TV10 Kannada Exclusive

ಶ್ರೀನಿವಾಸ್ ಪ್ರಸಾದ್ ಬೆಂಬಲಕ್ಕಾಗಿ ಉಭಯ ಪಕ್ಷಗಳಿಂದ ಕಸರತ್ತು…ಪ್ರಸಾದ್ ಭೇಟಿಯಾಗಲಿದ್ದಾರಾ ಸಿಎಂ…?

ಮೈಸೂರು,ಏ1,Tv10 ಕನ್ನಡ ರಾಜಕೀಯ ಬದ್ದವೈರತ್ವವನ್ನ ಮರೆತು ಮತ್ತೆ ಒಂದಾಗಲಿದ್ದಾರೆಯೇ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್…? ಇಂತಹ ಒಂದು ಕುತೂಹಲ ಪ್ರಶ್ನೆ ಇದೀಗ ಕಾಂಗ್ರೆಸ್ ಪಾಳೆಯದಲ್ಲಿ ಎದ್ದಿದೆ.ಇನ್ನೆರಡು ದಿನಗಳಲ್ಲಿ ಇಂತಹ ಬೆಳವಣಿಗೆ ಆಗಲಿದೆ ಎಂಬ ಮಾಹಿತಿಯೂ ಕಾಂಗ್ರೆಸ್ ಮೂಲಗಳಿಂದ ಬರುತ್ತಿದೆ.ದಶಕಗಳ ಹಿಂದೆ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಈ ಜೋಡಿ ಕೆಲವು ಬೆಳವಣಿಗೆಯಿಂದ ದೂರವಾಗಿ ರಾಜಕೀಯ ಬದ್ದವೈರಿಗಳಾಗಿದ್ದರು.ಸಿದ್ದತಾಮಯ್ಯ ಬೆಂಬಲಕ್ಕೆ ಸದಾ ನಿಲ್ಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ರನ್ನ ಸಂಪುಟದಿಂದ ಕೈಬಿಟ್ಟಾಗ ಸಿಡಿದೆದ್ದರು.
Read More

ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಸಾಧನೆಗೈದ ಸರ್ಕಾರಿ ವಸತಿ ಶಾಲೆ ವಾರ್ಡನ್…ಅಭಿನಂದಿಸುವುದನ್ನೂ ಮರೆತ ಇಲಾಖೆ…

ನಂಜನಗೂಡು,ಏ1,Tv10 ಕನ್ನಡ ಸಾಧನೆಗೆ ಯಾವುದೇ ಮಿತಿ ಇಲ್ಲ,ಅಡ್ಡಿಯೂ ಇಲ್ಲ.ಮನಸ್ಸಿದ್ದರೆ ಮಾರ್ಗ ಎಂಬುದನ್ನ ನಿರೂಪಿಸಿದ್ದಾರೆ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದ ಮೂಳೆಗುಡ್ಡ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಪ್ರೌಢ ಶಾಲೆಯ ಮೇಲ್ವಿಚಾರಕ ಗಣಪತಿ ಜಕಾತಿ.ಸಾವಿರಾರು ಕಿಲೋಮೀಟರ್ ದೂರ ಇರುವ ಥೈಲ್ಯಾಂಡ್ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಚಕ್ರ ಎಸೆತ ಮತ್ತು 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಿಕ್ಸೆಡ್ ರಿಲೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ
Read More

ಜಗಳ ಬಿಡಿಸಲು ಬಂದ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ…ಮಹಿಳೆ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ30,Tv10 ಕನ್ನಡ ಬಸ್ ನಲ್ಲಿ ಇಬ್ಬರು ಮಹಿಳೆಯರ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ.ಮಹಿಳೆ ಮೇಲೆ ಕಂಡಕ್ಟರ್ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನಿಂದ ಮೇಲುಕೋಟೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಜೆ.ಎಸ್.ಎಸ್.ಡೆಂಟಲ್ ಕಾಲೇಜು ಬಳಿ ಇಬ್ಬರು ಮಹಿಳೆಯರು ಜಗಳ ಆಡಿದ್ದಾರೆ.ಇಬ್ಬರನ್ನೂ ಸಮಾಧಾನಪಡಿಸಲು ಕಂಡಕ್ಟರ್ ಉದಯಕುಮಾರ್ ಯತ್ನಿಸಿದ್ದಾರೆ.ಈ ವೇಳೆ ಓರ್ವಮಹಿಳೆ ಉದಯಕುಮಾರ್ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನ ಕಿತ್ತುಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಕಂಡಕ್ಟರ್ ನೆರವಿಗೆ ಬಂದ
Read More

