TV10 Kannada Exclusive

11 ವರ್ಷಗಳ ನಂತರ ಬಾಗಿಲು ತೆರೆದ ಮಾರಮ್ಮನ ದೇವಾಲಯ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಯಶಸ್ವಿ ಶಾಂತಿಸಭೆ…ಗ್ರಾಮದಲ್ಲಿ ಸಂತಸ…

ಮೈಸೂರು,ಡಿ13,Tv10 ಕನ್ನಡ 11 ವರ್ಷಗಳ ನಂತರ ಮುಚ್ಚಿದ ಮಾರಮ್ಮನ ದೇವಸ್ಥಾನದ ಬಾಗಿಲು ಇಂದು ತೆರೆಯಲಾಯಿತು.ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ತೆಗೆದು ಕೊಂಡ ತೀರ್ಮಾನದಂತೆ ಇಂದು ಬಾಗಿಲು ತೆರೆದು ವಿಶೇಷ ಪೂಜೆ ನೆರವೇರಿಸಲಾಯಿತು. ಮೈಸೂರು ತಾಲೂಕು ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಇಂದಿನಿಂದ ಎಂದಿನಂತೆ ಪೂಜಾ ಕೈಂಕರ್ಯಗಳ ನೆರವೇರಲಿದೆ.ಸುಮಾರು 11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಭಂಧ ಹೇರಿದ ಹಿನ್ನಲೆಯಲ್ಲಿ ಭಾರಿ
Read More

ಹನುಮ ಜಯಂತಿ ಹಿನ್ನಲೆ…ಹುಣಸೂರು ಪಟ್ಟಣದಾದ್ಯಂತ ಮೂರು ದಿನಗಳ ಕಾಲ ಮಧ್ಯ ಮಾರಾಟ ನಿಷೇಧ…

ಹುಣಸೂರು,ಡಿ12,Tv10 ಕನ್ನಡ ಹನುಮ ಜಯಂತಿ ಹಿನ್ನಲೆ ಡಿ.13 ರಿಂದ ಹುಣಸೂರು ತಾಲೂಕಿನಾದ್ಯಂತ ಹಾಗೂ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮ ಮತ್ತು ಹೆಚ್.ಡಿ.ಕೋಟೆಚತಾಲೂಕಿನ ಅಣ್ಣೂರು ಗ್ರಾಮದಲ್ಲಿ ಮಧ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.ಡಿ13 ಸಂಜೆ 6 ಗಂಟೆಯಿಂದ ಡಿ.15 ಮಧ್ಯರಾತ್ರಿ 12 ರ ವರೆಗೆ ಮಧ್ಯದ ಅಂಗಡಿಗಳಲ್ಲಿ ಮಧ್ಯ ಮಾರಾಟ ನಿಷೇಧಿಸಲಾಗಿದೆ.ಮೂರು ದಿನಗಳ ಕಾಲ ಹನುಮ ಜಯಂತಿವಹಿನ್ನಲೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು,ಹೋಮ ಹವನಗಳು,ವಿಶೇಷ ಪೂಜೆಗಳು ಹಾಗೂ ಅದ್ದೂರಿ
Read More

ಅಂಗಡಿ ಮುಂದೆ ಗಲಾಟೆ ಮಾಡಬೇಡಿ ಅಂದಿದ್ದಕ್ಕೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ FIR ದಾಖಲು…

ನಂಜನಗೂಡು,ಡಿ12,Tv10 ಕನ್ನಡ ಅಂಗಡಿ ಮುಂದೆ ಗಲಾಟೆ ಮಾಡಬೇಡಿ ಅಂದಿದ್ದಕ್ಕೆ ಮಾಲೀಕನ ತಲೆಗೆ ಚಾಕುವಿನಿಂದ ಇರಿದ ಘಟನೆ ನಂಜನಗೂಡಿನ ವಾಸುಕಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಇರಿತಕ್ಕೆ ಒಳಗಾದ ಗಿರೀಶ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಶಂಕರಪುರ ಗ್ರಾಮದ ಯೋಗಿ ಹಾಗೂ ಹರ್ಷಿತ್ ಕಿರಣ್ ಮತ್ತು ಇತರರ ಮೇಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೀ ಅಂಗಡಿ ಮುಂದೆ ಬಂದ ಯೋಗಿ ಹಾಗೂ ಇತರರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡುತ್ತಿದ್ದರು.ಅಂಗಡಿ ಮುಂದೆ
Read More

ಪೊಲೀಸ್ ಠಾಣೆ ಸಮೀಪದಲ್ಲೇ ಭೀಕರ ಹತ್ಯೆ…ಪುಡಿ ರೌಡಿಗಳ ಅಟ್ಟಹಾಸ…

ಮಂಡ್ಯ,ಡಿ12,Tv10 ಕನ್ನಡ ಹಾಡುಹಗಲೇ ಪೊಲೀಸ್ ಠಾಣೆ ಸಮೀಪ ಪುಡಿರೌಡಿಗಳ ಅಟ್ಟಹಾಸಕ್ಕೆ ಓರ್ವನ ಬಲಿಯಾದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್ ನಲ್ಲಿ ನಡೆದಿದೆ.ಠಾಣೆಯ ಕೂಗಳತೆ ದೂರದಲ್ಲಿ ಬರ್ಭರ ಹತ್ಯೆ ನಡೆದಿದೆ.ಪೊಲೀಸ್ ಠಾಣೆ ಸಮೀಪ ಇರುವ ಸಂತೆ ಮೈದಾನದ ಬೇಕರಿಯಲ್ಲಿ ಘಟನೆ ನಡೆದಿದೆ.ಕೆಆರ್‌ನಗರ ತಾಲೂಕಿನ ಬಸವರಾಜಪುರ ಗ್ರಾಮದ ಚೇತನ್ (40) ಕೊಲೆಯಾದ ವ್ಯಕ್ತಿ.ಸುಮಾರು 10ವರ್ಷಗಳ ಹಿಂದೆ ಬೋರೆಆನಂದೂರು ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದ. 7 ರಿಂದ 8ವರ್ಷದ ಗಂಡು ಮಗು ಇದ್ದು, ಈತ
Read More

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಗ್ರೀನ್ ಸಿಗ್ನಲ್…ಪ್ರಸ್ತುತ ಅಧಿವೇಶನದಲ್ಲೇ ಮಸೂದೆ ಮಂಡಿಸುವ ಸಾಧ್ಯತೆ…

ನವದೆಹಲಿ,ಡಿ12,Tv10 ಕನ್ನಡ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ
Read More

ಎಸ್ ಎಂ ಕೃಷ್ಣ ಅವರ ಅಂತಿಮ ಕ್ರಿಯೆ ಅತ್ಯಂತ ಗೌರವಯುತವಾಗಿ ನಡೆದಿದೆ…ಸರ್ಕಾರದ ನಡುವಳಿಕೆ ಮೆಚ್ಚುವಂತದ್ದು…ಎಂಎಲ್ಸಿ ಹೆಚ್.ವಿಶ್ವನಾಥ್…

ಮೈಸೂರು,ಡಿ12,Tv10 ಕನ್ನಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರ ಅಂತ್ಯಕ್ರಿಯೆ ಗೌರವಯುತವಾಗಿ ನಡೆದಿದೆ.ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಮೆಚ್ಚುಗೆ ವ್ಯಕ್ತಪಡಿಸುವಂತಹದ್ದು.ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಇದೇ ವೇಳೆ ಮಾತನಾಡಿಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದರು.ಆದರೆ ಸೋನಿಯಾಗಾಂಧಿ ತುಟಿ ಬಿಚ್ಚಲಿಲ್ಲ.ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು, ದ್ವೇಷ ಇರಬಾರದು.ಸತ್ತಾಗಲೂ ದ್ವೇಷ ಮಾಡುವುದು ಸರಿಯಲ್ಲ.ಸಾರ್ವಜನಿಕ ಜೀವನದಲ್ಲಿರುವವರು ಪಕ್ಷಾತೀತವಾಗಿ ನಡೆದುಕೊಳ್ಳಬೇಕು.ಕಾಂಗ್ರೆಸ್ ನ
Read More

ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…

ಮೈಸೂರು,ಡಿ12,Tv10 ಕನ್ನಡ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಇಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಾಜ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ ಇಂದು Prevention of Crime & Cyber Safe Girl ಎಂಬ ವಿಷಯದ ಬಗ್ಗೆ ಜಾಗೃತಿ ಮೂಡಿಸಲಾಯಿತು. ದೇವರಾಜ ಪೊಲೀಸ್ ಠಾಣೆಯ ಪಿಎಸ್ಐ ಜೈಕೀರ್ತಿ ರವರು ಉಪನ್ಯಾಸ ನೀಡಿದರು.ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಗಳು ಹೆಚ್ಚುತ್ತಿವೆ.ಯುವ ಜನಾಂಗ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಮುಳುಗಿದ್ದಾರೆ.ನಯವಂಚಕರು ಅಮಾಯಕರನ್ನ ನಾನಾ
Read More

ಕೊಟ್ಟಿದ್ದು 4 ಲಕ್ಷ…9 ತಿಂಗಳಲ್ಲಿ ಬಡ್ಡಿ ಸಮೇತ ಪೀಕಿದ್ದು10 ಲಕ್ಷ…ಸಾಲವೇ ತೀರಿಲ್ಲವಂತೆ…ಮೈಸೂರಿನಲ್ಲೊಬ್ಬಳು ಬಡ್ಡಿ ಬಂಗಾರಮ್ಮ…

ಮೈಸೂರು,ಡಿ12,Tv10 ಕನ್ನಡ ಸಹಾಯ ಮಾಡುವ ನೆಪದಲ್ಲಿ ಮಹಿಳಾ ಟೈಲರ್ ಒಬ್ಬರಿಗೆ ಹಂತಹಂತವಾಗಿ 4 ಲಕ್ಷ ಸಾಲ ನೀಡಿ ಕೇವಲ 9 ತಿಂಗಳಿಗೆ ಬಡ್ಡಿ,ಚಕ್ರಬಡ್ಡಿ ಸೇರಿಸಿ 10.90 ಲಕ್ಷ ಪೀಕಿದ್ದಲ್ಲದೆ ಮತ್ತೆ ಲಕ್ಷಾಂತರ ಹಣ ಕೊಡಬೇಕೆಂದು ಇಬ್ಬರು ಮಹಿಳೆಯರು ಟಾರ್ಚರ್ ನೀಡುತ್ತಿರುವ ಪ್ರಕರಣವೊಂದು ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಹೂಟಗಳ್ಳಿ ನಿವಾಸಿ ಪವಿತ್ರಾ ಎಂಬಾಕೆಗೆ ಅನುಷಾ ಹಾಗೂ ರೇಖಾ ಎಂಬುವರು ಹಣಕ್ಕಾಗಿ ಟಾರ್ಚರ್ ನೀಡುತ್ತಿದ್ದಾರೆ.ಬಡ್ಡಿ,ಚಕ್ರಬಡ್ಡಿ ವಸೂಲಿ ಮಾಡಿ ಮತ್ತಷ್ಟು ಹಣಕ್ಕೆ ಒತ್ತಡ ಹೇರುತ್ತಿರುವ
Read More

ವರ್ಕ್ ಫ್ರಂ ಹೋಮ್ ನಲ್ಲಿ ಹೆಚ್ಚಿನ ಆದಾಯ ಆಮಿಷ…19.89 ಲಕ್ಷ ಕಳೆದುಕೊಂಡ ಮಹಿಳೆ

ಮೈಸೂರು,ಡಿ12,Tv10 ಕನ್ನಡ ವರ್ಕ್ ಫ್ರಂ ಹೋಮ್ ನಿಂದ ಹೆಚ್ಚಿನ ಆದಾಯ ಗಳಿಸಬಹುದೆಂಬ ಆಮಿಷವೊಡ್ಡಿದ ನಯವಂಚಕರು ಮೈಸೂರಿನ ಮಹಿಳೆಯೊಬ್ಬರಿಗೆ 19.89 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ರಾಜೀವ್ ನಗರದ ನಿವಾಸಿ ತಹಸೀನಾ ರಾವ್ ತರ್ ಹಣ ಕಳೆದುಕೊಂಡ ಮಹಿಳೆ.ಟೆಲಿಗ್ರಾಂ‌ ಆಪ್ ಮೂಲಕ ವಂಚಕರು ತಹಸೀನಾ ರಾವ್ ತರ್ ಗೆ ವರ್ಕ್ ಫ್ರಂ ಹೋಮ್ ಮೂಲಕ ಹೆಚ್ಚಿನ ಆದಾಯ ಗಳಿಸಬಹುದೆಂಬ ಸಂದೇಶ ಕಳಿಸಿದ್ದಾರೆ.ಇದನ್ನ ನಂಬಿದ ತಹಸೀನಾ ರಾವ್ ತರ್ ಟೆಲಿಗ್ರಾಂ ಗ್ರೂಪ್ ಗೆ ಸೇರಿಕೊಂಡಿದ್ದಾರೆ.ಪ್ರತಿದಿನ 2
Read More

ಅಕ್ರಮ ಸಂಭಂಧ ವಿರೋಧಿಸಿದ್ದೇ ತಪ್ಪಾಯ್ತು…ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ…ಪತಿ ಹಾಗೂ ಪ್ರಿಯತಮೆ ವಿರುದ್ದ ಪ್ರಕರಣ ದಾಖಲು…

ಮೈಸೂರು,ಡಿ12,Tv10 ಕನ್ನಡ ಅಕ್ರಮ ಸಂಭಂಧವನ್ನ ವಿರೋಧಿಸಿ ಪ್ರಶ್ನಿಸಿದ ಪತ್ನಿ ಹಾಗೂ ಮಗಳ ಮೇಲೆ ಪ್ರಿಯತಮೆ ಜೊತೆ ಸೇರಿ ಪತಿರಾಯ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಶ್ವೇತಾ ಎಂಬುವರು ತಮ್ಮ ಪತಿ ಸಂತೋಷ್ ಕುಮಾರ್ ಹಾಗೂ ಆತನ ಪ್ರಿಯತಮೆ ಶ್ವೇತಾ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶ್ವೇತಾ ಹಾಗೂ ಸಂತೋಷ್ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.ಬೆಂಗಳೂರಿನ ಕೆಂಗೇರಿಯ ಲಿಂಗಧೀರನಹಳ್ಳಿ ಬಡಾವಣೆ
Read More