ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಗ್ರಾಮ ಲೆಕ್ಕಿಗ ಆಂಥೋಣಿ ಸುನಿಲ್ ರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ…Tv10 ವರದಿ ಫಲಶೃತಿ…

ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಗ್ರಾಮ ಲೆಕ್ಕಿಗ ಆಂಥೋಣಿ ಸುನಿಲ್ ರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ…Tv10 ವರದಿ ಫಲಶೃತಿ…

ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಗ್ರಾಮ ಲೆಕ್ಕಿಗ ಆಂಥೋಣಿ ಸುನಿಲ್ ರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ…Tv10 ವರದಿ ಫಲಶೃತಿ…

ಮೈಸೂರು,ಫೆ8,Tv10 ಕನ್ನಡ
ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಟಿ.ನರಸೀಪುರ ತಾಲೂಕು ಮೂಗೂರು ಹೋಬಳಿ ಗ್ರಾಮಲೆಕ್ಕಿಗ ಆಂಥೋಣಿ ಸುನಿಲ್ ರಾಜ್ ಅಮಾನತ್ತಾಗಿದ್ದಾರೆ.ದಾಖಲೆಗಳನ್ನ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರು ಆರೋಪ ಸಾಬೀತಾದ ಹಿನ್ನಲೆ ಮಹತ್ವದ ಆದೇಶ ಹೊರಡಿಸಿದ್ದಾರೆ.ಇದು Tv10 ಕನ್ನಡವಾಹಿನಿಯ ವರದಿ ಫಲಶೃತಿಯಾಗಿದೆ.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆ ಸಮೇತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.ಜನವರಿ 31 ರಂದು ಆಂಥೋಣಿ ಸುನಿಲ್ ರಾಜ್ ರ ಗೋಲ್ಮಾಲ್ ಸುದ್ದಿಯನ್ನ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಿತ್ತು.ವರದಿಗೆ ಎಚ್ಚೆತ್ತ ಜಿಲ್ಕಾಧಿಕಾರಿಗಳು ಆಂಥೋಣಿ ಸುನಿಲ್ ರಾಜ್ ವಿರುದ್ದ ಕ್ರಮ ಕೈಗೊಂಡಿದ್ದಾರೆ.

ಮಾಡ್ರಹಳ್ಳಿಯ ಗ್ರಾಮಲೆಕ್ಕಿಗನಾಗಿರುವ ಆಂಥೋಣಿ ಸುನಿಲ್ ರಾಜ್ ಜಮೀನುಗಳಿಗೆ ಕಂದಾಯ ಪಾವತಿಸಿದ ರೈತರಿಗೂ ವಂಚಿಸಿದ್ದರು ಅಲ್ಲದೆ ಸರ್ಕಾರಕ್ಕೆ ಸೇರಬೇಕಾದ ಹಣವನ್ನ ಗುಳುಂ ಮಾಡಿ ಖಜಾನೆಗೂ ಧೋಕಾ ಮಾಡಿದ್ದರು.ಕಂದಾಯ ಪಾವತಿಸಿದ ವೇಳೆ ಸರ್ಕಾರಕ್ಕೆ ಸೇರಬೇಕಾದ ಕಾಪಿಯಲ್ಲಿ ಒಂದು ಮೊತ್ತ ರೈತರಿಗೆ ನೀಡಲಾದ ರಸೀತಿಯಲ್ಲಿ ಒಂದು ಮೊತ್ತ ನಮೂದಿಸಿ ವಂಚಿಸಿದ್ದರು.ಒಂದೇ ದಿನದಲ್ಲಿ 7 ರೈತರಿಗೆ ವಂಚಿಸಿ ಸರ್ಕಾರಕ್ಕೂ ದ್ರೋಹ ಬಗೆದಿದ್ದರು.7 ರೈತರಿಂದ 8162 ರೂಗಳನ್ನ ಪಾವತಿಸಿಕೊಂಡಿದ್ದರು.ಸರ್ಕಾರಕ್ಕೆ ಸೇರಿದ ಕಾಪಿಯಲ್ಲಿ ಕೇವಲ 440 ರೂ ಮಾತ್ರ ನಮೂದಿಸಿದ್ದರು.ಉಳಿದ 7722 ರೂಗಳನ್ನ ಕಬಳಿಸಿದ್ದರು.ಈ ಸಕ್ರಮವನ್ನ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ದಾಖಲೆ ಸಮೇತ ಬಯಲಿಗೆ ಎಳೆದು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದರು.ಈ ಅಕ್ರಮವನ್ನ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು.ಇದೀಗ ಸರ್ಕಾರಕ್ಕೆ ವಂಚಿಸಿದ ಗ್ರಾಮಲೆಕ್ಕಿಗ ಆಂಥೋಣಿ ಸುನಿಲ್ ರಾಜ್ ರನ್ನ ಸಸ್ಪೆಂಡ್ ಮಾಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *