ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಭಾಷಣ ಪ್ರಕರಣ…ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ…ಕೇಸ್ ವಜಾ…

ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಭಾಷಣ ಪ್ರಕರಣ…ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ…ಕೇಸ್ ವಜಾ…

  • Mysore
  • February 9, 2023
  • No Comment
  • 141

ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಭಾಷಣ ಪ್ರಕರಣ…ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ…ಕೇಸ್ ವಜಾ…

ಮೈಸೂರು,ಫೆ9,Tv10 ಕನ್ನಡ
ಹಿಂದೂ ಧರ್ಮದ ಬಗ್ಗೆ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ್ದ ಪ್ರೊ.ಕೆ.ಎಸ್.ಭಗವಾನ್,ಪ್ರೊ.ಅರವಿಂದ ಮಾಲಗತ್ತಿ ಹಾಗೂ ಮಹೇಶ್ ಚಂದ್ರ ಗುರು ರವರ ಮೇಲಿದ್ದ ಪ್ರಕರಣ ನ್ಯಾಯಾಲಯ ವಜಾ ಮಾಡಿದೆ.ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಪ್ರಕರಣವನ್ನ ವಜಾ ಮಾಡಲಾಗಿದೆ.ಮೈಸೂರಿನ ನಾಲ್ಕನೇ ಅಡಿಷನಲ್ ಸಿವಿಲ್ ಜಡ್ಜ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಪ್ರಕರಣ ವಜಾ ಮಾಡಲಾಗಿದೆ. ಜಯಲಕ್ಷ್ಮೀಪುರಂ ಪೊಲೀಸ್ ಠಾಣಾ ಮೊ ಸಂಖ್ಯೆ 11/2015 ರಲ್ಲಿ ಪ್ರಕರಣ ದಾಖಲಾಗಿತ್ತು.15-02-2015 ರಂದು ವಿಶ್ವ ಹಿಂದೂ ಪರಿಷತ್ ಮುಖಂಡ ಮನೋಜ್ ಕುಮಾರ್ ರವರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. ಮಾನಸ ಗಂಗೋತ್ರಿಯಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಕೆ ಎಸ್ ಭಗವಾನ್, ಪ್ರೊ ಅರವಿಂದ ಮಾಲಗತ್ತಿ ಹಾಗೂ ಪ್ರೊ ಮಹೇಶ್ ಚಂದ್ರಗುರು ರವರುಗಳು ಭಾಷಣದಲ್ಲಿ ಮಾತನಾಡುತ್ತಾ ಹಿಂದೂ ಧರ್ಮದ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರೆಂದು ಆರೋಪಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇವರುಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಿದ್ದರು. ಮೊ ನಂ-11/2015 ರಲ್ಲಿ ಕಲಂ 295(a) IPC ರೀತ್ಯಾ ಪ್ರಕರಣ ದಾಖಲಿಸಿದ್ದರು.

ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನ ನ್ಯಾಯಾಲಯ ಕೈಬಿಟ್ಟಿದೆ.ವಿಶ್ವಹಿಂದೂಪರಿಷತ್ ಹೋರಾಟಗಾರರಿಗೆ ಹಿನ್ನಡೆಯಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *