TV10 Kannada Exclusive

ಕಾಡಾನೆ ದಾಳಿ…ವಾಚರ್ ಸಾವು…

ಎಚ್.ಡಿ.ಕೋಟೆ,ಮಾ4,Tv10 ಕನ್ನಡಕಾಡಾನೆ ದಾಳಿಗೆ ವಾಚರ್ ಸಾವನ್ನಪ್ಪಿದ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ದಡದಹಳ್ಳಿ ಹಾಡಿಯ ಆದಿವಾಸಿ ವಾಚರ್ ಬೊಮ್ಮ ಸಾವನ್ನಪ್ಪಿದ ದುರ್ದೈವಿ.ಬೊಮ್ಮ ಮತ್ತು ಮಧುಕೊಯ್ಲರ್ ಎಂಬ ಇಬ್ಬರು ವಾಚರ್ ಗಳು ಅರಣ್ಯದ ಗಸ್ತಿನಲ್ಲಿದ್ದಾಗ ಕಾಡಾನೆ ಹಠಾತ್ ಎದುರಾಗಿದೆ.ಕಾಡಾನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೊಮ್ಮ ಕಂದಕಕ್ಕೆ ಬಿದ್ದಿದ್ದಾನೆ.ಕಂದಕದಲ್ಲಿ ಬಿದ್ದ ಬೊಮ್ಮನನ್ನು ಕಾಡಾನೆ ಸೊಂಡಲಿನಿಂದ ಮೇಲಕ್ಕೆಸೆದು ಗಾಯಗೊಳಿಸಿದೆ.ಕಂದಕದಲ್ಲಿ ಸಿಲಿಕಿದ್ದರೂ ಅರಣ್ಯ ಇಲಾಖೆ ಸಿಬ್ಬಂಧಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರಮಾಡಿಕೊಂಡಿದ್ದಾನೆ.ಕೈಮೂಳೆ
Read More

ಅಕ್ರಮ ಸಿಗರೇಟ್ ದಾಸ್ತಾನಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ…ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಗಳು ವಶ…

ಅಕ್ರಮ ಸಿಗರೇಟ್ ದಾಸ್ತಾನಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ…ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಗಳು ವಶ… ಮೈಸೂರು,ಮಾ4,Tv10 ಕನ್ನಡಹೆಸರಾಂತ ಕಂಪನಿಯ ಸಿಗರೇಟ್ ಗಳನ್ನ ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೊಡೌನ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲಕ್ಷಾಂತರ ಮೌಲ್ಯದ ಸಿಗರೇಟ್ ಗಳನ್ನ ವಶಕ್ಕೆ ಪಡೆದಿದ್ದಾರೆ.ಪ್ರತಿಷ್ಠಿತ ಕಂಪನಿಯ ಸಿಗರೇಟ್ ಗಳು ದಾಳಿ ವೇಳೆ ಕಂಡುಬಂದಿದೆ.ಕಂಪನಿಯ ಮುಖ್ಯಸ್ಥರಿಗೆ ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಕಂಪನಿಯ ಮುಖ್ಯಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ
Read More

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು – ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು. ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ ಭೇಟಿ
Read More

ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ ರೇಷ್ಮೆ ಕೃಷಿಯು ಕೃಷಿ ಆಧಾರಿತ ಗ್ರಾಮೀಣ ಗುಡಿ ಕೈಗಾರಿಕೆಯಾಗಿದ್ದು, ವಿಫುಲ ಉದ್ಯೋಗಾವಕಾಶವನ್ನು ಹೊಂದಿದೆ ಎಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಎಂ.ಬಿ. ರಾಜೇಶ್ ಗೌಡ ಅವರು ತಿಳಿಸಿದರು. ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ‌ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅಂಬೇಡ್ಕರ್ ಭವನದಲ್ಲಿಂದು ನಡೆದ ರೇಷ್ಮೆ ಕೃಷಿಮೇಳ ಮತ್ತು ಪ್ರಶಸ್ತಿ
Read More

ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಪೂರ್ವಬಾವಿ ಸಭೆ…ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆ…

ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಪೂರ್ವಬಾವಿ ಸಭೆ…ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆ… ಮೈಸೂರು,ಮಾ3,Tv10 ಕನ್ನಡಮೈಸೂರು ಜಿಲ್ಲಾಪಂಚಾಯ್ತಿ ಸಭಾಂಗಣದಲ್ಲಿಂದು ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.ಸಮಾವೇಶದ ಸಿದ್ದತೆಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರುಗಳಾದ ನಾಗೇಂದ್ರ, ಸಾ.ರಾ.ಮಹೇಶ್, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತಿ
Read More

ಮಾನ್ಯ ಪ್ರಧಾನಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು,ಮತ್ತು

ಮಾನ್ಯ ಪ್ರಧಾನಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು,ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಕೆ, ರೇಷ್ಮ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ
Read More

ಕೆಆರ್ ಪೇಟೆಯಲ್ಲಿ 28.50 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ

ಮಂಡ್ಯ: ಕೆಆರ್ ಪೇಟೆಯಲ್ಲಿ 28.50 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಶಂಕುಸ್ಥಾಪನೆ ನೆರವೇರಿಸಿದರು. ಕೃಷ್ಣರಾಜಪೇಟೆ ತಾಲೂಕಿನ ಜನರ ಬಹುದಿನದ ಬೇಡಿಕೆ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಕೆಆರ್ ಪೇಟೆ ಕ್ಷೇತ್ರದ ಜನರ ಬಹು ಬೇಡಿಕೆಯಂತೆ 28.50 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಇಂದು
Read More

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ಮಂಡ್ಯ,ಮಾ.02:-ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ಕಾರ್ಡ್ ಗೆ ಇಂದು ಮತ್ತು ನಾಳೆ 40ಸಾವಿರ ಜನರನ್ನು ನೊಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ತಿಳಿಸಿದರು. ಅವರು ಇಂದು ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ವಿಶೇಷವಾದ ಆಂದೋಲನ ರೂಪದಲ್ಲಿ ನೊಂದಣಿ ಕಾರ್ಯ ಪ್ರಾರಂಭ ಮಾಡಿ ಮಾತನಾಡಿದರು. ಮಂಡ್ಯ
Read More

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು… ಮೈಸೂರು,ಮಾ2,Tv10 ಕನ್ನಡಮದುವೆ ಆಗದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾದ ಸಾಫ್ಟ್ ವೇರ್ ಇಂಜಿನಿಯರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರೂಪಾನಗರದಲ್ಲಿ ನಡೆದಿದೆ.ಪ್ರತಾಪ್(38) ಮೃತ ದುರ್ದೈವಿ.ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಪ್ರತಾಪ್ ಕೊರೊನಾ ಬಂದಾಗಿನಿಂದ ವರ್ಕ್ ಫ್ರಂ ಹೋಂ ನಲ್ಲಿ ಕೆಲಸ ಮಾಡುತ್ತಿದ್ದರು.38 ವರ್ಷವಾದರೂ ಪ್ರತಾಪ್ ಗೆ ಮದುವೆ ಯೋಗ ಬರಲಿಲ್ಲ.ಒಡಹುಟ್ಟಿದ ಅಕ್ಕ ಅಮೆರಿಕಾದಲ್ಲಿ ನೆಲೆಸಿದ್ದಾರೆ.ತಂದೆ ರಿಟೈರ್ಡ್ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.ಹೀಗಿದ್ದರೂ
Read More

ಮಾನ್ಯ ಪ್ರಧಾನಮಂತ್ರಿಗಳು ಮಾಚ್೯ 11 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಜಿಲ್ಲಾಧಿಕಾರಿ

ಮಾನ್ಯ ಪ್ರಧಾನಮಂತ್ರಿಗಳು ಮಾಚ್೯ 11 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ‌ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಮದ್ದೂರು ತಹಶೀಲ್ದಾರ್ ನರಸಿಂಹ ಮೂರ್ತಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Read More