ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಜಾತಿ, ಲಿಂಗ, ಸಮಾನತೆ ವಂಚಿತದ ಕಾಲಘಟ್ಟದಲ್ಲಿ ಕಾಯಕವೇ ಭಕ್ತಿ, ಕಾಯಕವೇ ಜೀವನ ಎಂದು ಶ್ರದ್ಧೆ ಇಟ್ಟು ಸಮಾಜದ ಕಂಟಕದ ವಿರುದ್ದ ವಿರೋಧ ವ್ಯಕ್ತಪಡಿಸಿದವರು ಮಡಿವಾಳ ಮಾಚಿದೇವರು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಕಲಾಮಂದಿರದಲ್ಲಿಂದು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

12 ಶತಮಾನದ ಬಿಜ್ಜಳನ ಆಸ್ಥಾನದಲ್ಲಿ ಆದ ಬದಲಾವಣೆಯಿಂದ ವಚನ ಮತ್ತು ವಚನಕಾರರಿಗೆ ಅಪಾಯವಿದ್ದ ಕಾಲದಲ್ಲಿ ವಚನ ಮತ್ತು ವಚನಕಾರರನ್ನು ರಕ್ಷಿಸಿದ ಕೀರ್ತಿ ಮಾಡಿವಾಳ ಮಾಚಿದೇವರಿಗೆ ಸಲ್ಲುತ್ತದೆ ಎಂದರು.

ಮಡಿ ಎಂದರೆ ಶುದ್ಧ, ಶುದ್ಧ ಮಾಡುವುದೆ ಮಾಡಿವಾಳನ ಕುಲ ಕಸುಬು. ಬಟ್ಟೆಯನ್ನಷ್ಟೆ ಅಲ್ಲದೇ ಮನಸ್ಸು, ದಾರಿ, ಜೀವನ ಶೈಲಿ, ವಿವೇಚನೆಗಳನ್ನು ಶುದ್ಧ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಯಕವೇ ಜೀವನ, ಅಭಿವೃದ್ಧಿಯೇ ನಮ್ಮ ವೃತ್ತಿ ಎಂದು ಶ್ರದ್ಧೆ, ಪ್ರೀತಿಯಿಂದ ಯಾವುದೇ ಕೆಲಸ ಮಾಡಿದರೇ ಯಶಸ್ಸು ನಿಶ್ಚಿತ ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಮುಖಂಡರು ಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ನಗರಸಭೆ ಸದಸ್ಯ ನಾಗೇಶ್, ಮಂಜುಳ, ಕೆ.ಎಸ್.ಓ.ಯು ನಿರ್ದೇಶಕಿ ಮಿಲನ ಆರ್ ಹಾಜರಿದ್ದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *