TV10 Kannada Exclusive

ಸರೋಜಿನಿ ಮಹಿಷಿ ವರದಿ ಶೀಘ್ರ ಅನುಷ್ಠಾನವಾಗಲಿ…87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಆಗ್ರಹ…

ಮಂಡ್ಯ,ಡಿ20,Tv10 ಕನ್ನಡ ಸಕ್ಕರೆ ನಾಡಿನಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೊಳಗಿದೆ.ಎಲ್ಲೆಲ್ಲೂ ಕನ್ನಡ ಕಂಪು ಪಸರಿಸುತ್ತಿದೆ.ಸಾಹಿತ್ಯ ಸಮ್ಮೇಳನವನ್ನ ಉದ್ಘಾಟಿಸಿ ಮಾತನಾಡಿದ ಅಧ್ಯಕ್ಷರಾದ ಗೊ.ರೂ.ಚೆನ್ನಬಸ್ಸಪ್ಪ ಕನ್ನಡ ಭಾಷೆಯ ರಕ್ಷಣೆ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಕಿವಿಮಾತು ಹೇಳಿದ್ದಾರೆ.ಭಾಷಣದ ಉದ್ದಕ್ಕೂ ಕನ್ನಡದ ಉಳಿವು ಹಾಗೂ ಏಳಿಗೆ ಬಗ್ಗೆ ಸಲಹೆಗಳನ್ನ ನೀಡಿದ್ದಾರೆ.ಕನ್ನಡವು ಕಾವ್ಯ, ಕವನ, ನಾಟಕ, ಕಾದಂಬರಿ, ವ್ಯಾಕರಣ ಮುಂತಾದ ಪರಂಪರೆಯ ಸಾಹಿತ್ಯಕ್ಕೆ ಸೀಮಿತವಾಗಿ ಉಳಿದಿಲ್ಲ.ವಿಜ್ಞಾನ, ತಂತ್ರಜ್ಞಾನ, ಕಾನೂನು, ವೈದ್ಯಕೀಯ ಮುಂತಾದ
Read More

ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಡಿ20,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿಕೊಂಡು ಸರ್ಕಾರಿ ಜಮೀನು ಕಬಳಿಸಿದ್ದ ಭೂಗಳ್ಳರಿಗೆ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.25 ಕೋಟಿ ಬೆಲೆ ಬಾಳುವ 5 ಎಕ್ರೆ 20 ಗುಂಟೆ ಜಮೀನನ್ನ ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿಗಳ ನ್ಯಾಯಾಲಯದ ಪ್ರಕರಣ ಸಂಖ್ಯೆ RP-64/2024 ದಿನಾಂಕ 03-12-2024 ರ ತೀರ್ಪಿನಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಇಂದು ತಮ್ಮ ಸಿಬ್ಬಂದಿಗಳ ಸಮೇತ ಕಾರ್ಯಾಚರಣೆ ನಡೆಸಿ ಜಮೀನನ್ನ ವಶಕ್ಕೆ ಪಡೆದಿದ್ದಾರೆ.ಮೈಸೂರು ತಾಲೂಕು, ಜಯಪುರ ಹೋಬಳಿ, ಕೇರ್ಗಳ್ಳಿ ಗ್ರಾಮದ ಸರ್ವೆ ನಂಬರ್ 60
Read More

ಅಪರಾಧ ತಡೆ ಮಾಸಾಚರಣೆ…ಮಹಿಳೆಯರಿಗೆ ಅರಿವು…ಅಪರಾಧಗಳ ಕುರಿತು ಕಾರ್ಯಾಗಾರ…

ಮೈಸೂರು,ಡಿ19,Tv10 ಕನ್ನಡ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೈಸೂರು ನಗರ ಪೊಲೀಸ್ ವತಿಯಿಂದ ವಿಜಯನಗರ ಉಪವಿಭಾಗ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಅಪರಾಧಗಳ ಕುರಿತ ಕಾನೂನು ಕಾರ್ಯಾಗಾರ ಏರ್ಪಡಿಸಲಾಗಿತ್ತು.ಕೆ.ಆರ್.ಎಸ್.ರಸ್ತೆಯಲ್ಲಿರುವ ಗೋವಿಂದರಾವ್ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ನೂರಾರು ಮಹಿಳೆಯರು ಕಾನೂನಿನ ಬಗ್ಗೆ ಮಾಹಿತಿ ಪಡೆದುಕೊಂಡರು.ಮಹಿಳೆಯರ ವಿರುದ್ದ ನಡೆಯುತ್ತಿರುವ ಶೋಷಣೆ,ದೌರ್ಜನ್ಯ,ಲೈಂಗಿಕ ಕಿರುಕುಳ,ವರದಕ್ಷಿಣೆ ಕಿರುಕುಳ,ಆನ್ ಲೈನ್
Read More

ಮಲಿನವಾಗುತ್ತಿರುವ ಹುಲ್ಲಹಳ್ಳಿ ನಾಲೆ ನೀರು…ಕಾವೇರಿ ನೀರಾವರಿ ನಿಗಮದಿಂದ ದೇಬೂರು ಗ್ರಾ.ಪಂ. ಪಿಡಿಓ ಗೆ ಪತ್ರ…

ನಂಜನಗೂಡು,ಡಿ18,Tv10 ಕನ್ನಡ ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹುಲ್ಲಹಳ್ಳಿ ನಾಲೆಯ ಕೆಕವು ಭಾಗಗಳಲ್ಲಿ ನಾಲೆ ನೀರು ಮಲಿನವಾಗುತ್ತಿದೆ.ಕೆಲವು ಹಳ್ಳಿಗಳಿಂದ ಬರುತ್ತಿರುವ ಚರಂಡಿ ನೀರು ನಾಲೆಗೆ ಸೇರುತ್ತಿರುವುದರಿಂದ ಮಲಿನವಾಗುತ್ತಿದೆ.ಅಲ್ಲದೆ ಸರ್ವಿಸ್ ರಸ್ತೆಗಳ ಇಕ್ಕೆಲಗಳಲ್ಲಿ ತ್ಯಾಜ್ಯಗಳನ್ನ ಸುರಿಯಲಾಗುತ್ತಿದೆ.ಹೀಗಾಗಿ ಪರಿಸರ,ನೀರು, ಅಂತರ್ಜಲ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.ಹೀಗಾಗಿ ಕೂಡಲೇ ಸ್ವಚ್ಛತೆಗೆ ಆಧ್ಯತೆ ನೀಡುವಂತೆ ಪಿಡಿಓ ಗೆ ಕಾವೇರಿ ನೀರಾವರಿ ನಿಗಮದಿಂದ ಪತ್ರ ರವಾನೆಯಾಗಿದೆ.ಕಾವೇರಿ ನೀರಾವರಿ ಅಧಿನಿಯಮ 1965 ರ
Read More

ಕೇಂದ್ರ ಕಾರಾಗೃಹ ಆವರಣದಲ್ಲಿ ನಿಷೇಧಿತ ವಸ್ತುಗಳು ಪತ್ತೆ…ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಡಿ18,Tv10 ಕನ್ನಡ ಮೈಸೂರು ಕೇಂದ್ರ ಕಾರಾಗೃಹದ ಆವರಣದಲ್ಲಿ ನಿಷೇಧತ ವಸ್ತುಗಳು ಪತ್ತೆಯಾಗಿದೆ.ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕಪ್ಪು ಬಣ್ಣದ ಬಟ್ಟೆಯಿಂದ ಸುತ್ತಿದ್ದ ಪ್ಯಾಕೆಟ್ ಕಂಡು ಬಂದಿದೆ.ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಿದಾಗ ಪ್ಯಾಕೆಟ್ ನಲ್ಲಿ ಒಂದು ಮೊಬೈಲ್,ಒಂದು ಬ್ಯಾಟರಿ,ಗಾಂಜಾ ಕಂಡು ಬಂದಿದೆ.ಸ್ಮಶಾನಕ್ಕೆ ಹೊಂದಿಕೊಂಡಂತೆ ಇರುವ ಕಾರಾಗೃಹದ ಗೋಡೆ ಒಳಗೆ ವಸ್ತುಗಳು ಪತ್ತೆಯಾಗಿದೆ.ಹೊರಗಿನಿಂದ ಅನಾಮಧೇಯ ವ್ಯಕ್ತಿಗಳು ಕಾರಾಗೃಹದ ಒಳಗೆ ಎಸೆದಿರಬಹುದೆಂದು ಶಂಕಿಸಲಾಗಿದೆ.ಈ ಸಂಭಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ಮೈಸೂರು,ಡಿ17,Tv10 ಕನ್ನಡ ರಾಜಕೀಯವಾಗಿ ಬೆಳೆಯುತ್ತಿರುವುದನ್ನ ಸಹಿಸದ ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ದಂಪತಿ ಮೇಲೆ ಗೂಂಡಾವರ್ತನೆ ನಡೆಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆನ್ನಪಟ್ಟಣ ನಗರದ ಪವಿತ್ರಾ ಪ್ರಭಾಕರ್ ರೆಡ್ಡಿ ಹಾಗೂ ಇವರ ಸಹಚರರಾದ ರಂಗಪ್ಪ,ಕೆಂಡಗಣ್ಣ,ಅಭಿ,ಶ್ರೀನಿವಾಸ,ಶಿವು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿವೇಕಾನಂದ ನಗರದ ನಾಗರತ್ನ
Read More

