ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ಮೈಸೂರು,ಜ29,Tv10 ಕನ್ನಡ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕನಸು ನನಸಾಗಿದೆ.13 ವರ್ಷಗಳ ನಿರಂತರ ಪ್ರಯತ್ನ ಫಲ ನೀಡಿದೆ.ಇಂದು ಉದ್ಭೂರಿನಲ್ಲಿ ವಿಷ್ಣು ಸ್ಮಾರಕ ಭವನ ಉದ್ಘಾಟನೆಗೊಳ್ಳಲಿದೆ.ಸ್ಮಾರಕ ಲೋಕಾರ್ಪಣೆಗಾಗಿ ಕ್ಷಣಗಣನೆ ಎದುರಾಗಿದೆ.ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಯಾಗಿದೆ.ಇಂದು ಆಕರ್ಷಕ ಮೆರವಣಿಗೆ ಹಮ್ಮಿಕೊಂಡ ಅಭಿಮಾನಿಗಳು ಸಂಭ್ರಮದಿಂದ ನೆಚ್ಚಿನ ನಾಯಕ ನಟನ ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ.ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇರುವ ಡಾ.ವಿಷ್ಣುವರ್ಧನ್ ಉದ್ಯಾನವನದ ಬಳಿ ಮೆರವಣಿಗೆಗೆ ಚಾಲನೆ ದೊರೆತಿದೆ.ಮಾಜಿ ಕಾರ್ಪೊರೇಟರ್ ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮೆರವಣಿಗೆಗೆ ಚಾಲನೆ ನೀಡಿದರು.ನೂರಾರು ಅಭಿಮಾನಿಗಳು ವಿಷ್ಣು ಭಾವಚಿತ್ರವಿರುವ ಬಾವುಟ ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ.ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಮೆರವಣಿಗೆ ಶ್ರೀರಾಂಪುರ ಸರ್ಕಲ್ ನಲ್ಲಿ ಸಮಾವೇಶಗೊಳ್ಳಲಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *