TV10 Kannada Exclusive

Tv10 ಕನ್ನಡ ವರದಿ ಎಫೆಕ್ಟ್…ನಗರಸಭಾ ಕಚೇರಿ ಕುರ್ಚಿಗಳು ಬದಲು…ಗೊಬ್ಬೆದ್ದು ನಾರುತ್ತಿದ್ದ ಚೇರ್ ಗಳಿಗೆ ಮುಕ್ತಿ…

ನಂಜನಗೂಡು,ಜು23,Tv10 ಕನ್ನಡಕೊನೆಗೂ ನಂಜನಗೂಡು ನಗರಸಭಾ ಕಚೇರಿ ಅಧಿಕಾರಿಗಳು ಮೈ ಕೊಡವಿ ಎದ್ದುನಿಂತಿದ್ದಾರೆ.ಗೊಬ್ಬೆದ್ದು ನಾರುತ್ತಿದ್ದ ಕಚೇರಿ ಕುರ್ಚಿಗಳಿಗೆ ಮುಕ್ತಿ ನೀಡಿದ್ದಾರೆ.ರಾತ್ರೋ ರಾತ್ರಿ ಹೊಸ ಕುರ್ಚಿಗಳನ್ನ ಅಳವಡಿಸಲಾಗಿದೆ.ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮುಜುಗರವಾಗುತ್ತಿದ್ದ ಚೇರ್ ಗಳ ಬದಲು ಹೊಸ ಕುರ್ಚಿಗಳನ್ನ ಹಾಕಲಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿ. ನಂಜನಗೂಡು ನಗರಸಭಾ ಕಚೇರಿಯಲ್ಲಿ ಅಳವಡಿಸಲಾಗಿದ್ದ ಸಾರ್ವಜನಿಕರ ಬಳಕೆಯ ಆಸನಗಳು ಗೊಬ್ಬೆದ್ದು ನಾರುತ್ತಿದ್ದವು. ಕುರ್ಚಿಯಲ್ಲಿ ಕುಳಿತುಕೊಳ್ಳಲು ಅಸಹ್ಯಪಡುತ್ತಿದ್ದರು.ಪ್ರತಿವರ್ಷ ಪೀಠೋಪಕರಣಗಳ ಬದಲಾವಣೆಗಾಗಿ ಆಯವ್ಯಯದಲ್ಲಿ ಲಕ್ಷಾಂತರ ರೂ ಮೀಸಲಿಟ್ಟರೂ ಕುರ್ಚಿಗಳು ಮಾತ್ರ
Read More

ತ್ಯಾಜ್ಯ ತೆರವಿಗೆ ಮುಂದಾದ ನಂಜನಗೂಡು ನಗರಸಭಾ ಅಧಿಕಾರಿಗಳು…Tv10 ಕನ್ನಡ ಸುದ್ದಿ ಇಂಪ್ಯಾಕ್ಟ್…

ನಂಜನಗೂಡು,ಜು22,Tv10 ಕನ್ನಡTv10 ಕನ್ನಡ ವಾಹಿನಿ ಸುದ್ದಿಗೆ ನಂಜನಗೂಡು ನಗರಸಭಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲೆ ಒಡಲನ್ನ ಸೇರುತ್ತಿರುವ ತ್ಯಾಜ್ಯ ತೆರುವುಗೊಳಿಸಲು ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.ಇದು Tv10 ಕನ್ನಡ ವರದಿ ಫಲಶೃತಿ ಹುಲ್ಲಹಳ್ಳಿ ರಾಂಪುರ ನಾಲೆ ಬರಿದಾಗಿದೆ ಇಲ್ಲಿಂದ ಶ್ರೀಕಂಠೇಶ್ವರನ ದೇವಸ್ಥಾನದ ಸಮೀಪದಲ್ಲಿ ಹರಿಯುವ ಗುಂಡ್ಲಾ ನದಿಗೆ ಸಂಪರ್ಕ ಪಡೆದು ಕಪಿಲಾ ನದಿಗೆ ನೀರು ಸೇರುತ್ತದೆ.ನಾಲೆಯಲ್ಲಿ ನೀರಿಲ್ಲದ ಕಾರಣ ತ್ಯಾಜ್ಯ ತುಂಬಿಹೋಗಿದೆ.ಇಲ್ಲಿಂದ ಹರಿಯುವ ಒಳಚರಂಡಿ ನೀರು ತುಂಬಿ ಕಪಿಲಾ
Read More

8 ದಿನಗಳಲ್ಲಿ ನಿವೃತ್ತಿ ಹೊಂದಬೇಕಿದ್ದ ಸೀನಿಯರ್ ಫಾರ್ಮಾಸಿಸ್ಟ್ ನೇಣಿಗೆ ಶರಣು…

ಮೈಸೂರು,ಜು22,Tv10 ಕನ್ನಡಜುಲೈ 31 ಕ್ಕೆ ನಿವೃತ್ತಿ ಹೊಂದಬೇಕಿದ್ದ ಸೀನಿಯರ್ ಫಾರ್ಮಾಸಿಸ್ಟ್ ಮೈಸೂರಿನ ವಸತಿಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಬೆಂಗಳೂರಿನ ಇಂದಿರಾನಗರದ ಇಡಿ ಆಸ್ಪತ್ರೆಯಲ್ಲಿ ಸೀನಿಯರ್ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದಮೂರ್ತಿ ಮೃತ ದುರ್ದೈವಿ.ಲಷ್ಕರ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಸಿಜಿ ರಸ್ತೆಯಲ್ಲಿರುವ ವಸತಿಗೃಹದಲ್ಲಿ ಜುಲೈ 20 ರಂದು ಕೊಠಡಿ ಬಾಡಿಗೆ ಪಡೆದು ತಂಗಿದ್ದರು.ಜುಲೈ 21 ರಂದು ಆನಂದಮೂರ್ತಿ ರವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜೀವನದಲ್ಲಿ ಜಿಗುಪ್ಸೆ ಹೊಂದಿರುವ ಕಾರಣ
Read More

ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕರಣ… ನ್ಯಾಯಾಂಗ ತನಿಖಾ ಆಯೋಗ ರಚನೆ…ಸರ್ಕಾರದಿಂದ ಅಧಿಸೂಚನೆ…

ಬೆಂಗಳೂರು,ಜು21,Tv10 ಕನ್ನಡ2021 ರಲ್ಲಿ ನಡೆದ ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕ್ರಿಯೆ ಪ್ರಕರಣದ ತನಿಖೆಗೆ ಸರ್ಕಾರ ನ್ಯಾಯಾಂಗ ತನಿಖಾ ಆಯೋಗವನ್ನ ನೇಮಕ ಮಾಡಿದೆ.ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗವನ್ನ ರಚಿಸಲಾಗಿದೆ.545 ಪಿಎಸ್ಸೈ ಗಳ ನೇರನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಈ ಕುರಿತಂತೆ ನ್ಯಾಯಾಂಗ ತನಿಖೆ ಅತ್ಯವಶ್ಯಕವೆಂಬುದನ್ನ ಮನಗಂಡು ವಿಚಾರಣಾ ಆಯೋಗವನ್ನ ರಚಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಗಳನ್ನ ಉಲ್ಲಂಘಿಸಲಾಗಿದೆಯೇ,ಅಂತಹ ಅಕ್ರಮ ಯಾವುದು,ಹೇಗೆವುಲ್ಲಂಘನೆ ಆಗಿದೆ,ಯಾವಹಂತದಲ್ಲಿ ಅಕ್ರಮ ನಡೆದಿದೆ,ಇದರಲ್ಲಿ ದುರ್ಲಾಭ
Read More

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ… ಮೈಸೂರು,ಜು21,Tv10 ಕನ್ನಡಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುತ್ತಾ ಮುಜುಗರ ತರುವ ಯುವಕರಿಗೆ ಕುವೆಂಪುನಗರ ಠಾಣೆ ಪೊಲೀಸರು ಬಿ ಸಿ ಮುಟ್ಟಿಸಿದ್ದಾರೆ. ಯುವಕರಿಗೆ ಟೀ ಕೊಟ್ಟು ಸಿಗರೇಟ್ ಸೇದಲು ಅವಕಾಶ ಕಲ್ಪಿಸಿಕೊಟ್ಟ ಚಾಯ್ ವಾಲಾಗಳಿಗೂ ಬಿಸಿ ಮುಟ್ಟಿಸಿದ್ದಾರೆ.ಸಿಗರೇಟ್ ಸೇದುತ್ತಾ ಕಾಲಹರಣ ಮಾಡುತ್ತಿದ್ದ ಯುವಕರಿಗೆ ದಂಡ ವಿಧಿಸಲಾಗಿದೆ.ಸ್ಮೋಕ್ ಮಾಡಿದವರಿಗೆ ತಲಾ 100 ರೂ ದಂಡ ವಿಧಿಸಿದರೆ.ಟೀ ಅಂಗಡಿ ಮಾಲೀಕರಿಗೆ
Read More

ಬಿರುಗಾಳಿಗೆ ಉರುಳಿಬಿದ್ದ ಭಾರಿ ಮರ…5 ವಿದ್ಯುತ್ ಕಂಬಗಳಿಗೆ ಹಾನಿ…

ಹುಣಸೂರು,ಜು21,Tv10 ಕನ್ನಡಬಿರುಗಾಳಿ ಹಿನ್ನಲೆ ಭಾರಿ ಮರ ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದೆ.ಪರಿಣಾಮ 5 ವಿದ್ಯುತ್ ಕಂಬಗಳು ಧರೆಗುರುಳಿದೆ.ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಅನಾಹುತ ತಪ್ಪಿಸಲಾಗಿದೆ.ಹುಣಸೂರು ತಾಲೂಕು ತೆಂಕನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಿ ಉರುಳಿಬಿದ್ದ ಮರವನ್ನ ತೆರುವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ…
Read More

*ವಿದ್ಯಾರ್ಥಿ ಜೀವನ ಮಹತ್ವ ಪೂರ್ಣವಾದ ಹಂತ- ಡಿ ಆರ್ ರಮೇಶ್

KR ಪೇಟೆ TV10 ಕನ್ನಡ.ವಿದ್ಯಾರ್ಥಿ ಜೀವನ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಮಹತ್ವವಾದ ಹಂತ .ಈ ಹಂತದಲ್ಲಿ ಶಿಸ್ತು, ಸಂಯಮ, ವಿಧೇಯತೆ , ಕಲಿಕೆ, ಮುಂತಾದ ಉದಾತ್ತ ಮೌಲ್ಯ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಂತಹ ವಿದ್ಯಾರ್ಥಿಗಳು ಉನ್ನತ ಹಂತಕ್ಕೆ ಹೋಗಲು ಸಾಧ್ಯ ಎಂದು ಶ್ರೀ ಡಿ ಆರ್ ರಮೇಶ್ ಹಿರಿಯ ಉಪನ್ಯಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ಬಡ್ತಿ ಉಪನ್ಯಾಸಕರ ಸಂಘ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಲ್ಲೇನಹಳ್ಳಿ ಕೆ.ಆರ್ ಪೇಟೆ
Read More

ಆಕ್ರೋಶದ ಕೈಗೆ ಬುದ್ಧಿಕೊಟ್ಟು ಅನರ್ಥಕ್ಕೆ ಅವಕಾಶ ಬೇಡ…ಮಣಿಪುರ ಜನತೆಗೆ ಪೇಜಾವರ ಶ್ರೀ ಮನವಿ…

ಮೈಸೂರು,ಜು21,Tv10 ಕನ್ನಡ ದೇಶದ ಅವಿಭಾಜ್ಯಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ‌ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ .ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ ಅವಮಾನವಾಗುತ್ತದೆ .ಪ್ರಪಂಚದ ಸಮಗ್ರ ಇತಿಹಾಸವನ್ನು ಗಮನಿಸಿದರೆ ಹಿಂಸೆ ಆಕ್ರಮಣ ಅತ್ಯಾಚಾರಗಳಿಂದ ಯಾರೂ ಯಾವ ದೇಶವೂ ಏನನ್ನೂ ಸಾಧಿಸಿಲ್ಲ. ನಮ್ಮ ರಾಮಾಯಣ
Read More

ಬಾಲಕಾರ್ಮಿಕರ ರಕ್ಷಣೆಗೆ ಒತ್ತು…ಅಂಗಡಿ ಮುಂಗಟ್ಟುಗಳ ಮೇಲೆ ಅಧಿಕಾರಿಗಳು ಧಿಢೀರ್ ದಾಳಿ…

ಪಿರಿಯಾಪಟ್ಟಣ,ಜು21,Tv10 ಕನ್ನಡಬಾಲಕಾರ್ಮಿಕ ಪಿಡುಗನ್ನ ನಿರ್ಮೂಲನೆ ಮಾಡಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಒತ್ತು ನೀಡಿದ್ದಾರೆ.ಇಂದು ಪಿರಿಯಾಪಟ್ಟಣದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಬಾಲ ಕಾರ್ಮಿಕರನ್ನ ಬಳಸಿಕೊಳ್ಳುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.ದಾಳಿ ವೇಳೆ ಬಾಲ ಕಾರ್ಮಿಕರು ಕಂಡು ಬಂದಿಲ್ಲ.ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬರಿಗೈಲಿ ಹಿಂದಿರುಗಿದರು.ಹುಣಸೂರು ತಾಲೂಕು ಶಿರಸ್ತೇದಾರ್ ಶಕೀಲಾಬಾನು ಹಾಗೂ ಕಾರ್ಮಿಕ ಇಲಾಖೆ ನಿರೀಕ್ಷಕರಾದ ಆರ್.ರವಿ ನೇತೃತ್ವದಲ್ಲಿ ದಾಳಿ ಪ್ರಕ್ರಿಯೆ ನಡೆಯಿತು.ಬಾಲಕಾರ್ಮಿಕ ಯೋಜನಾ ಸಂಘದ ನಿರ್ದೇಶಕರಾದ ಕೆ.ಪಿ.ಮಲ್ಲಿಕಾರ್ಜುನ್,ಪಿರಿಯಾಪಟ್ಟಣ ಠಾಣೆ ಪಿಎಸ್ಸೂ ಸುರೇಶ್
Read More

ಲೋಕಸಭೆ ಅಧಿವೇಶನ…ದಿ.ಧ್ರುವನಾರಾಯಣ್ ಗೆ ಶ್ರದ್ಧಾಂಜಲಿ ಅರ್ಪಿಸಿ…ಸ್ಪೀಕರ್ ಗೆ ಸಂಸದ ಪ್ರತಾಪ್ ಸಿಂಹ ಪತ್ರ…

ಮೈಸೂರು,ಜು21,Tv10 ಕನ್ನಡ ಲೋಕಸಭೆ ಅಧಿವೇಶನ ಪ್ರಾರಂಭದ ದಿನ ಮೃತ ಮಾಜಿ ಮತ್ತು ಹಾಲಿ ಸಂಸದರಿಗೆ ಶ್ರದ್ಧಾಂಜಲಿ ಅರ್ಪಿಸುವುದು ವಾಡಿಕೆ. ಆದರೆ ನಿನ್ನೆ ಶ್ರದ್ಧಾಂಜಲಿ ಅರ್ಪಿಸುವಾಗ ಇತ್ತೀಚೆಗೆ ನಿಧನರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ರವರ ಹೆಸರು ಬಿಟ್ಟು ಹೋಗಿತ್ತು. ಇಂದು ಸ್ಪೀಕರ್ ಅವರನ್ನು ಭೇಟಿಯಾದ ಸಂಸದ ಪ್ರತಾಪ್ ಸಿಂಹ ರವರು ಶ್ರದ್ಧಾಂಜಲಿ ಸಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಪತ್ರ ಬರೆದಿದ್ದಾರೆ…
Read More