ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಫೆ3,Tv10 ಕನ್ನಡ
ಮೈಸೂರಿನ ಬೇಕರಿಯೊಂದರ ಮಾಲೀಕನೋರ್ವನ ಮೇಲೆ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಮೈಸೂರಿನ ಹಲವು ಬಡಾವಣೆಗಳಲ್ಲಿ ತಲೆಯೆತ್ತಿರುವ ರಾಯಲ್ ವಾರಿಯರ್ ಬೇಕರಿ ಮಾಲೀಕ ಮನೋಜ್ ಎಂಬಾತನ ಮೇಲೆ ಅತ್ಯಾಚಾರ ಆರೋಪ ಹೊರಿಸಿ ಯುವತಿಯೋರ್ವಳು ದೂರು ನೀಡಿದ್ದಾಳೆ. ಮನೋಜ್ ಅಲಿಯಾಸ್ ಹೃತಿಕ್ ಎಂಬಾತ ಮಹಾರಾಜ ಕಾಲೇಜಿನಲ್ಲಿ ಬಿ.ಎ.ಓದುತ್ತಿದ್ದಾಗ ಪರಿಚಯವಾಗಿದ್ದು ಕಳೆದ ನಾಲ್ಕೂವರೆ ವರ್ಷಗಳಿಂದ ನನ್ನನ್ನು ಮದುವೆ ಅಗುವುದಾಗಿ ನಂಬಿಸಿ,ನನ್ನ ಬೆನ್ನ ಹಿಂದೆ ಬಿದ್ದು ಗೋಳಾಡಿ ಬೆದರಿಸಿ ಪ್ರೀತಿಸುವುದಾಗಿ ಹೇಳಿ ಸುಮಾರು ಎರಡು-ಮೂರು ಬಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನನ್ನು ಕರೆದುಕೊಂಡು ಹೋಗಿ ಬಲವಂತವಾಗಿ ನನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.ಈ ವಿಚಾರವನ್ನು ಅವರ ತಂದೆ, ತಾಯಿ ಮತ್ತವರ ಅಕ್ಕನಿಗೆ ತಿಳಿಸಿ, ಅವರ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಅವರು ನನ್ನನ್ನು ಬಾಯಿಗೆ ಬಂದಂತೆ ಬೈದು ,ನಿನಗೆ ಸ್ವಲ್ಪ ಹಣವನ್ನು ಬೇಕಾದರೆ ಕೊಡುತ್ತೇವೆ ಎಂದು ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ ಅವರ ಬೇಕರಿಯಲ್ಲಿ ಕೆಲಸ ಮಾಡುವ ಹೆಚ್.ಆರ್ ಅವರನ್ನು ಕರೆದುಕೊಂಡು ಬಂದು ಅವರಿಂದ ಹೆದರಿಸಿದ್ದಾರೆ. ಅಷ್ಟೇ ಅಲ್ಲದೆ ಜನವರಿ 23 ರಂದು ರಾತ್ರಿ ವೇಳೆ ಮನೋಜ್ ಬಂದು ನನಗೆ ಬಾಯಿಗೆ ಬಂದಂತೆ ಬೈದು ನನ್ನನ್ನು ಅವನ ಕಾರಿನಲ್ಲಿ ಕೂರಿಸಿಕೊಂಡು 20 ರಿಂದ 30 ಮಾತ್ರೆಗಳನ್ನು ಬಲವಂತವಾಗಿ ನನ್ನ ಬಾಯಿಗೆ ತುರುಕಿ ಸಾಯಿಸಲು ಪ್ರಯತ್ನಪಟ್ಟಿದ್ದಾನೆ. ನಂತರ ಆತನೇ ನನ್ನನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ. ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರನ್ನು ನೀಡಿದ್ದು, ಯುವತಿ ನೀಡಿರುವ ದೂರಿನ ಮೇರೆಗೆ
ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *