ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಮೈಸೂರು,ಫೆ5,Tv10 ಕನ್ನಡ
ಸಿಸಿಬಿ ವಿಶೇಷ ತಂಡ ಹಣೆದ ಬಲೆಗೆ ಖದೀಮ ಲಾಕ್ ಆಗಿದ್ದಾನೆ.ಮೈಸೂರು ಬೆಂಗಳೂರು ಸೇರಿದಂತೆ 10 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ವಿಚಾರಣೆ ವೇಳೆ ಈ ಹಿಂದೆ ಈತ 45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಕನ್ನ ಕಳುವು ಪ್ರಕರಣ ಹೆಚ್ಚಾದ ಹಿನ್ನಲೆ ಬ್ರೇಕ್ ಹಾಕಲು ಸಿಸಿಬಿ ಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಎನ್.ಆರ್.ಮೊಹಲ್ಲಾದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದ ವಿಶೇಷ ತಂಡ ವಿಚಾರಣೆಗೆ ಒಳಪಡಿಸಿದಾಗ ಶಾಕ್ ಆಗುವ ಸರದಿ ಪೊಲೀಸರದಾಗಿತ್ತು.ಶೆಟರ್ ಗಳನ್ನ ಮೀಟಿ ಕಳುವು ಮಾಡುತ್ತಿದ್ದ ವಿಚಾರವನ್ನ ಬಂಧಿತ ಆರೋಪಿ ಒಪ್ಪಿಕೊಂಡಿದ್ದ.ಬಂಧಿತನಿಂದ 1,32,850/- ನಗದು ಹಾಗೂ ಹಾಲಿನ ಉತ್ಪನ್ನಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಹಾಲಿನ ಬೂತ್,ಮೆಡಿಕಲ್ ಶಾಪ್ ಹಾಗೂ ದೇವಸ್ಥಾನಗಳು ಈತನ ಟಾರ್ಗೆಟ್. ವಿಚಾರಣೆ ವೇಳೆ ಈತ 45 ಕನ್ನಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.ಮೈಸೂರು,ಹಾಸನ,ಮಂಡ್ಯ,ಬಗಳೂರು ಸೇರಿದಂತೆ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೃತ್ಯ ನಡೆಸಿರುವು ಬೆಳಕಿಗೆ ಬಂದಿದೆ.

ಅಪರಾದ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ಗೋವಿಂದ,ಮಧು,ಗಣೇಶ್,ಉಮಾಮಹೇಶ್ ಹಾಗೂ ಚಿಕ್ಕಣ್ಣ ಕಾರ್ಯಾಚರಣೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *