
ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…
- TV10 Kannada Exclusive
- February 4, 2023
- No Comment
- 119
ಮೈಸೂರು:ನಡು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…
ಮೈಸೂರು,ಫೆ4,Tv10 ಕನ್ನಡ
ಕೊರೊನಾ ಭೀತಿಯಿಂದ ನಿಧಾನವಾಗಿ ಹೊರಬರುತ್ತಿರುವ ಮೈಸೂರಿನ ಜನತೆಗೆ ಇದೀಗ ಚಿರತೆ ಹಾವಳಿ ನಿದ್ದೆಗೆಡಿಸಿದೆ.ಗ್ರಾಮೀಣ ಪ್ರದೇಶಗಳ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ನಗರ ಪ್ರದೇಶಗಳಿಗೂ ಎಂಟ್ರಿ ಕೊಡುತ್ತಿವೆ.ಮೈಸೂರಿನ ಆರ್ .ಟಿ.ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದೆ.
ಇಲ್ಲಿನ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ.
ರಸ್ತೆ ದಾಟುತ್ತಿದ್ದ ಚಿರತೆ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯರು ಇದೀಗ ಭಯ ಭೀತರಾಗಿದ್ದಾರೆ.
ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ನಿನ್ನೆ ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಮೈದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.
ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗರುವುದು ಜನರಲ್ಲಿ ತೀವ್ರ ಆತಂಕ ಶುರುವಾಗಿದೆ.ಚಿರತೆಗಳ ಉಪಟಳಕ್ಕೆ ಬ್ರೇಕ್ ಹಾಕುವಂತೆ ಒತ್ತಾಯಿಸಿದ್ದಾರೆ…