ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಜಾತಿ, ಲಿಂಗ, ಸಮಾನತೆ ವಂಚಿತದ ಕಾಲಘಟ್ಟದಲ್ಲಿ ಕಾಯಕವೇ ಭಕ್ತಿ, ಕಾಯಕವೇ ಜೀವನ ಎಂದು ಶ್ರದ್ಧೆ ಇಟ್ಟು ಸಮಾಜದ ಕಂಟಕದ ವಿರುದ್ದ ವಿರೋಧ ವ್ಯಕ್ತಪಡಿಸಿದವರು ಮಡಿವಾಳ ಮಾಚಿದೇವರು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಕಲಾಮಂದಿರದಲ್ಲಿಂದು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

12 ಶತಮಾನದ ಬಿಜ್ಜಳನ ಆಸ್ಥಾನದಲ್ಲಿ ಆದ ಬದಲಾವಣೆಯಿಂದ ವಚನ ಮತ್ತು ವಚನಕಾರರಿಗೆ ಅಪಾಯವಿದ್ದ ಕಾಲದಲ್ಲಿ ವಚನ ಮತ್ತು ವಚನಕಾರರನ್ನು ರಕ್ಷಿಸಿದ ಕೀರ್ತಿ ಮಾಡಿವಾಳ ಮಾಚಿದೇವರಿಗೆ ಸಲ್ಲುತ್ತದೆ ಎಂದರು.

ಮಡಿ ಎಂದರೆ ಶುದ್ಧ, ಶುದ್ಧ ಮಾಡುವುದೆ ಮಾಡಿವಾಳನ ಕುಲ ಕಸುಬು. ಬಟ್ಟೆಯನ್ನಷ್ಟೆ ಅಲ್ಲದೇ ಮನಸ್ಸು, ದಾರಿ, ಜೀವನ ಶೈಲಿ, ವಿವೇಚನೆಗಳನ್ನು ಶುದ್ಧ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಯಕವೇ ಜೀವನ, ಅಭಿವೃದ್ಧಿಯೇ ನಮ್ಮ ವೃತ್ತಿ ಎಂದು ಶ್ರದ್ಧೆ, ಪ್ರೀತಿಯಿಂದ ಯಾವುದೇ ಕೆಲಸ ಮಾಡಿದರೇ ಯಶಸ್ಸು ನಿಶ್ಚಿತ ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಮುಖಂಡರು ಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ನಗರಸಭೆ ಸದಸ್ಯ ನಾಗೇಶ್, ಮಂಜುಳ, ಕೆ.ಎಸ್.ಓ.ಯು ನಿರ್ದೇಶಕಿ ಮಿಲನ ಆರ್ ಹಾಜರಿದ್ದರು.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *