ಹುಚ್ಚುನಾಯಿ ಕಡಿದು ದೇವಾಲಯದ ಬಸವ ಸಾವು…ವಿಧಿವಿಧಾನದಂತೆ ಅಂತ್ಯಕ್ರಿಯೆ…
ಮೈಸೂರು,ಜೂ24,Tv10 ಕನ್ನಡ ಹುಚ್ಚುನಾಯಿ ಕಡಿದು ಅನಾರೋಗ್ಯಕ್ಕೆ ಸಿಲುಕಿದ್ದ ಮೇಟಗಳ್ಳಿ ಮಹಾಲಿಂಗೇಶ್ವರ ದೇವಾಲಯದ ಬಸವ ಮೃತಪಟ್ಟಿದೆ.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆ ಇಂದು ಮೃತಪಟ್ಟಿದೆ.ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿತ್ತು.ನಂತರ ನಾಯಿಯಂತೆ ಶಬ್ಧಮಾಡುತ್ತಾ ಸ್ಥಳೀಯರಿಗೆ ಭೀತಿ ಸೃಷ್ಟಿಸಿತ್ತು.ಗ್ರಾಮದ ಬಸವನಿಗೆ ಸ್ಥಳೀಯರು ಕಟ್ಟಿಹಾಕಿ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವ ಇಂದು ಮೃತಪಟ್ಟಿದೆ.ಮಹಾಲಿಂಗೇಶ್ವರ ದೇವಾಲಯದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಇಂದು ಸಂಜೆ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಲಿದೆ…
Read More