TV10 Kannada Exclusive

ಎಸ್.ಸಿ, ಎಸ್.ಟಿ.ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ…

ಬೆಂಗಳೂರು,ಜು28,Tv10 ಕನ್ನಡಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ
Read More

ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಮ.ವಿ. ರಾಮಪ್ರಸಾದ್ ನೇಮಕ…

ಮೈಸೂರು,ಜು28,Tv10 ಕನ್ನಡ 55 ನೇ ವಾರ್ಡ್ ನ ಕಾರ್ಪೊರೇಟರ್ ಮ.ವಿ.ರಾಂಪ್ರಸಾದ್ ರವರನ್ನ ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ.ಇಂದು ನಡೆದ ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮಹಾಪೌರರು ಘೋಷಿಸಿದ್ದಾರೆ.ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿರುವುದರಿಂದ ಆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮಹಾಪೌರರಿಗೆ ಪತ್ರ ಬರೆದು ಮ ವಿ ರಾಮಪ್ರಸಾದ್ ಅವರನ್ನು ಆಡಳಿತ ಪಕ್ಷದ ನಾಯಕರಾಗಿ ಮಾಡಬೇಕೆಂದು ತಿಳಿಸಿರುವ
Read More

ಅಂಗನವಾಡಿ ಕಟ್ಟಡ ಪೂರ್ಣಗೊಳಿಸಲು ಒತ್ತು…ಅಧಿಕಾರಿಗಳೊಂದಿಗೆ ಜಿ.ಪಂ.ಸಿಇಓ ವಿಡಿಯೋ ಸಂವಾದ…

ಮೈಸೂರು,ಜು28,Tv10 ಕನ್ನಡ ಇಂದು ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಕೆ.ಎಂ ಗಾಯಿತ್ರಿ ರವರ ಅಧ್ಯಕ್ಷತೆಯಲ್ಲಿ ಅಂಗನವಾಡಿ ಕಟ್ಟಡವನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಹಾಗೂ ಗ್ರಂಥಾಲಯದ ಕುರಿತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಆಯ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಡಿಯೋ ಸಂವಾದ ನಡೆಸಿದರು.ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲವು ಸಲಹೆಗಳನ್ನ ನೀಡಿದರು…
Read More

ಮಳೆ ಎಫೆಕ್ಟ್…ನಾಗರಹೊಳೆ ಸಫಾರಿ ತಾತ್ಕಾಲಿಕ ಬಂದ್…

ಮೈಸೂರು,ಜು28,Tv10 ಕನ್ನಡ ಹೆಚ್.ಡಿ.ಕೋಟೆ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ನಾಗರಹೊಳೆ ಸಫಾರಿ ತಾತ್ಕಾಲಿಕ ಬಂದ್ ಮಾಡಲಾಗಿದೆ.ಸಫಾರಿ ರಸ್ತೆ ಮಣ್ಣಿನಿಂದ ಕೂಡಿದ್ದು ಜಾರುವ ಸಾಧ್ಯತೆ.ಮರಗಳು ರಸ್ತೆಗೆ ಅಡ್ಡಲಾಗಿ ಬೀಳುವ ಸಂಭವ ಇದೆ ಹೀಗಾಗಿಪ್ರಾವಾಸಿಗರ ಹಿತದೃಷ್ಟಿಯಿಂದ ತಾತ್ಕಾಲಿಕ ಬಂದ್ ಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಧಾರಿಸಿದ್ದಾರೆ.ಜುಲೈ 31 ರವರಗೆ ಸಫಾರಿ ಬಂದ್ ಮಾಡಲಾಗಿದೆ.ಮುಂಗಡ ಬುಕ್ಕಿಂಗ್ ರದ್ದು ಮಾಡಿ ಮುಂದಿನ ಆದೇಶದ ವರಗೆ ಸಫಾರಿ ಸೇವೆ ನಿರ್ಬಂಧ ವಿಧಿಸಲಾಗಿದೆ.ನಾಗರಹೊಳೆ ವಲಯಾಧಿಕಾರಿಗಳಿಂದ ಪ್ರಕಟಣೆ ಹೊರಡಿಸಲಾಗಿದೆ…
Read More

ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಸೂಚನೆ…

ಮೈಸೂರು,ಜು,27,Tv10 ಕನ್ನಡಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಸೂಚನೆ… ಮೈಸೂರು,ಜು,27,Tv10 ಕನ್ನಡಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು
Read More

ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯ…ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪಕಚೇರಿಗೆ ಬೀಗ ಜಡಿದು ಪ್ರತಿಭಟನೆ…

ಮೈಸೂರು,ಜು27,Tv10 ಕನ್ನಡ ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗೆ ಕಬ್ಬು ಕಟಾವು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಮೈಸೂರು ತಾಲೂಕಿನ ಕಡಕೋಳದಲ್ಲಿರುವ ಡಿವಿಜನ್ ಆಫೀಸ್ ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.ಕಳೆದ ವರ್ಷದ
Read More

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್…

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್… ಹುಣಸೂರು,ಜು26,Tv10 ಕನ್ನಡ ಕೊನೆಗೂ ಕಿಂಡಿ ಬಿದ್ದ ತಂತಿ ಬೇಲಿಗಳನ್ನ ಮುಚ್ಚುವ ಕಾಮಗಾರಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸುವುದನ್ನ ತಡೆಗಟ್ಟಲು ಮುಂದಾಗಿದ್ದಾರೆ.Tv10 ಕನ್ನಡ ವರದಿಗೆ ಎಚ್ಚೆತ್ತ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದಾರೆ ಹುಣಸೂರು ತಾಲೂಕು ರಂಗಾಯನಕೊಪ್ಪಲು ಕುಪ್ಪೆಕೊಳಘಟ್ಟ ಗ್ರಾಮದ ಬಳಿ ನಿರ್ಮಿಸಲಾಗಿದ್ದ ಅರಣ್ಯ ತಂತಿ ಬೇಲಿಗಳಲ್ಲಿ ಕಿಂಡಿಗಳು ಸೃಷ್ಠಿಯಾಗಿತ್ತು.ಇದರಿಂದ ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸಿ ಸಾಕು ಪ್ರಾಣಿಗಳನ್ನ
Read More

ಮೈಸೂರ್ ಪಾಕ್ ಗರ ಜಾಗತಿಕ ಮನ್ನಣೆ…ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ…

ಮೈಸೂರ್ ಪಾಕ್ ಗರ ಜಾಗತಿಕ ಮನ್ನಣೆ…ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ… ಮೈಸೂರು,ಜು25,Tv10 ಕನ್ನಡಮೈಸೂರು ಪಾಕ್ ಗೆ ದೊರೆತ ಜಾಗತಿಕ ಮನ್ನಣೆಯನ್ನ ಸ್ವಾಗತಿಸಿ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮೈಸೂರು ಪಾಕ್ ವಿತರಿಸಿ ಸಂಭ್ರಮಿಸಲಾಯಿತು.ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ ಮೈಸೂರು ಪಾಕ್ ಖ್ಯಾತಿ ಗಳಿಸಿರುವ ಹಿನ್ನಲೆಯಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಪ್ರವಾಸಿಗರಿಗೆ ಹಾಗೂ ಭಕ್ತಾದಿಗಳಿಗೆ ಮೈಸೂರು ಪಾಕ್ ವಿತರಿಸಿ ಮೈಸೂರು ಪಾಕ್ ಮಹತ್ವ ಹಾಗೂ ಅದರ ಇತಿಹಾಸ ತಿಳಿಸಲಾಯಿತು. ಮಾಜಿನಗರ
Read More

VTU ಕಾಲೇಜ್ ಕಾರ್ ಡ್ರೈವರ್ ಆತ್ಮಹತ್ಯೆ…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ಮೈಸೂರು,ಜು23,Tv10 ಕನ್ನಡಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿರುವ VTU ಕಾಲೇಜಿನ ಕಾರ್ ಡ್ರೈವರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಯಾದಗಿರಿ ಜಿಲ್ಲೆ ನಿವಾಸಿ ಮಾನಪ್ಪ(27) ಮೃತ ದುರ್ದೈವಿ.ಕಳೆದ ಐದಾರು ವರ್ಷಗಳಿಂದ ಕಾಲೇಜಿನ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಾನಪ್ಪನಿಗೆ ತಂಗಲು ಕ್ಯಾಂಪಸ್ ನ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು.ಕೊಠಡಿಯಲ್ಲೇ ಮಾನಪ್ಪ ನೇಣಿಗೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಸಿಸಿಬಿ ಪೊಲೀಸರ ಕಾರ್ಯಾಚರಣೆ…40ಕೆ.ಜಿ.ಗಾಂಜಾ ವಶ…ಇಬ್ಬರ ಬಂಧನ…

ಮೈಸೂರು,ಜು23,Tv10 ಕನ್ನಡ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 40 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ದಾಳಿ ನಡೆಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಪ್ರಕರಣಕ್ಕೆ ಸಂಭಂಧಪಟ್ಟಂತೆ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ.ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಶೇಖರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್
Read More