ ಬೈಕ್ ನಲ್ಲಿ ಬರುವ ವ್ಯಸನಿಗಳು ಸ್ಮಶಾನ ಹಾಗೂ ಅಕ್ಕಪಕ್ಕದಲ್ಲಿರು ಪೊದೆಗಳ ಆಶ್ರಯ ಪಡೆದು ರಾಜಾರೋಷವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾರೆ.ಈ ಬಗ್ಗೆ ಸ್ಥಳೀಯರಾದ ಬಿ.ಎನ್.ನಾಗೇಂದ್ರ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ.ಮೃತಪಟ್ಟವರು ಚಿರನಿದ್ರೆಗೆ ಜಾರಬೇಕಾದ ಸ್ಥಳವೀಗ ಗಾಂಜಾ ವ್ಯಸನಿಗಳ ಗಮ್ಮತ್ತಿಗೆ ಬಲಿಯಾಗುತ್ತಿದೆ ಹೌದು…ಇದು ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ
Read More

ರಿಟೈರ್ಡ್ ಪರ್ಸನ್ ಖಾತೆಗೆ ಕನ್ನ…ಕೇವಲ ಒಂದು ಗಂಟೆ ಅವಧಿಯಲ್ಲಿ 19.30 ಲಕ್ಷ ಗಾಯಬ್…ಖಾತೆದಾರ ಶಾಕ್…!

ಮೈಸೂರು,ಫೆ15,Tv10 ಕನ್ನಡ ಕೇವಲ ಒಂದು ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿದ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಶ್ರೀರಾಂಪುರ ನಿವಾಸಿ ಫಾರ್ಮಾಸ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ ರವರ
Read More

ಪ್ರೇಮಿಗಳ ದಿನಾಚರಣೆಯಂದು ಪೋಷಕರಿಗೆ ಪಾದಪೂಜೆ ನೆರವೇರಿಸಿದ ಮಕ್ಕಳು…ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ…

ಮೈಸೂರು,ಫೆ15,Tv10 ಕನ್ನಡ ಫೆಬ್ರವರಿ 14 ಪ್ರೇಮಿಗಳಿಗಾಗಿ ಮೀಸಲಾದ ದಿನ.ಯುವಜೋಡಿಗಳು ಸಂತಸದಿಂದ ಪ್ರೇಮಿಗಳ ದಿನಾಚರಣೆಯನ್ನ ಆಚರಿಸುತ್ತಿದ್ದರೆ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಧ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ ಸಲ್ಲಿಸುವ ಮೂಲಕಉತ್ತಮ ಬಾಂಧವ್ಯ ಬೆಳೆಸುವ ದಿವಾಗಿ ಪರಿಗಣಿಸಿ ಆಚರಿಸಲಾಗಿದೆ. ಹಿಂದುತ್ವದ ಸಂಸ್ಕಾರ ಸಂಸ್ಕೃತಿ ಹಿರಿಯರನ್ನು ಪ್ರೀತಿಸೋಣ ಎನ್ನುವ ಘೋಷ ವಾಕ್ಯದೊಂದಿಗೆಪೋಷಕರ ಪಾದ ತೊಳೆದು ಕುಂಕುಮ ಅರಿಶಿಣ ಹಾಗೂ ಆರತಿ ಮಾಡುವ ಮೂಲಕ ಮಕ್ಕಳು ಕಣ್ಣಿಗೆ ಕಾಣುವ ದೇವರಿಂದ ಆಶೀರ್ವಾದ ಪಡೆದು ವಿಭಿನ್ನವಾಗಿ
Read More

ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ… 2.06 ಕೋಟಿ ಮೌಲ್ಯದ ಮಾಲುಗಳು ವಶ…

ಮೈಸೂರು,ಫೆ6,Tv10 ಕನ್ನಡ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸರು ವಶಪಡಿಸಿಕೊಂಡಿರುವ ಸ್ವತ್ತುಗಳನ್ನು ಹಿಂತಿರುಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮೈಸೂರು ಜಿಲ್ಲೆಯಾದ್ಯಂತ ಕಳ್ಳತನವಾಗಿದ್ದ ಸ್ವತ್ತುಗಳನ್ನು ಪತ್ತೆ ಮಾಡಿ ಮಾಲೀಕರು, ವಾರಸುದಾರರಿಗೆ ನೀಡಲಾಯಿತು.ಮೈಸೂರಿನ ಜ್ಯೋತಿನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು.06 ಸುಲಿಗೆ, 06 ಸರಗಳ್ಳತನ, 25 ಮನೆ ಕಳ್ಳತನ, 6 ಸರ್ವೆಂಟ್ ಕಳ್ಳತನ, 67 ವಾಹನ ಕಳ್ಳತನ, 15 ಸಾಮಾನ್ಯ ಕಳ್ಳತನ, 5 ಜಾನುವಾರು ಕಳ್ಳತನ, 4 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿರುವ
Read More