TV10 Kannada Exclusive

ಮತ್ತೊಬ್ಬ ಖೈದಿ ಸಾವು…ಮೃತರ ಸಂಖ್ಯೆ ಎರಡಕ್ಕೆ ಏರಿಕೆ…ಮತ್ತೋರ್ವನ ಸ್ಥಿತಿ ಗಂಭೀರ…

ಮೈಸೂರು,ಜ8,Tv10 ಕನ್ನಡ ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೂವರು ಖೈದಿಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ.ನಿನ್ನೆ ಓರ್ವ ಸಾವನ್ನಪ್ಪಿದ್ದು ಇಂದು ಮುಂಜಾನೆ ಮತ್ತೋರ್ವ ಖೈದಿ ಸಾವನ್ನಪ್ಪಿದ್ದಾನೆ.ಇನ್ನೊಬ್ಬ ಖೈದಿಯ ಸ್ಥಿತಿ ಸಹ ಗಂಭೀರ ಎಂದು ಹೇಳಲಾಗಿದೆ.ಚಾಮರಾಜನಗರದ ನಾಗರಾಜು ಮೃತ ಖೈದಿ.ಕೇಕ್ ತಯಾರಿಸಲು ತರಿಸಿದ್ದ ಎಸೆನ್ಸ್ ಕುಡಿದು ಅಸ್ವಸ್ಥರಾಗಿದ್ದ ಮೂವರು ಕೈದಿಗಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ನಿನ್ನೆಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದ.ರಮೇಶ್ ಹಾಗೂ ನಾಗರಾಜ್ ಸ್ಥಿತಿ ಗಂಭೀರವಾಗಿತ್ತು.ಕಿಕ್‌ಗಾಗಿ ಎಸೆನ್ಸ್ ಕುಡಿದಿದ್ದ ಮೂವರು.ಹೊಸವರ್ಷದ ಕೇಕ್
Read More

ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಮೈಸೂರು,ಜ7,Tv10 ಕನ್ನಡ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದಾಗ ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ ಹಾಕಿದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರನ್ನೇ ಯಾಮಾರಿಸಲು ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ.ವಾಹನವನ್ನ ವಶಪಡಿಸಿಕೊಂಡ ವಿವಿ ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಸರೆ ಬಡಾವಣೆ ನಿವಾಸಿ ಮೊಹಮದ್ ಮುಜಾಹಿಲ್ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಐನಾತಿ.ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ರಾಯಲ್ ಎನ್ಫೀಲ್ಡ್ ಇದೀಗ ವಿವಿಪುರಂ ಠಾಣೆ
Read More

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ…

ಕೆ.ಆರ್.ನಗರ,ಜ7,Tv10 ಕನ್ನಡ ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಂದ ಘಟನೆಕೆ.ಆರ್ ನಗರ ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.ಚಂದ್ರಹಾಸ ಕೊಲೆಯಾದ ವ್ಯಕ್ತಿ.ಪಾಪಣ್ಣ ಮತ್ತು ಇತರರು ಕೊಲೆ ಮಾಡಿದ್ದಾರೆ.ಪಾಪಣ್ಣ ಪಕ್ಕದ ಸಿದ್ದನಕೊಪ್ಪಲು ಗ್ರಾಮದ ವ್ಯಕ್ತಿ.ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Read More

ಚಿಕಿತ್ಸೆ ಫಲಕಾರಿಯಾಗದೆ ಸಜಾ ಖೈದಿ ಕೆ.ಆರ್.ಆಸ್ಪತ್ರೆಯಲ್ಲಿ ಸಾವು…

ಮೈಸೂರು,ಜ7,Tv10 ಕನ್ನಡ ಹೊಟ್ಟೆ ನೋವಿನಿಂದ ಕೆ.ಆರ್.ಆಸ್ಪತ್ರೆ ದಾಖಲಾಗಿದ್ದ ಸಜಾ ಖೈದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಾದೇಶ್(37) ಮೃತ ಖೈದಿ.ಡಿಸೆಂಬರ್ 29 ರಂದು ಆಸ್ಪತ್ರೆಗೆ ದಾಖಲಾಗಿದ್ದರು.ಪತ್ನಿಯನ್ನ ಕೊಲೆ ಮಾಡಿದ ಆರೋಪ ಸಾಬೀತಾಗಿ ಸಜಾ ಖೈದಿಯಾಗಿ ಮೈಸೂರಿನ ಕೇಂದ್ರ ಕಾರಾಗೃಹದ ಶಿಕ್ಷೆ ಅನುಭವಿಸುತ್ತಿದ್ದರು.ಮೂಲತಃ ಗುಂಡ್ಲುಪೇಟೆ ತಾಲೂಕಿನ ಮಾದೇಶ್ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ವಾಸವಿದ್ದ ವೇಳೆ ಕೊಲೆ ಆರೋಪ ಹೊತ್ತಿದ್ದರು.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ನಡು ರಸ್ತೆಯಲ್ಲಿ ಸುಟ್ಟು ಭಸ್ಮವಾದ ಕಾರು…ಪ್ರಯಾಣಿಕರು ನಾಪತ್ತೆ…ಹುರಳಿ,ರಾಗಿ ಒಕ್ಕಣೆ ಎಫೆಕ್ಟ್…?

ಸರಗೂರು,ಜ7,Tv10 ಕನ್ನಡ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಸರಗೂರು ತಾಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.ಕೆ.ಆರ್.ನಗರಕ್ಕೆ ಸೇರಿದ ಕಾರು ಎಂದು ಹೇಳಲಾಗಿದೆ.ರಸ್ತೆ ಮಧ್ಯೆ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿರುವ ಹಿನ್ನಲೆ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ.ಕಾರಿಗೆ ಒಕ್ಕಣೆ ಮಾಡುವ ಸತ್ತೆ ಸಿಲುಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ಮಧ್ಯರಾತ್ರಿ ವೇಳೆ ಘಟನೆ ನಡೆದ ಕಾರಣ ಕಾರಿನಲ್ಲಿದ್ದ
Read More

ಮೂರು ತಲೆಮಾರುಗಳಿಂದ ವಾಸವಿದ್ದ 4 ಕುಟುಂಬ ಬೀದಿಪಾಲು ಪ್ರಕರಣ…ತಾಲೂಕು ಆಡಳಿತ ಸ್ಪಂದನೆ…

ನಂಜನಗೂಡು,ಜ6,Tv10 ಕನ್ನಡ ಮೂರು ತಲೆಮಾರುಗಳಿಂದ ವಾಸವಿದ್ದ ಹಂದಿಜೋಗಿ ಜನಾಂಗದ 4 ಕುಟುಂಬವನ್ನ ರಾತ್ರೋರಾತ್ರಿ ಬೀದಿಪಾಲು ಮಾಡಿದ ಪ್ರಕರಣಕ್ಕೆ ನಂಜನಗೂಡು ತಾಲೂಕು ಆಡಳಿತ ಸ್ಪಂದಿಸಿದೆ.ಜಮೀನಿನ ಮಾಲಿಕ ಶಿವಾನಂದ ಮತ್ತು ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್ಐ ಅಮಾನತಿಗಾಗಿ ಒತ್ತಡ ಹೇರಲಾಗಿದೆ.ನಂಜನಗೂಡು ತಾಲೂಕು ಹೊರಳವಾಡಿ ಹೊಸೂರು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ವಾಸವಿದ್ದ ಮನೆಗಳನ್ನ ತೆರುವುಗೊಳಿಸಿದ ಪರಿಣಾಮ ದಾರಿ ಕಾಣದೆ 4 ಕುಟುಂಬ ಬೀದಿಯನ್ನೇ ಆಶ್ರಯಿಸಿದೆ ನ್ಯಾಯ ದೊರೆಯದಿದ್ದಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ
Read More

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಮೈಸೂರು,ಜ6,Tv10 ಕನ್ನಡ ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5ನೇ ವರ್ಷದ ಪುಣ್ಯಸಂಸ್ಕರಣೆಯನ್ನ ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ಹಾಗೂ ಓದುವ ಸಾಮಗ್ರಿಗಳನ್ನ ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ನಗರದ ಕೃಷ್ಣಮೂರ್ತಿ ಪುರಂ ನಲ್ಲಿರುವ ಶಾರದಾ ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಡಾ. ಕೆ. ರಘುರಾಮ್ ವಾಜಪೇಯಿ ಮಾತನಾಡಿಪೇಜಾವರ ಸ್ವಾಮೀಜಿ ಎಲ್ಲರ ಪ್ರೀತಿ
Read More

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಮಹಿಳೆ ಸೇರಿ ಇಬ್ಬರು ಕಳ್ಳರ ಸೆರೆ…12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಜ6,Tv10 ಕನ್ನಡ ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಕಳ್ಳರನ್ನ ಬಂಧಿಸಲಾಗಿದೆ.ಬಂಧಿತರಿಂದ 12 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ಮೂಲದ ಸಾವಿತ್ರಿ(42) ಹಾಗೂ ಗುರುರಾಜ್(45) ಬಂಧಿತರು. ಡಿಸೆಂಬರ್ 16 ರಂದು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್ ಕಳುವು ಮಾಡಿ 184 ಗ್ರಾಂ ಚಿನ್ನಾಭರಣ ಲಪಟಾಯಿಸಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಖದೀಮರ ಬಂಧನಕ್ಕೆ ತಂಡ ರಚಿಸಲಾಗಿತ್ತು.ಆರೋಪಿಗಳನ್ನ
Read More

ಇನ್ಪೋಸಿಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ…ಮುಂದುವರೆದ ಕಾರ್ಯಾಚರಣೆ

… ಮೈಸೂರು,ಜ6,Tv10 ಕನ್ನಡ ಇನ್ಫೋಸಿಸ್ ನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡ ಹಿನ್ನೆಲೆ ಕಾರ್ಯಾಚರಣೆಮುಂದುವರಿಸಲಾಗಿದೆ.ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿಗಳಿಂದ ಕಾರ್ಯಾಚಣೆ ನಡೆಯುತ್ತಿದೆ.ಹೆಜ್ಜೆ ಗುರುತುಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.ಚಿರತೆ ಸೆರೆಗಾಗಿಹೆಚ್ಚುವರಿಯಾಗಿ 10 ಕ್ಯಾಮೆರಾ ಟ್ರ್ಯಾಪ್ ಒಂದು ಸಾಮಾನ್ಯ ಬೋನುಇನ್ನೊಂದು ಟ್ರ್ಯಾಪ್ ಬೋನು ಅಳವಡಿಸಲಾಗಿದೆ.ಕ್ಯಾಮೆರಾ ಟ್ರ್ಯಾಪ್, ಡ್ರೋನ್ ಕ್ಯಾಮೆರಾ , ಕ್ಯಾಂಪಸ್ ಸಿಸಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗುತ್ತಿದೆ.ಒಂದು ಚಿರತೆ ಕಾರ್ಯಪಡೆ ತಂಡ ಕ್ಯಾಂಪಸ್ ನಲ್ಲೇ ಮೊಕ್ಕಾಂ ಹೂಡಿದೆ…
Read More

ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವು ಪ್ರಕರಣ…ಎಚ್ಚೆತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ…ಮುನ್ನೆಚ್ಚರಿಕೆ ವಹಿಸುವಂತೆ ಸುತ್ತೋಲೆ…

ಬೆಂಗಳೂರು,ಜ5,Tv10 ಕನ್ನಡ ಗುಂಡ್ಲುಪೇಟೆ ತಾಲೂಕು ಬೇಗೂರಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವನ್ನಪ್ಪಿದ ಘಟನೆ ನಂತರ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಎಚ್ಚೆತ್ತುಕೊಂಡಿದೆ.ತಮ್ಮ ವ್ಯಾಪ್ತಿಗೆ ಬರುವ ವಸತಿಶಾಲೆಗಳ ಪ್ರಾಂಶುಪಾಲರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸುತ್ತೋಲೆ ಹೊರಡಿಸಿದೆ.ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ ಪಾಳಿಯಲ್ಲಿ ನಿರ್ವಹಿಸುವ ಕಾವಲುಗಾರರ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದೆ.ಇಡೀ ರಾತ್ರಿ ಕಾವಲುಗಾರ ಎಚ್ಚರವಿದ್ದು ಗಸ್ತು ತಿರುಗುವ ಬಗ್ಗೆ ಅಗತ್ಯ
Read More