ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಫೆ3,Tv10 ಕನ್ನಡ
ಮೈಸೂರಿನ ಬೇಕರಿಯೊಂದರ ಮಾಲೀಕನೋರ್ವನ ಮೇಲೆ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಮೈಸೂರಿನ ಹಲವು ಬಡಾವಣೆಗಳಲ್ಲಿ ತಲೆಯೆತ್ತಿರುವ ರಾಯಲ್ ವಾರಿಯರ್ ಬೇಕರಿ ಮಾಲೀಕ ಮನೋಜ್ ಎಂಬಾತನ ಮೇಲೆ ಅತ್ಯಾಚಾರ ಆರೋಪ ಹೊರಿಸಿ ಯುವತಿಯೋರ್ವಳು ದೂರು ನೀಡಿದ್ದಾಳೆ. ಮನೋಜ್ ಅಲಿಯಾಸ್ ಹೃತಿಕ್ ಎಂಬಾತ ಮಹಾರಾಜ ಕಾಲೇಜಿನಲ್ಲಿ ಬಿ.ಎ.ಓದುತ್ತಿದ್ದಾಗ ಪರಿಚಯವಾಗಿದ್ದು ಕಳೆದ ನಾಲ್ಕೂವರೆ ವರ್ಷಗಳಿಂದ ನನ್ನನ್ನು ಮದುವೆ ಅಗುವುದಾಗಿ ನಂಬಿಸಿ,ನನ್ನ ಬೆನ್ನ ಹಿಂದೆ ಬಿದ್ದು ಗೋಳಾಡಿ ಬೆದರಿಸಿ ಪ್ರೀತಿಸುವುದಾಗಿ ಹೇಳಿ ಸುಮಾರು ಎರಡು-ಮೂರು ಬಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನನ್ನು ಕರೆದುಕೊಂಡು ಹೋಗಿ ಬಲವಂತವಾಗಿ ನನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.ಈ ವಿಚಾರವನ್ನು ಅವರ ತಂದೆ, ತಾಯಿ ಮತ್ತವರ ಅಕ್ಕನಿಗೆ ತಿಳಿಸಿ, ಅವರ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಅವರು ನನ್ನನ್ನು ಬಾಯಿಗೆ ಬಂದಂತೆ ಬೈದು ,ನಿನಗೆ ಸ್ವಲ್ಪ ಹಣವನ್ನು ಬೇಕಾದರೆ ಕೊಡುತ್ತೇವೆ ಎಂದು ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ ಅವರ ಬೇಕರಿಯಲ್ಲಿ ಕೆಲಸ ಮಾಡುವ ಹೆಚ್.ಆರ್ ಅವರನ್ನು ಕರೆದುಕೊಂಡು ಬಂದು ಅವರಿಂದ ಹೆದರಿಸಿದ್ದಾರೆ. ಅಷ್ಟೇ ಅಲ್ಲದೆ ಜನವರಿ 23 ರಂದು ರಾತ್ರಿ ವೇಳೆ ಮನೋಜ್ ಬಂದು ನನಗೆ ಬಾಯಿಗೆ ಬಂದಂತೆ ಬೈದು ನನ್ನನ್ನು ಅವನ ಕಾರಿನಲ್ಲಿ ಕೂರಿಸಿಕೊಂಡು 20 ರಿಂದ 30 ಮಾತ್ರೆಗಳನ್ನು ಬಲವಂತವಾಗಿ ನನ್ನ ಬಾಯಿಗೆ ತುರುಕಿ ಸಾಯಿಸಲು ಪ್ರಯತ್ನಪಟ್ಟಿದ್ದಾನೆ. ನಂತರ ಆತನೇ ನನ್ನನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ. ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರನ್ನು ನೀಡಿದ್ದು, ಯುವತಿ ನೀಡಿರುವ ದೂರಿನ ಮೇರೆಗೆ
ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *