ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ಉತ್ತಮ ಸಾಧನೆ ಮಾಡಲು ಶಿಕ್ಷಣ ಮುಖ್ಯ ಉದ್ಯೊಮಿ ಬಿಳಿಗೆರೆ ಮಾದೇಗೌಡ

ತಮ್ಮ ಶಿಕ್ಷಣದ ಜೀವನ ನೆನೆದು ಕಣ್ಣೀರಿಟ್ಟ ಸಮಾಜ ಸೇವಕ ಕುರುಬರ ಸಂಘದ ನಿರ್ದೇಶಕ ಉದ್ಯಿಮಿ ಮಾದೇಗೌಡ

ಟಿ ಎಸ್ ಸುಬ್ಬರಾವ್ ಘಾಟ್ಕೆ ಸಾಧನ ಪ್ರಶಸ್ತಿ ಸಮಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು
ಹುಣಸೂರು ತಾಲ್ಲೂಕಿನ ಗಾವಡಗೆರೆ ಟಿ ಎಸ್ ಸುಬ್ಬರಾವ್ ಘಾಟ್ಕೆ ಸರ್ಕಾರಿ ಪಬ್ಲಿಕ್ ಫ್ರೌಡ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಸಲಾಯಿತು ಹಾಗೂ ಶಿಕ್ಷಣಕ್ಕಾಗಿ ಮತ್ತು ಸಮಾಜದ ಉದ್ಧಾರಕ್ಕಾಗಿ 15ಎಕರೆ ಜಾಗವನ್ನು ದಾನ ಮಾಡಿದ ಟಿ ಎಸ್ ಸುಬ್ಬರಾವ್ ಘಾಟ್ಕೆ ಅವರ ಹೆಸರಿನಲ್ಲಿ ಪ್ರಶಸ್ತಿ ಪುರಸ್ಕಾರ ನೀಡಲಾಯಿತು ಹಾಗೂ ಸುಬ್ಬರಾವ್ ಅವರ ಪತ್ನಿ ಕೃಷ್ಣ ಭಾಯಿ ಅವರಿಗೆ ಸನ್ಮಾನ ಮಾಡಲಾಯಿತು
ಇನ್ನು ಹಳೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ನೆನೆಸಿಕೊಳ್ಳುವ ಮೂಲಕ ಗುರುಗಳ ಸ್ನೇಹ ಸಂಬಂಧ ಬಗ್ಗೆ ಮೆಲುಕು ಹಾಕಿದರು
ಶಿಕ್ಷಕರಿಗೆ ಸನ್ಮಾನ ಮಾಡಿ ಗೌರವಿಸಿದ ವಿದ್ಯಾರ್ಥಿಗಳು ತಮ್ಮ ಹಳೆಯ ಸ್ನೇಹಿತರನ್ನು ಕಂಡು ಸಂತೋಷ ಪಟ್ಟರು ಇದೇ ಸಂದರ್ಭದಲ್ಲಿ ಗ್ರಾಮದ ಮಾದೇಗೌಡ ಅವರು ನಾನು ಎಸೆಸೆಲ್ಸಿ ಪರೀಕ್ಷೆ ಬರೆಯದೆ ಬೆಂಗಳೂರು ಸೇರಿದೆ ಆದರೆ ಆಮೇಲೆ ಗೊತ್ತಾಗಿದ್ದು ನಾವು ಏನೇ ಮಾಡಿದರೂ ಅದಕ್ಕೆ ವಿದ್ಯಾ ತುಂಬಾ ಮುಖ್ಯ ಎಂದು ಮತ್ತೆ ಎರಡು ವರ್ಷ ಬಿಟ್ಟು ಎಸೆಸೆಲ್ಸಿ ಪರೀಕ್ಷೆ ಬರೆದು ಜಸ್ಟ್ ಪಾಸ್ ಮಾಡಿದೆ ನನ್ನ ಎಲ್ಲ ಶಿಕ್ಷಕರ ಸಹಾಯದಿಂದ ಪರೀಕ್ಷೆ ಬರೆದು ಈವತ್ತು ಎರಡು ಕಂಪನಿ ಮಾಲೀಕ ಆಗಿದ್ದೇನೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ಸಿಕ್ಕೆದೆ ಆದರೆ ಅವತ್ತು ಇನ್ನು ಹೆಚ್ಚಿನ ಶಿಕ್ಷಣ ಪಡೆದಿದ್ದಾರೆ ಇನ್ನಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಇತ್ತು ಅದನ್ನು ಕಳೆದುಕೊಂಡೆ ಎಂದು ಕಣ್ಣೀರಿಟ್ಟರು
ಈಗಿನ ಮಕ್ಕಳು ಶಿಕ್ಷಕರನ್ನು ಗೌರವಿಸಿ ಉತ್ತಮ ಸಂಬಂಧ ಇಟ್ಟಿಕೊಂಡು ಉತ್ತಮ ಶಿಕ್ಷಣ ಪಡೆಯಿರಿ ಯಾವುದೋ ಕೆಟ್ಟ ಚಟಕ್ಕೆ ಬಿದ್ದು ನಿಮ್ಮ ಜೀವನವನ್ನು ಹಾಳುಮಾಡಿಕೊಳ್ಳಬೇಡಿ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮಕ್ಕಳು ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *