TV10 Kannada Exclusive

ಸಾಲದ ಹಣಕ್ಕಾಗಿ ಸಹದ್ಯೋಗಿಯಿಂದ ಕಿರುಕುಳ…ನಾಲೆಯಲ್ಲಿ KSRTC ಬಸ್ ಕಂಡಕ್ಟರ್ ಶವ ಪತ್ತೆ…ಕೊಲೆಯೋ…? ಆತ್ಮಹತ್ಯೆಯೋ…?

ಮೈಸೂರು,ಡಿ7,Tv10 ಕನ್ನಡ ಸಲದ ಹಣ ವಸೂಲಿಗಾಗಿ ಸಹದ್ಯೋಗಿ ನೀಡಿದ ಕಿರುಕುಳಕ್ಕೆ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಮನೆ ಬಿಟ್ಟ ಹತ್ತು ದಿನಗಳ ನಂತರ ವರುಣಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಸ್ ಕಂಡಕ್ಟರ್ ಸಾವಿನ ಸುತ್ತ ಅನುಮಾನದ ಹುತ್ತ ನಿರ್ಮಾಣವಾಗಿದೆ.ಸಾವು ಆತ್ಮಹತ್ಯೆಯೋ..? ಕೊಲೆಯೋ…? ಪೊಲೀಸರ ತೆನಿಖೆಯಲ್ಲಿ ಖಚಿತವಾಗಬೇಕಿದೆ. ಕುವೆಂಪುನಗರ ಬಸ್ ಡಿಪೋದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಕಾಂತ ಯಲ್ಲಪ್ಪ ಅನುಮಾನಾಸ್ಪದವಾಗಿ ಮೃತಪಟ್ಟವರು.ಸಧ್ಯ ಈತನ ಸಾವಿಗೆ ಕಾರಣವಾಗಿರುವ ಸಹದ್ಯೋಗಿ ಗುರುರಾಜ ಉಪಾಸ ಹಾಗೂ ಇವರ
Read More

ಪತಿಯ ಹಣ ವಸೂಲಿಗಾಗಿ ಲೇಡಿ ಡಾನ್ ಆದ ಪತ್ನಿ…ಖಾಸಗಿ ಕಂಪನಿ ಮುಖ್ಯಸ್ಥನಿಗೆ ಪ್ರಾಣ ಬೆದರಿಕೆ…ಕಚೇರಿಗೆ ನುಗ್ಗಿ ಆವಾಜ್…

ಮೈಸೂರು,ಡಿ7,Tv10 ಕನ್ನಡ ಗಂಡನ ಹಣ ವಸೂಲಿ ಮಾಡಲು ಹಿಂದೆ ವ್ಯವಹಾರ ನಡೆಸುತ್ತಿದ್ದ ಕಂಪನಿ ಕಚೇರಿಗೆ ಸಹಚರರ ಜೊತೆ ನುಗ್ಗಿದ ಪತ್ನಿ ಲೇಡಿ ಡಾನ್ ನಂತೆ ವರ್ತಿಸಿ ಕೊಲೆ ಬೆದರಿಕೆ ಹಾಕಿ ಕಚೇರಿ ಧ್ವಂಸ ಮಾಡುವುದಾಗಿ ಆವಾಜ್ ಹಾಕಿ ನೌಕರರಿಗೆ ಕಿರುಕುಳ ನೀಡಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪಿರಿಯಾಪಟ್ಟಣ ತಾಲೂಕು ಲಕ್ಷ್ಮೀಪುರ ಗ್ರಾಮದ ನಿವಾಸಿ ಸುಮಿತ್ರ ಲೇಡಿ ಡಾನ್ ನಂತೆ ವರ್ತಿಸಿದ ಮಹಿಳೆ.ಸಧ್ಯ ಸುಮಿತ್ರಳ ಆವಾಜ್ ಗೆ ಹೆದರಿದ
Read More

ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ…ಓರ್ವನ ಕೊಲೆಯಲ್ಲಿ ಅಂತ್ಯ…

ಮೈಸೂರು,ಡಿ7,Tv10 ಕನ್ನಡ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ನಡೆದಿದೆ.ಮುದಾಸಿರ್ ಪಾಷಾ(38) ಮೃತ ದುರ್ದೈವಿ.ರಿಜ್ವಾನ್ ಕೊಲೆ ಮಾಡಿದ ಸ್ನೇಹಿತ.ಇಬ್ಬರು ಕೂಲಿ ಕೆಲಸ ಮಾಡಿ ಕೆಸಿಬಿ ಸಮುದಾಯದ ಭವನದ ಬಳಿ ಮಲಗಿದ್ದರು.ನಿನ್ನೆ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದೆ.ಈ ವೇಳೆ ಸಿಮೆಂಟ್ ಇಟ್ಟಿಗೆಯಿಂದ ರಿಜ್ವಾನ್ ತನ್ನ ಸ್ನೇಹಿತ ಮುದಾಸಿರ್ ಪಾಷಾ ತಲೆಗೆ ಹೊಡೆದಿದ್ದಾನೆ.ಮುದಾಸಿರ್
Read More

ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ…ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಆಚರಣೆ…

ಮೈಸೂರು,ಡಿ7,Tv10 ಕನ್ನಡ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದಅಂಬೇಡ್ಕರ್ ಮಹಾಪರಿನಿರ್ವಾಣ ಅಂಗವಾಗಿಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಸುಮಾರು 25 ಕ್ಕೂ ಹೆಚ್ಚು ಮಂದಿಗೆ ವಿತರಿಸಿದ ನಂತರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿದೇಶದ ಶೋಷಿತರಿಗೆ ಸಮಾನತೆ ನೀಡಲು ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರ ಹೃದಯಗಳಲ್ಲಿ ಸದಾ ಜೀವಂತವಾಗಿದ್ದಾರೆ.‘ದೇಶ, ವಿದೇಶಗಳಲ್ಲಿ ಶಿಕ್ಷಣ ಪಡೆದು ಶೋಷಿತರ ಸಮಾನತೆಗಾಗಿ ಶಾಸನ ಬದ್ಧ
Read More

ಸುಭ್ರಹ್ಮಣ್ಯ ಷಷ್ಠಿ…ಸಿದ್ದಿಲಿಂಗಪುರ ದೇವಾಲಯದಲ್ಲಿ ವಿಶೇಷ ಪೂಜೆ…ಹರಿದು ಬಂದ ಭಕ್ತಸಾಗರ…

ಮೈಸೂರು,ಡಿ7,Tv10 ಕನ್ನಡ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರದಲ್ಲಿನ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.ಷಷ್ಠಿ ಪ್ರಯುಕ್ತ ಸುಬ್ರಮಣ್ಯೇಶ್ವರ ಸ್ವಾಮಿಗೆ ಇಂದು ಮುಂಜಾನೆ ಶುದ್ಧೋದಕ ಸ್ನಾನ, ಪಂಚಾಮೃತ ಅಭಿಷೇಕ, ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ ನೆರವೇರಿಸಿ ನಂತರ ಸುಬ್ರಮಣ್ಯೇಶ್ವರ ಸ್ವಾಮಿಗೆ ಮೈಸೂರು ಅರಸರು ನೀಡಿದ ನಾಗಾಭರಣವನ್ನು ಧಧಾರಣೆ ಮಾಡಲಾಯಿತು.ಆನಂತರ ದೇವರಿಗೆ ಅಷ್ಟೋತ್ತರ, ಸಹಸ್ರನಾಮ, ಅಷ್ಟಾವಧಾನ ಸೇವೆಯನ್ನು ನೆರವೇರಿಸಿ ಮಹಾಮಂಗಳಾರತಿ ಮಾಡಿ ಭಕ್ತಾದಿಗಳಿಗೆ 3:30ರ ನಂತರ ದೇವರ
Read More

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ಸರಗಳ್ಳಿಯ ಬಂಧನ…3.90 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಡಿ6,Tv10 ಕನ್ನಡ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಚಿನ್ನದ ಸರ ಕಳುವು ಮಾಡುತ್ತಿದ್ದ ಸರಗಳ್ಳಿಯನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತಳಿಂದ 3.90 ಲಕ್ಷ ಮೌಲ್ಯದ ಒಟ್ಟು 54 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನ ವಶಪಡಿಸಿಕೊಂಡಿದ್ದಾರೆ.ಕೆ.ಆರ್.ನಗರ ಮೂಲದ ಲತಾ ಸಿಕ್ಕಿಬಿದ್ದ ಸರಗಳ್ಳಿ. ಇತ್ತೀಚೆಗೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸರಗಳ್ಳತನ ಪ್ರಕರಣ ನಡೆದಿತ್ತು.ಆರೋಪಿಯ ಬಂಧನಕ್ಕೆ ಲಷ್ಕರ್ ಠಾಣೆ ಪೊಲೀಸರು ತಂಡ ರಚಿಸಿದ್ದರು.ಗ್ರಾಮಾಂತರ ಬಸ್ ನಿಲ್ದಾಣದಲ್ಲೇ ಸಿಕ್ಕಿಬಿದ್ದ ಆರೋಪಿ
Read More

ದೇವಸ್ಥಾನದಲ್ಲಿ ಕಳ್ಳರ ಕೈಚಳಕ…ಹುಂಡಿ ಹಣ ಕದ್ದೊಯ್ದ ಖದೀಮರು…

ನಂಜನಗೂಡು,ಡಿ6,Tv10 ಕನ್ನಡ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕದ್ದೊಯ್ದ ಘಟನೆನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹೊರವಲಯದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಬೀಗ ಮುರಿದು ಹುಂಡಿ ಹೊಡೆದು ಕಳ್ಳತನ ಮಾಡಲಾಗಿದೆ.ಸುಮಾರು 1 ಲಕ್ಷಕ್ಕೂ ಹೆಚ್ಚು ಹಣ ಕಳ್ಳರ ಪಾಲಾಗಿದೆ. ಮೂರನೇ ಬಾರಿಗೆ ಈ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.ಕಳ್ಳರನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
Read More

ಗ್ರಾಮ ಠಾಣಾ ಜಾಗ ಇ ಸ್ವತ್ತು ಮಾಡಿಕೊಟ್ಟ ಪಿಡಿಓ…ರದ್ದು ಪಡಿಸುವಂತೆ ಗ್ರಾಮಸ್ಥರಿಂದ ಇಓ ಗೆ ಪತ್ರ…ಷೋ ಕಾಸ್ ನೋಟೀಸ್ ಜಾರಿ

ನಂಜನಗೂಡು,ಡಿ5,Tv10 ಕನ್ನಡ ಗ್ರಾಮ ಠಾಣಾ ಜಾಗ ಒತ್ತುವರಿ ಮಾಡಿಕೊಂಡ ವ್ಯಕ್ತಿಗಳಿಗೆ ಪಿಡಿಓ ಇ ಸ್ವತ್ತು ಮಾಡಿಕೊಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಇದನ್ನ ಪತ್ತೆ ಹಚ್ಚಿದ ಗ್ರಾಮಸ್ಥರು ಇ ಸ್ವತ್ತನ್ನ ರದ್ದು ಪಡಿಸುವ ಇಓ ಪತ್ರ ಬರೆದಿದ್ದಾರೆ.ಎಚ್ಚೆತ್ತ ಪಿಡಿಓ ಇ ಸ್ವತ್ತನ್ನ ರದ್ದುಪಡಿಸುವಂತೆ ಇಓ ಗೆ ಪತ್ರ ಬರೆದಿದ್ದಾರೆ.ಆದ್ರೆ ಅಕ್ರಮ ಎಸಗಿದ ಹಿನ್ನಲೆ ಷೋಕಾಸ್ ನೋಟೀಸ್ ಜಾರಿ ಮಾಡುವಂತೆ ಪಿಡಿಓ ಗೆ ಸೂಚನೆ ನೀಡಿದ್ದಾರೆ. ಹೆಡಿಯಾಲ ಗ್ರಾಮಪಂಚಾಯ್ತಿ ವ್ಯಾಪ್ತಿಯ ವಡೆಯನಪುರ ಗ್ರಾಮದ ಸರ್ವೆ
Read More

ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಮೈಸೂರು,ಡಿ4,Tv10 ಕನ್ನಡ ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯ ಕತ್ತನ್ನ ಕೊಯ್ದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ಶೃತಿ (28) ಪತಿಯಿಂದ ಕೊಲೆಯಾದ ಪತ್ನಿ.ಮನು(27) ಹತ್ಯೆಗೈದು ಪೊಲೀಸರಿಗೆ ಶರಣಾದ ಪತಿ. ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ನಲ್ಲಿದ್ದ ವೇಳೆ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ.5 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಾರೆ.ಅಂತರ್ಜಾತಿ ವಿವಾಹವಾಗಿ ಲಕ್ಷ್ಮಿಕಾಂತ ನಗರದಲ್ಲಿ ಮನೆ ಮಾಡಿ ವಾಸವಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಜಗಳವಾಗಿದೆ.ಇಂದು ಮುಂಜಾನೆ
Read More

ಜಮೀನು ಖರೀದಿಸಿ ನಿವೇಶನ ಅಭಿವೃದ್ದಿಪಡಿಸಿಕೊಡುವುದಾಗಿ ನಂಬಿಸಿ ಕೊ.ಆಪರೇಟಿವ್ ಸೊಸೈಟಿಗೆ ದ್ರೋಹ…ಮೂವರ ವಿರುದ್ದ FIR ದಾಖಲು…

ಮೈಸೂರು,ಡಿ3,Tv10 ಕನ್ನಡ ಸಂಘದ ಸದಸ್ಯರ ಅನುಕೂಲಕ್ಕಾಗಿ ಜಮೀನು ಖರೀದಿಸಿ ವಸತಿ ನಿವೇಶನಗಳನ್ನ ಅಭಿವೃದ್ದಿ ಕೊಡಿಸುವುದಾಗಿ ನಂಬಿಸಿ ಕೋ.ಆಪರೇಟಿವ್ ಸೊಸೈಟಿ ಒಂದಕ್ಕೆ ಕೋಟ್ಯಾಂತರ ರೂ ವಂಚಿಸಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಈ ಸಂಭಂಧ ಸರಸ್ವತಿಪುರಂ ನಲ್ಲಿರುವ ಸ್ಕಿಲ್ ಟೆಕ್ ಇಂಜಿನಿಯರ್ಸ್ ಸಂಸ್ಥೆಯ ಮೂವರು ನಿರ್ದೇಶಕರ ವಿರುದ್ದ ವಂಚನೆಗೆ ಒಳಗಾದ ಶ್ರೀ ರಾಮಕೃಷ್ಣ ಹೌಸ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ ಮುಖ್ಯಸ್ಥರು ಪ್ರಕರಣ ದಾಖಲಿಸಿದ್ದಾರೆ. 2006 ರಲ್ಲಿ ಶ್ರೀ ರಾಮಕೃಷ್ಣ ಹೌಸ್
Read More