ಚಿರತೆ ದಾಳಿ…10 ಮೇಕೆಗಳು ಬಲಿ…ಗ್ರಾಮಸ್ಥರಲ್ಲಿ ಆತಂಕ…

ಮೈಸೂರು,ಡಿ17,Tv10 ಕನ್ನಡ ಚಿರತೆ ದಾಳಿಗೆ 10 ಮೇಕೆಗಳು ಬಲಿಯಾದ ಘಟನೆಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿಯಲ್ಲಿ ನಡೆದಿದೆ.ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬುವರಿಗೆ ಸೇರಿದ ಮೇಕೆಗಳು ಬಲಿಯಾಗಿವೆ.ಮೇಕೆ ಸಾಕಾಣಿಕೆಯಿಂದ ಜೀವನ ಸಾಗಿಸುತ್ತಿದ್ದ ರೈತ ಬಸವರಾಜು ಕಂಗಾಲಾಗಿದ್ದಾರೆ.ಚಿರತೆ ದಾಳಿಯಿಂದಾಗಿ ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ.ಎಂದಿನಂತೆ ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ಮೇಕೆಗಳನ್ನು ಮೇಯಲು ಬಿಟ್ಟಿದ್ದ ಬಸವರಾಜುಸಂಜೆ ಮನೆಗೆ ಹೊಡೆದುಕೊಂಡು ಹೋಗಲು ಸ್ಥಳಕ್ಕೆ ಬಂದಾಗ ಏಳು ಮೇಕೆಗಳು ರಕ್ತಸಿಕ್ತವಾಗಿ ಸತ್ತು
Read More

ಪತಿಯ ಅನೈತಿಕ ಸಂಭಂಧ…ಪತ್ನಿ ಅನುಮಾನಾಸ್ಪದ ಸಾವು…ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…ಕೊಲೆ ಆರೋಪ…ಪತಿ,ಪ್ರಿಯತಮೆ,ಸಂಭಂಧಿಕರ ವಿರುದ್ದ ದೂರು…UDR ದಾಖಲು…

ಮೈಸೂರು,ಡಿ16,Tv10 ಕನ್ನಡ ಪತಿಯ ಅನೈತಿಕ ಸಂಭಂಧದ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಮನೆ ಬಿಟ್ಟ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರು ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೂರ ಗ್ರಾಮದಲ್ಲಿ ನಡೆದಿದೆ.ಗೃಹಿಣಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಸಂಭಂಧಿಕರು ಪತಿ,ಪ್ರಿಯತಮೆ ಹಾಗೂ ಇಬ್ಬರು ಸಂಭಂಧಿಕರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ತೆನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.ಸಧ್ಯ ಜಯಪುರ ಪೊಲೀಸ್ ಠಾಣೆಯಲ್ಲಿ UDR ದಾಖಲಾಗಿದೆ. ನಂಜನಗೂಡು ತಾಲೂಕು ಗೌಡರಹುಂಡಿ ಗ್ರಾಮದ ಸರೋಜಮ್ಮ
Read More

ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಮೈಸೂರು,ಡಿ16,Tv10 ಕನ್ನಡ ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಸೇರಿದಂತೆ ಇತರ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇತ್ತೀಚೆಗೆ ಹೆಚ್ಚಿನ ಲಾಭದ ಆಮಿಷ ನೀಡಿ ಸಾಮಾಜಿಕ ಜಾಲತಾಣಗಳ ಮೂಲಕ ಹಿರಿಯ ನಾಗರೀಕರನ್ನೇ ಗುರಿಯಾಗಿ ಇಟ್ಟುಕೊಂಡು ವಂಚಕರು ಲಕ್ಷಾಂತರ ರೂಗಳಿಗೆ ಪಂಗನಾಮ ಹಾಕುತ್ತಿರುವ ಪ್ರಕರಣಗಳು ದಾಖಲಾಗುತ್ತಿದೆ.ಈ ಹಿನ್ನಲೆ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಪರಾಧ ತಡೆ ಮಾಸಾಚರಣೆ
Read More

ದತ್ತಪೀಠದಲ್ಲಿ ಹನುಮ ಜಯಂತಿ ಸಂಭ್ರಮ…ಗಣಪತಿ ಶ್ರೀಗಳಿಂದ ಕಾರ್ಯಸಿದ್ದಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ…

ಮೈಸೂರು,ಡಿ13,Tv10 ಕನ್ನಡ ಹನುಮ ಜಯಂತಿ ಹಿನ್ನಲೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಅವಧೂತ ದತ್ತ ಪೀಠದಲ್ಲಿ ಕಾರ್ಯಸಿದ್ದ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆಗಳು ನೆರವೇರಿದವು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಇಂದು ವಿಶೇಷ ಪೂಜೆ ಸಲ್ಲಿಸಿದರು.ಸಾವಿರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದರು…
Read More