ವಿಚ್ಛೇದನ ಪಡೆದಿದ್ದರೂ ಅತ್ತೆ,ಗಂಡನಿಂದ ಕಿರುಕುಳ ಆರೋಪ…ಗೃಹಿಣಿ ಆತ್ಮಹತ್ಯೆ…

ಮೈಸೂರು,ಮಾ30,Tv10 ಕನ್ನಡ ವಿಚ್ಛೇದನ ಪಡೆದಿದ್ದರೂ ಅತ್ತೆ ಹಾಗೂ ಗಂಡ ನೀಡಿದ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಜನತಾನಗರದಲ್ಲಿ ನಡೆದಿದೆ.ಲಕ್ಷ್ಮಿ(39) ಮೃತ ದುರ್ದೈವಿ.19 ವರ್ಷಗಳ ಹಿಂದೆ ನಾರಾಯಣ ಎಂಬಾತನನ್ನ ವಿವಾಹವಾಗಿದ್ದ ಲಕ್ಷ್ಮಿ ಎರಡು ಮಕ್ಕಳ ತಾಯಿ ಆಗಿದ್ದರು.ಕೌಟುಂಬಿಕ ಕಲಹ ಹಿನ್ನಲೆ ಇಬ್ಬರೂ ವಿಚ್ಛೇದನ ಪಡೆದಿದ್ದರು.ಹೀಗಿದ್ದರೂ ಇಬ್ಬರನ್ನ ಒಂದು ಮಾಡುವ ರಾಜಿ ಸಂಧಾನ ವಿಫಲವಾಗಿತ್ತು.ಮಕ್ಕಳು ಗಂಡನ ಜೊತೆ ಇದ್ದರು. ಜನತಾ ನಗರದ ಒಂದೇ ರಸ್ತೆಯಲ್ಲಿ
Read More

ಪತ್ನಿ ಆತ್ಮಹತ್ಯೆ…ಹೃದಯಾಘಾತದಿಂದ ಪತಿ ಸಾವು…ಸಾವಿನಲ್ಲೂ ಒಂದಾದ ದಂಪತಿ…

ಮೈಸೂರು,ಮಾ30,Tv10 ಕನ್ನಡ ಆತ್ಮಹತ್ಯೆಗೆ ಶರಣಾದ ಪತ್ನಿಯ ಸಾವಿನ ಸುದ್ದಿ ಅರಿತ ಪತಿ ಶಾಕ್ ನಿಂದ ಹೃದಯಾಘಾತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಂಪುರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(52) ಆತ್ಮಹತ್ಯೆಗೆ ಶರಣಾದ ಪತ್ನಿ.ಶಾಕ್ ನಿಂದ ಹೃದಯಾಘಾತಕ್ಕೆ ಪತಿ ಮಂಜುನಾಥ್(58) ಸಾವು. ವಿಜಯಲಕ್ಷ್ಮಿ ಅನಾರೋಗ್ಯದಿಂದ ಬಳಲುತ್ತಿದ್ದರು.ಚಿಕಿತ್ಸೆಯಿಂದ ಗುಣಮುಖರಾಗದ ಹಿನ್ನಲೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಪತ್ನಿಯ ಅಗಲಿಕೆ ಸುದ್ದಿ ಅರಿತ ಪತಿ ಮಂಜುನಾಥ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ.ಕೂಡಲೇ ಮಂಜುನಾಥ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ
Read More

ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ದಿ ಸಂಘದಲ್ಲಿ ವಿಶ್ವಮಹಿಳಾದಿನ ಆಚರಣೆ…ಸಾಧಕರಿಗೆ ಸನ್ಮಾನ…

ಮೈಸೂರು,ಮಾ29,Tv10 ಕನ್ನಡ ನೇಗಿಲ ಯೋಗಿ ಮಹಿಳೆಯರ ಕ್ಷೇಮಾಭಿವೃದ್ಧಿ ಸಂಘದಿಂದ ಇಂದು ವಿಶ್ವ ಮಹಿಳಾ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಕಾವೇರಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸರಳಾ ಚಂದ್ರಶೇಖರ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿಮಹಿಳೆಯ ಜವಾಬ್ದಾರಿಯ ಸಂದರ್ಭದಲ್ಲಿ ಆರೋಗ್ಯವನ್ನು ಮರೆಯಬಾರದು. ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಕುಟುಂಬ ಆರೋಗ್ಯದಿಂದ ಇರುತ್ತೆ. ಸಮಾಜ, ದೇಶ ಆರೋಗ್ಯದಿಂದ ಇರುತ್ತದೆ. ಆಗ ತೊಟ್ಟಿಲು ತೂಗಬಲ್ಲ ಕೈಗಳು ಜಗತ್ತನ್ನೇ ತೂಗಬಲ್ಲವಾಗುತ್ತವೆ ಎಂದರು.ಕಾಲ ಮುಂದುವರಿದರೂ ಇಂದಿಗೂ ಮಹಿಳೆ ಶೋಷಣೆಗೆ ಒಳಗಾಗುತ್ತಿರುವುದು ಬೇಸರದ
Read More

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.ಮೈಸೂರಿನ ತಿಲಕ್ ನಗರ ನಿವಾಸಿನರಸಿಂಹ ಮೂರ್ತಿ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಶಿವಲಿಂಗಯ್ಯ ಪರವಾಗಿರಮೇಶ, BIERT( ವಿಶೇಷ ಶಿಕ್ಷಕ)BEO & BRC ಕಚೇರಿ ,ಇವರು ಲಂಚದ ಹಣವನ್ನು ಸ್ವೀಕರಿಸಿದ್ದರು. SP ಶ್ರೀ ಸಜೀತ್.
Read More

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ ಅಮಾನತುಪಡಿಸಿ ಆದೇಶ ಹೊರಡಿಸಿದೆ.ಇದು Tv10 ಕನ್ನಡ ವಾಹಿನಿ ವರದಿಯ ಫಲಶೃತಿಯೂ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು.ಈ ಸಂಭಂಧ ಸಾಕಷ್ಟು ಬಾರಿ ವಿಧ್ಯಾರ್ಥಿಗಳು ಮನವಿ ಮಾಡಿದ್ದರೂ ಪ್ರಾಂಶುಪಾರಾದ
Read More

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿದೆ.ಪೊಲೀಸರ ಮಿಂಚಿನ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಮತ್ತು ಜಾಹ್ನವಿ ರವರು ಪ್ರಶಂಸಿಸಿದ್ದಾರೆ. ಸಾತಗಳ್ಳಿ ನಿವಾಸಿ ಜ್ಯೋತಿ ಎಂಬುವರು ಆಟೋದಲ್ಲಿ ಮೈಸೂರಿನ ಅಶೋಕಾ ರಸ್ತೆಯಲ್ಲಿರುವ ಲಲಿತಾ ಜ್ಯೂಯಲರಿಗೆ ಬಂದಿದ್ದಾರೆ.ಹಿಂದೆ ಖರೀದಿಸಿದ್ದ 60
Read More

ದೇವರಾಜ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…6.80 ಲಕ್ಷ ಮೌಲ್ಯದ 14 ವಾಹನ ವಶ…

ಮೈಸೂರು,ಮಾ27,Tv10 ಕನ್ನಡ ದೇವರಾಜ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರವಾಹನ ಕಳ್ಳನನ್ನು ಬಂಧಿಸಿದ್ದು 6.80 ಲಕ್ಷ ಮೌಲ್ಯದ 14 ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮಂಡ್ಯ ಜಿಲ್ಲೆ ಆರತಿ ಉಕ್ಕಡದ ನಿವಾಸಿ ಸಂದೀಪ್ ಬಂಧಿತ ಆರೋಪಿ.ಈತನ ಬಂಧನದಿಂದ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ 4 ಪ್ರಕರಣಗಳು,ಮಂಡಿ ಪೊಲೀಸ್ ಠಾಣೆಯ 5 ಪ್ರಕರಣಗಳು,ಮೇಟಗಳ್ಳಿ ಠಾಣೆಯ ಒಂದು ಹಾಗೂ ವಿವಿಪುರಂ ಪೊಲೀಸ್ ಠಾಣೆಯ ಒಂದು ಪ್ರಕರಣ ಪತ್ತೆಯಾದಂತಾಗಿದೆ. ಸಂಚಾರ ಮತ್ತು ಅಪರಾಧ ಡಿಸಿಪಿ ರವರಾದ
Read More