ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಮೈಸೂರು,ಫೆ7,Tv10 ಕನ್ನಡ :
ವೇಸ್ಟೇಜ್ ಆಫರ್ ವಿಚಾರದಲ್ಲಿ ಚಿನ್ನ ಬೆಳ್ಳಿ ತಯಾರಕರ ನಡುವೆ ಗಲಾಟೆ ನಡೆದ ಘಟನೆ ಮೈಸೂರಿನ ಇರ್ವಿನ್ ರಸ್ತೆಯಲ್ಲಿ ನಡೆದಿದೆ.
ಅಂಗಡಿಗೆ ನುಗ್ಗಿದ ಗುಂಪು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡಿದ್ದಾರೆ.
ನೂತನ್, ಚೇತನ್, ಮನೋಜ್ ಗಾಯಗೊಂಡಿದ್ದಾರೆ.
ಆಭರಣ ತಯಾರಕರೇ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪ ಬಂದಿದೆ.ಕಡಿಮೆ ವೇಸ್ಟೇಜ್‌ನಲ್ಲಿ ಆಭರಣ ತಯಾರಿಸುವುದಾಗಿ ನೂತನ್ ಆಫರ್ ನೀಡಿದ್ದಾರೆ.
ಸಾಮಾನ್ಯವಾಗಿ ಶೇಕಡ 5ರಷ್ಟು ವೇಸ್ಟೇಜ್‌ನಲ್ಲಿ ಆಭರಣ ತಯಾರಿಕೆ ಮಾಡುವ ಪದ್ದತಿ ಇದೆ.
ಶೇಕಡ 4ರಷ್ಟು ವೇಸ್ಟೇಜ್‌‌ನಲ್ಲೇ ಆಭರಣ ತಯಾರಿಸಿ‌ ಕೊಡುವುದಾಗಿ ನೂತನ್ ಆಫರ್ ನೀಡಿದ್ದಾರೆ.ಈ ಸಂಬಂಧ ಭಿತ್ತಿಪತ್ರ ಹಂಚಿದ್ದಾರೆ.ಈ ಹಿನ್ನೆಲೆಯಲ್ಲಿ ಚಿನ್ನ ಬೆಳ್ಳಿ ತಯಾರಿಸುವ ಕೆಲವು ಮಂದಿ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.ಮಾತಿನ ಚಕಮಕಿ ನಡೆದಿದೆ.
ಇದೇ ಕಾರಣಕ್ಕಾಗಿ ಗುಂಪಾಗಿ ಬಂದು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ.
ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *