8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…

8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…

  • Politics
  • February 2, 2023
  • No Comment
  • 155

8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…

ಮೈಸೂರು,ಫೆ2,Tv10 ಕನ್ನಡ
ಕಳೆದ 8 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ ಸರ್ಕಾರ 120 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.ಇದೇ ಬಿಜೆಪಿ ಯ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ಈ ಬಾರಿಯ ಕೇಂದ್ರ ಬಜೆಟ್ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ 155 ಲಕ್ಷ ಕೋಟಿ ಸಾಲವಿದ್ದು, ವರ್ಷಾಂತ್ಯಕ್ಕೆ 18ಲಕ್ಷ ಕೋಟಿ ಹೊಸ ಸಾಲ ಪಡೆಯುವುದಾಗಿ ಹೇಳಿದ್ದಾರೆ.ಈ ಮೂಲಕ ದೇಶದ ಸಾಲ ವರ್ಷಾಂತ್ಯಕ್ಕೆ 173 ಲಕ್ಷ ಕೋಟಿಗೆ ಏರಿಕೆಯಾಗಲಿದೆ.1947ರಿಂದ 2014ರವರೆಗೆ ದೇಶದ ಮೇಲೆ ಇದ್ದ ಸಾಲ 53 ಲಕ್ಷ ಕೋಟಿ.ಆದರೆ ಕಳೆದ ಎಂಟು ವರ್ಷಗಳ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿರುವುದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದರು.ದೇಶ ಪ್ರತಿವರ್ಷ 10.81 ಲಕ್ಷ ಕೋಟಿ ಬಡ್ಡಿ ಕಟ್ಟಬೇಕಿದೆ.ಅಂದರೆ 100 ರೂಪಾಯಿಯಲ್ಲಿ 42 ರೂಪಾಯಿ ಬಡ್ಡಿಗೆ ಹೋಗಲಿದೆ.ಈ ರೀತಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದ ಜಿಡಿಪಿ ದರ 8.7% ಇತ್ತು.
ದೇಶದ ಜಿಡಿಪಿ ದರ ಈಗ 6%ಕ್ಕೆ ಇಳಿದಿದೆ.
2004ರಿಂದ 2014ರವರೆಗೆ 13% ತಲಾ ಆದಾಯವಿತ್ತು.
2014ರಿಂದ 2023ರವರೆಗೆ ತಲಾ ಆದಾಯ 9% ಕ್ಕೆ ಕುಸಿದಿದೆ ಎಂದು ಆರೋಪಿಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *