TV10 Kannada Exclusive

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಇವರಿಗೆ ತಂದೆ, ತಾಯಿ, ಸಹೋದರ, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಆಸ್ಪತ್ರೆಗೆ ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್‌ಗೌಡ ಸೇರಿದಂತೆ ಇಲಾಖೆ ಅಧಿಕಾರಿಗಳು ಸಹೋದ್ಯೋಗಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಶ್ಯಾನುಬೋಗನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ
Read More

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು ಆರ್.ಎಸ್.ಎಸ್ ವತಿಯಿಂದ ಶತಮಾನೋತ್ಸವ ಅಂಗವಾಗಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.ಗೋಕುಲಂ ನ ಮೈಸೂರು ಒನ್ ಕೇಂದ್ರ ದ ಮೈದಾನದಿಂದ ಸುಮಾರು 2000 ಕ್ಕೂ ಹೆಚ್ಚು ಸ್ವಯಂಸೇವಕರು ಪಥಸಂಚಲನದಲ್ಲಿ ಸಾಗಿದರು.ಎರಡು ವಾಹಿನಿಯಾಗಿ ಎರಡು ಪ್ರತ್ಯೇಕ ಮಾರ್ಗಗಳಲ್ಲಿ ಪಥಸಂಚಲನ ಸಾಗಿತು.ಸುಮಾರು 2.7 ಕಿಮೀ ಸಾಗಿದ
Read More

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ ರಾಜೇಂದ್ರನಗರದ ನಿವಾಸಿ ಗಜೇಂದ್ರ ಎಂಬುವರೇ ವಂಚನೆಗೆ ಒಳಗಾದವರು.ಆಲನಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ನಗರದ ಚೀರನಹಳ್ಳಿ ಮೂಲದ ಪೊಲೀಸ್ ಪೇದೆ ಶಿವಕುಮಾರ್ ಸೇರಿದಂತೆ 7 ಮಂದಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಟ್ಟಗಳ್ಳಿಯಲ್ಲಿರುವ ಯೂನಿವರ್ಸಲ್ ಡೆವಲಪರ್ಸ್ ಹೆಸರಲ್ಲಿ ಗಜೇಂದ್ರ ರವರಿಗೆ ವಂಚಿಸಿದ್ದಾರೆ.ಕನಕದಾಸ
Read More

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಪೊಲೀಸ್ ರೌಡಿ ಪ್ರತಿಬಂಧಕ‌ದಳದದ ಕಾರ್ಯಾಚರಣೆ ನಡೆಸಲಾಗುತ್ತಿದೆ.ದಿನಾಂಕ 10/10/2025 ರಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.ಮೈಸೂರಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್‌ಗಳು, ಟೀ ಅಂಗಡಿಗಳು, ಹೋಟೆಲ್‌ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು
Read More

ಕಾಮುಕನ ಕಾಲಿಗೆ ಗುಂಡು ಹೊಡೆದ ಕಾಪ್ ಇವರೇ…ಅತ್ಯಾಚಾರಿ ಸಿಕ್ಕಿದ್ದು ಹೇಗೆ…ಕಾರ್ಯಾಚರಣೆ ಹೇಗಿತ್ತು…ಕಾಲಿಗೆ ಗುಂಡು ಹೊಡೆಯಲು ಕಾರಣವೇನು…ರೋಚಕ ಕಹಾನಿ ಇಲ್ಲಿದೆ…

ಮೈಸೂರು,ಅ10,Tv10 ಕನ್ನಡ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಮೈಸೂರು ಪೊಲೀಸರು ನ್ಯಾಯ ಒದಗಿಸುವತ್ತ ಗಂಭೀರವಾಗಿ ಹೆಜ್ಜೆ ಹಾಕಿದ್ದಾರೆ.ಭೀಭತ್ಸ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ವಿಕೃತಕಾಮಿಯನ್ನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಸೆರೆಯಾದ ಕಾಮುಕ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳುವ ಯತ್ನ ನಡೆದಾಗ ಕಾಲಿಗೆ ಗುಂಡು ಹಾರಿಸಿ ತಮ್ಮನ್ನ ರಕ್ಷಿಸಿಕೊಂಡಿದ್ದಲ್ಲದೆ ಅತ್ಯಾಚಾರಿಯನ್ನ ಸೆದೆಬಡಿದಿದ್ದಾರೆ.ವಿಜಯನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಜೈಕೀರ್ತಿ ಕಾರ್ಯ ಮೆಚ್ಚುಗೆಗೂ ಪಾತ್ರವಾಗಿ.ಅಸಲು ಕಾಮುಕನ ಮೇಲೆ ಜೈಕೀರ್ತಿ
Read More

ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಮೈಸೂರು,ಅ7,Tv10 ಕನ್ನಡ ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್@ಮುಖಾಮುಚ್ಚಿ@ಗಿಲಿಗಿಲಿ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ವ್ಯಕ್ತಿಯ ಮೇಲೆ ಲಾಂಗ್ ಗಳಿಂದ ದಾಳಿ ನಡೆಸಿದ ಯುವಕರ ಗುಂಪು ಕಾರಿನಿಂದ ಹೊರಗೆ ಎಳೆದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದೆ.ತಲೆ ಕೈ ಕಾಲು ಹಾಗೂ ದೇಹದ ಭಾಗಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.ಇತ್ತೀಚೆಗೆ ವರುಣಾ ಗ್ರಾಮದ
Read More

ಬಿಜೆಪಿ ಕಾರ್ಯಕರ್ತರಿಗೆ ಕಾಂತಾರಾ ಮೂವಿ ವೀಕ್ಷಿಸಲು ಆಫರ್…ಮಾಜಿ ಸಂಸದ ಪ್ರತಾಪ್ ಸಿಂಹ ಆಹ್ವಾನ…ಡಿಆರ್ ಸಿಯಲ್ಲಿ ಬುಕ್ ಮಾಡಿ ಇನ್ವೈಟ್…

ಮೈಸೂರು,ಅ3,Tv10 ಕನ್ನಡ ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಿತ್ರ ವೀಕ್ಷಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ನಾಳಿನ ಶೋಗೆ ಥಿಯೇಟರ್ ಬುಕ್ ಮಾಡಿದ್ದಾರೆ.ಕಾರ್ಯಕರ್ತರ ಜೊತೆ ನೋಡಲು ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿರುವ ಪ್ರತಾಪ್ ಸಿಂಹ ಸಿನಿಮಾ ನೋಡಲು ಆಹ್ವಾನಿಸಿದ್ದಾರೆ.ಎಲ್ಲರೂ ಬನ್ನಿ ಕಾಂತಾರ ಸಿನಿಮಾ ನೋಡೋಣ ಎಂದು ಮೆಸೇಜ್ ಮಾಡಿದ್ದಾರೆ.ಕಾಂತಾರ ಮೂವೀ ಪ್ರಮೋಷನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ನಿಂತಿರುವ ಬಗ್ಗೆ ಸಾಕಷ್ಟು ಅನುಮಾನಗಳು
Read More

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು

ಪರವಾನಿಗೆ ಇಲ್ಲದೆ ಶೇಖರಿಸಿದ್ದ 49.6 ರಸಗೂಬ್ಬರ ಜಪ್ತಿ ಮಾಡಿದ ಕೃಷಿ ಅಧಿಕಾರಿಗಳು ಮಂಡ್ಯ.ಅ.3(TV10 ಕನ್ನಡ):- ಬೆಂಗಳೂರು ಜಾಗೃತ ಕೋಶದ ಅಪರ ನಿರ್ದೇಶಕರಾದ ದೇವರಾಜು, ಮೈಸೂರು ಉಪ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಉಪ ಕೃಷಿ ನಿರ್ದೇಶಕಿ ಮಮತ ಹೆಚ್.ಎನ್ ಮತ್ತು ಸಹಾಯಕ ಕೃಷಿ ನಿರ್ದೇಶಕರಾದ ಯಾದವ ಬಾಬು, ಮಂಡ್ಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಸುನೀತ, ಜಿಲ್ಲಾ ರಸಗೊಬ್ಬರ ಪರಿವೀಕ್ಷಕರಾದ ಚನ್ನಕೇಶವಮೂರ್ತಿ ಹೆಚ್ (ಜಾರಿದಳ) ಅವರು ಸೆಪ್ಟೆಂಬರ್ 29
Read More

ಜಂಬೂ ಸವಾರಿ ವೀಕ್ಷಿಸಲು ಹೈ ರಿಸ್ಕ್…ಟ್ರಾನ್ಸ್ಫಾರ್ಮರ್ ಇದ್ದರೂ ಲೆಕ್ಕಿಸದ ಜನ…

ಮೈಸೂರು,ಅ3,Tv10 ಕನ್ನಡ ವಿಶ್ವವಿಖ್ಯಾತ ಜಂಬೂಸವಾರಿ ವೀಕ್ಷಿಸಲು ಕೆಲವು ಮಂದಿ ಹೈ ರಿಸ್ಕ್ ತೆಗೆದುಕೊಂಡಿದ್ದಾರೆ.ಜೀವ ಪಣವಿಟ್ಟ ಕೆಲವು ಮಂದಿ ಟ್ರಾನ್ಸ್ಫಾರ್ಮರ್ ಇದ್ದರೂ ಲೆಕ್ಕಿಸದೆ ಭದ್ರತೆಗಾಗಿ ನಿರ್ಮಿಸಿದ ಕಾಂಪೌಂಡ್ ಮೇಲೆ ಕುಳಿತು ಜಂಬೂ ಸವಾರಿ ವೀಕ್ಷಿಸಿದ್ದಾರೆ.ಕಟ್ಟಡಗಳ ಮೇಲೆ,ಮರಗಳ ಮೇಲೆ,ಹಾಗೂ ಕಂಬಗಳ ಮೇಲೆ ಕುಳಿತು ಮೆರವಣಿಗೆ ವೀಕ್ಷಿಸುವ ಕುರಿತಂತೆ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಆದೇಶಿಸಿದೆ.ಅಂತಹ ಸ್ಥಳಗಳಲ್ಲಿ ಕುಳಿತುಕೊಳ್ಳಬಾರದೆಂದು ಆದೇಶ ಹೊರಡಿಸಿದೆ.ಆದೇಶದಂತೆ ಕೆಲವು ಕಟ್ಟಡಗಳ ಮೇಲೆ ಜನ ಎಂದಿನಂತೆ ಕುಳಿತುಕೊಳ್ಳದೆ ಆದೇಶ ಪಾಲಿಸಿದ್ದಾರೆ.ಆದ್ರೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹೈ
Read More

50 ಸಾವಿರ ಪೌಂಡ್ ಗಿಫ್ಟ್ ಆಮಿಷ…10.90 ಲಕ್ಷ ಕಳೆದುಕೊಂಡ ಯೋಗ ಶಿಕ್ಷಕಿ…

ಮೈಸೂರು,ಸೆ27,Tv10 ಕನ್ನಡ 50 ಸಾವಿರ ಪೌಂಡ್ ಗಿಫ್ಟ್ ಕಳಿಸುವುದಾಗಿ ಆಮಿಷ ಒಡ್ಡಿದ ಇಂಗ್ಲೆಂಡ್ ಶಿಷ್ಯ ಯೋಗ ಗುರುವಿಗೆ 10.90 ಲಕ್ಷಕ್ಕೆ ಉಂಡೆನಾಮ ಹಾಕಿದ್ದಾನೆ.ಮೈಸೂರಿನ ವಿವೇಕಾನಂದ ನಗರದ ನಿವಾಸಿ ಯೋಗಶಿಕ್ಷಕಿಯಾಗಿರುವ ಸವಿತಾ ಕುಮಾರಿ ಹಣ ಕಳೆದುಕೊಂಡವರು.ಯೋಗತರಬೇತಿ ಬಗ್ಗೆ ಸುನಿತಾ ಕುಮಾರಿ ರವರು YOU TUBE,FASE BOOK ನಲ್ಲಿ ಜಾಹಿರಾತು ನೀಡಿದ್ದಾರೆ.ಎರಡು ತಿಂಗಳ ತರಬೇತಿ ಪಡೆಯುವುದಾಗಿ ಇಂಗ್ಲೆಂಡ್ ನ TOMMY ALISON ಎಂಬ ವ್ಯಕ್ತಿ ಸಂಪರ್ಕಿಸಿ ಎರಡು ತಿಂಗಳ ತರಬೇತಿಗಾಗಿ ಸೇರ್ಪಡೆಯಾಗಿದ್ದಾನೆ.ತರಬೇತಿ ಶುಲ್ಕ
Read More