TV10 Kannada Exclusive

ದಸರಾ ಕ್ರೀಡೆ ಹಾಗೂ ಸಿಎಂ ಕಪ್ ವಿಜೇತರಿಗೆ ಬಹುಮಾನ ವಿತರಣೆ…

ದಸರಾ ಕ್ರೀಡೆ ಹಾಗೂ ಸಿಎಂ ಕಪ್ ವಿಜೇತರಿಗೆ ಬಹುಮಾನ ವಿತರಣೆ… ಮೈಸೂರು,ಅ21,Tv10 ಕನ್ನಡ ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಸರಾ ಕ್ರೀಡಾ ಉಪಸಮಿತಿ ವತಿಯಿಂದ ಶನಿವಾರ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ
Read More

ಒಕ್ಕಲಿಗರ ಕುರಿತು ಅವಹೇಳನಾಕಾರಿ ಹೇಳಿಕೆ ಆರೋಪ…ಪ್ರೊ.ಕೆ.ಎಸ್.ಭಗವಾನ್ ವಿರುದ್ದ FIR ದಾಖಲು…

ಮೈಸೂರು,ಅ21,Tv10 ಕನ್ನಡ ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಪ್ರೊ ಕೆ ಎಸ್ ಭಗವಾನ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ.ಐಪಿಸಿ ಸೆಕ್ಷನ್ 153 ಹಾಗೂ 153 A ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮೈಸೂರಿನ ಗಂಗಾಧರ್ ಸಿ ಎಂಬುವವರು ದೂರು ನೀಡಿದ್ದರು.ಗಂಗಾಧರ್ ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ಅಧ್ಯಕ್ಷರಾಗಿದ್ದಾರೆ.ಪ್ರೊ ಭಗವಾನ್ ರವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ
Read More

ಬಸವೇಶ್ವರ ವೃತ್ತದಲ್ಲಿ ತಲೆ ಎತ್ತಲಿರುವ ಮಧ್ಯದ ಅಂಗಡಿ…ಸ್ಥಳೀಯರ ಭಾರಿ ವಿರೋಧ…

ನಂಜನಗೂಡು,ಅ20,Tv10 ಕನ್ನಡ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತ ಮತ್ತು ಕಸುವಿನಹಳ್ಳಿ ಗ್ರಾಮದಲ್ಲಿ ತಲೆ ಎತ್ತುತ್ತಿರುವ ಮಧ್ಯದ ಅಂಗಡಿಗೆ ಭಾರಿ ವಿರೋಧ ವ್ಯಕ್ತವಾಗಿದೆ.ವೀರಶೈವ ಲಿಂಗಾಯತ ಸಂಘಟನೆ ಮಹಿಳೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ಸುತ್ತೂರು ದೇಶೀಕೇಂದ್ರ ಸ್ವಾಮೀಜಿ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ನಂಜನಗೂಡಿನ ಶಾಸಕ ದರ್ಶನ್ ದ್ರುವ ನಾರಾಯಣ್ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ದೇವಿರಮ್ಮನಹಳ್ಳಿ ಸಮೀಪದ ವಿಶ್ವಗುರು ಶ್ರೀ ಬಸವೇಶ್ವರ ವೃತ್ತದ ಬಳಿ ಹಾಗೂ
Read More

ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…

ನಂಜನಗೂಡು,ಅ20,Tv10 ಕನ್ನಡ ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ ನಂಜನಗೂಡಿನ ಹರತಲೆ ಗ್ರಾಮದಲ್ಲಿ ನಡೆದಿದೆ.ಪತಿ ಮುಂದೆಯೇ ನೀರಿಗೆ ಹಾರಿದ ಪತ್ನಿಯ ಶೋಧನಾ ಕಾರ್ಯ ಮುಂದುವರೆದಿದೆ. ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದ ಶಂಕರ್ ಮೃತ ದುರ್ದೈವಿ.ಪತ್ನಿ ಬೇಬಿಗಾಗಿ ಹುಡುಕಾಟ ಮುಂದುವರೆದಿದೆ.ನಂಜನಗೂಡು ಪಟ್ಟಣದ ಅಪೋಲೋ ಆಸ್ಪತ್ರೆಯಲ್ಲಿ ರಿಸೆಪ್ಶನ್ ಆಗಿರುವ ಬೇಬಿಯನ್ನಲಗೇಜ್ ಆಟೋ ನಡೆಸುತ್ತಿರುವ ಶಂಕರ್ ವಿವಾಹವಾಗಿದ್ದರು.ದಂಪತಿಗೆ 5 ವರ್ಷದ ಹೆಣ್ಣು ಮಗು
Read More

ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…

ಮೈಸೂರು,ಅ20,Tv10 ಕನ್ನಡ ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದುಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ ದಸರಾ ಪ್ರಯುಕ್ತ ಪಾರಂಪರಿಕಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ
Read More

ದಸರಾ2023:ಕೇಂದ್ರ ಕಾರಾಗೃಹವಾಸಿಗಳಿಗೆ ಯೋಗಾಭ್ಯಾಸ…

ಮೈಸೂರು,ಅ20,Tv10 ಕನ್ನಡ ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು. ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ಬಿ.ಎಸ್ ರಮೇಶ್ ಅವರು ತಿಳಿಸಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ಯೋಗದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ
Read More

ರಘು ದೀಕ್ಷಿತ್ ಸಂಜಿತ್ ಹೆಗಡೆ ಝಲಕ್…ಸಂಭ್ರಮಿಸಿದ ಟೀನೇಜ್…ಮೈಸೂರು ಅ19,Tv10 ಕನ್ನಡ

ಯುವ ದಸರಾದ ಎರಡನೇ ದಿನವಾದ ಇಂದು ಸ್ಯಾಂಡಲ್ ವುಡ್‌ನ ಗಾಯಕ ರಘು ದೀಕ್ಷಿತ್ ಮತ್ತು ಯುವ ಗಾಯಕ ಸಂಜಿತ್ ಹೆಗಡೆ ಅವರು ತಮ್ಮ ಸಂಗೀತ ಸುಧೆ ಮೂಲಕ ನೆರೆದಿದ್ದ ಯುವ ಸಮೂಹವನ್ನು ರಂಜಿಸಿದರು.ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಉಪಸಮಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಸಮೂಹ ಸಂಭ್ರಮಿಸಿತು. ಮೊದಲ ದಿನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಯುವಸಮೂಹಕ್ಕೆ ಕಿಚ್ಚು ಹಚ್ಚಿಸಿದಂತೆ ಎರಡನೇ ದಿನ ರಘು ದೀಕ್ಷಿತ್
Read More

ದಸರಾ 2023:ಉರ್ದು ಕವಿಗೋಷ್ಠಿ…ಡಾ.ಹೆಚ್.ಸಿ.ಎಂ.ರಿಂದ ಉದ್ಘಾಟನೆ…

ಮೈಸೂರು,ಅ19,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉರ್ದು ಕವಿಗೋಷ್ಠಿಯನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.ಮೈಸೂರಿನ ಕ್ಲಾಸಿಕ್ ಕನ್ವೆನ್ಷನಲ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಉರ್ದು ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರುಭಾಷೆ ಎನ್ನುವುದು ನಮ್ಮ ಸಾಂಸ್ಕೃತಿಕ ಹಿನ್ನೆಲೆ ಮತ್ತು ಚರಿತ್ರೆಯನ್ನು ತಿಳಿಸುವಂತಹ ಒಂದು ಸಂಪರ್ಕ ಸಾಧನ. ಕವಿತೆ ಕವಿಗೂ ವ್ಯತ್ಯಾಸವಿಲ್ಲ. ಹಾಗೆಯೇ ರವಿ ಕಾಣದನ್ನು ಕವಿ ಕಂಡ ಎನ್ನುವ ಹಾಗೆ ಕವಿಯು ಯಾವ ಭಾಷೆಯನ್ನು ಬಳಸಿದರು ಆತನ ಸಾಹಿತ್ಯದ
Read More

ದಸರಾ2023:ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ…ಶಾಸಕ ಶ್ರೀವತ್ಸ ರಿಂದ ಉದ್ಘಾಟನೆ…

ಮೈಸೂರು ಆ19,Tv10 ಕನ್ನಡ ದಸರಾ ವಸ್ತು ಪ್ರದರ್ಶನ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯನ್ನು ದೀಪ ಬೆಳಗುವುದರ ಮೂಲಕ ಶಾಸಕ ಶ್ರೀವತ್ಸ ಉದ್ಘಾಟಿಸಿದರು.ನಂತರ ಮಾತನಾಡಿ ಅವರು ಮೈಸೂರು ದಸರಾದ ಎಲ್ಲಾ ಕಾರ್ಯಕ್ರಮಗಳನ್ನು ಸರ್ಕಾರವು ಬಹಳ ಅಚ್ಚುಕಟ್ಟಾಗಿ ಆಯೋಜಿಸುತ್ತಿದ್ದು ದಸರಾ ಎಂದರೆ ಕಲೆ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ಆರೋಗ್ಯದ ನಿಟ್ಟಿನಲ್ಲಿ ಯೋಗಕ್ಕೆ ಮೈಸೂರು ದಸರಾದಲ್ಲಿ ಬಹಳ
Read More

ಮಗುವನ್ನ ಕೆರೆಗೆ ಎಸೆದು ಕೊಂದ ತಂದೆ ಅಂದರ್…ಸಾಕಲು ಆಗಲ್ಲ ಎಂದು ಕೃತ್ಯ…

ಪಿರಿಯಾಪಟ್ಟಣ,ಅ19,Tv10 ಕನ್ನಡ ಸಾಕಲು ಆಗಲ್ಲ ಎಂಬ ಕಾರಣಕ್ಕೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿದ ಪಾಪಿ ತಂದೆ ಪೊಲೀಸರ ಅತಿಥಿಯಾಗಿದ್ದಾನೆ.ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.ಮಾಕೋಡು ಗ್ರಾಮದ ಗಣೇಶ್ (30) ಕೊಲೆ ಆರೋಪಿ.ಒಂದು ವರೆ ವರ್ಷದ ಮಗುವನ್ನು ಕೆರೆಗೆ ಎಸೆದು‌ ಕೊಲೆ ಮಾಡಿದ್ದಾನೆ.2014ರಲ್ಲಿ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ನಾರಾಯಣ ಸ್ವಾಮಿ ಎಂಬುವವರ ಮಗಳು ಲಕ್ಷ್ಮೀ ಎಂಬುವವಳನ್ನು ಮದುವೆಯಾಗಿದ್ದ ಗಣೇಶ್ದೇವನಹಳ್ಳಿಯಲ್ಲಿಯೆ ಹೆಂಡತಿಯೊಂದಿಗೆ ವಾಸವಿದ್ದ.ದಂಪತಿಗೆಹಾರಿಕಾ
Read More