
ಪಿರಿಯಾಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…
- TV10 Kannada Exclusive
- January 30, 2023
- No Comment
- 130

ಪಿರಿಯಾಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…
ಪಿರಿಯಾಪಟ್ಟಣ,ಜ30,Tv10 ಕನ್ನಡ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ರಾಮತುಂಗಾ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ.ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ.ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು.
ನಾಗೇಶ್ ಎಂಬುವವರಿಗೆ ಸೇರಿದ ಎರಡು ಮೇಕೆಗಳನ್ನ ಚಿರತೆ ತಿಂದು ಹಾಕಿತ್ತು.
ಚಿರತೆ ದಾಳಿ ಮಾಡಿದ್ದ ಸ್ಥಳದಲ್ಲಿ ಬೋನು ಇರಿಸಲಾಗಿತ್ತು. ಗಂಡು ಚಿರತೆ
ಸೆರೆ ಸಿಕ್ಕಿದೆ. ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಚಿಪ್ ಅಳವಡಿಸಿ ದೇವಮಾಚಿ ಅರಣ್ಯಕ್ಕೆ ಚಿರತೆ ಬಿಡುಗಡೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ…