ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಫೆ3,Tv10 ಕನ್ನಡ
ಮೈಸೂರಿನ ಬೇಕರಿಯೊಂದರ ಮಾಲೀಕನೋರ್ವನ ಮೇಲೆ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಮೈಸೂರಿನ ಹಲವು ಬಡಾವಣೆಗಳಲ್ಲಿ ತಲೆಯೆತ್ತಿರುವ ರಾಯಲ್ ವಾರಿಯರ್ ಬೇಕರಿ ಮಾಲೀಕ ಮನೋಜ್ ಎಂಬಾತನ ಮೇಲೆ ಅತ್ಯಾಚಾರ ಆರೋಪ ಹೊರಿಸಿ ಯುವತಿಯೋರ್ವಳು ದೂರು ನೀಡಿದ್ದಾಳೆ. ಮನೋಜ್ ಅಲಿಯಾಸ್ ಹೃತಿಕ್ ಎಂಬಾತ ಮಹಾರಾಜ ಕಾಲೇಜಿನಲ್ಲಿ ಬಿ.ಎ.ಓದುತ್ತಿದ್ದಾಗ ಪರಿಚಯವಾಗಿದ್ದು ಕಳೆದ ನಾಲ್ಕೂವರೆ ವರ್ಷಗಳಿಂದ ನನ್ನನ್ನು ಮದುವೆ ಅಗುವುದಾಗಿ ನಂಬಿಸಿ,ನನ್ನ ಬೆನ್ನ ಹಿಂದೆ ಬಿದ್ದು ಗೋಳಾಡಿ ಬೆದರಿಸಿ ಪ್ರೀತಿಸುವುದಾಗಿ ಹೇಳಿ ಸುಮಾರು ಎರಡು-ಮೂರು ಬಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನನ್ನು ಕರೆದುಕೊಂಡು ಹೋಗಿ ಬಲವಂತವಾಗಿ ನನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.ಈ ವಿಚಾರವನ್ನು ಅವರ ತಂದೆ, ತಾಯಿ ಮತ್ತವರ ಅಕ್ಕನಿಗೆ ತಿಳಿಸಿ, ಅವರ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಅವರು ನನ್ನನ್ನು ಬಾಯಿಗೆ ಬಂದಂತೆ ಬೈದು ,ನಿನಗೆ ಸ್ವಲ್ಪ ಹಣವನ್ನು ಬೇಕಾದರೆ ಕೊಡುತ್ತೇವೆ ಎಂದು ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ ಅವರ ಬೇಕರಿಯಲ್ಲಿ ಕೆಲಸ ಮಾಡುವ ಹೆಚ್.ಆರ್ ಅವರನ್ನು ಕರೆದುಕೊಂಡು ಬಂದು ಅವರಿಂದ ಹೆದರಿಸಿದ್ದಾರೆ. ಅಷ್ಟೇ ಅಲ್ಲದೆ ಜನವರಿ 23 ರಂದು ರಾತ್ರಿ ವೇಳೆ ಮನೋಜ್ ಬಂದು ನನಗೆ ಬಾಯಿಗೆ ಬಂದಂತೆ ಬೈದು ನನ್ನನ್ನು ಅವನ ಕಾರಿನಲ್ಲಿ ಕೂರಿಸಿಕೊಂಡು 20 ರಿಂದ 30 ಮಾತ್ರೆಗಳನ್ನು ಬಲವಂತವಾಗಿ ನನ್ನ ಬಾಯಿಗೆ ತುರುಕಿ ಸಾಯಿಸಲು ಪ್ರಯತ್ನಪಟ್ಟಿದ್ದಾನೆ. ನಂತರ ಆತನೇ ನನ್ನನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ. ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರನ್ನು ನೀಡಿದ್ದು, ಯುವತಿ ನೀಡಿರುವ ದೂರಿನ ಮೇರೆಗೆ
ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *