ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಭಾಷಣ ಪ್ರಕರಣ…ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ…ಕೇಸ್ ವಜಾ…

ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಭಾಷಣ ಪ್ರಕರಣ…ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ…ಕೇಸ್ ವಜಾ…

  • Mysore
  • February 9, 2023
  • No Comment
  • 120

ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಭಾಷಣ ಪ್ರಕರಣ…ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ…ಕೇಸ್ ವಜಾ…

ಮೈಸೂರು,ಫೆ9,Tv10 ಕನ್ನಡ
ಹಿಂದೂ ಧರ್ಮದ ಬಗ್ಗೆ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ್ದ ಪ್ರೊ.ಕೆ.ಎಸ್.ಭಗವಾನ್,ಪ್ರೊ.ಅರವಿಂದ ಮಾಲಗತ್ತಿ ಹಾಗೂ ಮಹೇಶ್ ಚಂದ್ರ ಗುರು ರವರ ಮೇಲಿದ್ದ ಪ್ರಕರಣ ನ್ಯಾಯಾಲಯ ವಜಾ ಮಾಡಿದೆ.ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಪ್ರಕರಣವನ್ನ ವಜಾ ಮಾಡಲಾಗಿದೆ.ಮೈಸೂರಿನ ನಾಲ್ಕನೇ ಅಡಿಷನಲ್ ಸಿವಿಲ್ ಜಡ್ಜ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಪ್ರಕರಣ ವಜಾ ಮಾಡಲಾಗಿದೆ. ಜಯಲಕ್ಷ್ಮೀಪುರಂ ಪೊಲೀಸ್ ಠಾಣಾ ಮೊ ಸಂಖ್ಯೆ 11/2015 ರಲ್ಲಿ ಪ್ರಕರಣ ದಾಖಲಾಗಿತ್ತು.15-02-2015 ರಂದು ವಿಶ್ವ ಹಿಂದೂ ಪರಿಷತ್ ಮುಖಂಡ ಮನೋಜ್ ಕುಮಾರ್ ರವರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. ಮಾನಸ ಗಂಗೋತ್ರಿಯಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಕೆ ಎಸ್ ಭಗವಾನ್, ಪ್ರೊ ಅರವಿಂದ ಮಾಲಗತ್ತಿ ಹಾಗೂ ಪ್ರೊ ಮಹೇಶ್ ಚಂದ್ರಗುರು ರವರುಗಳು ಭಾಷಣದಲ್ಲಿ ಮಾತನಾಡುತ್ತಾ ಹಿಂದೂ ಧರ್ಮದ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರೆಂದು ಆರೋಪಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇವರುಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಪ್ರಕರಣ ದಾಖಲಿಸಿದ್ದರು. ಮೊ ನಂ-11/2015 ರಲ್ಲಿ ಕಲಂ 295(a) IPC ರೀತ್ಯಾ ಪ್ರಕರಣ ದಾಖಲಿಸಿದ್ದರು.

ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನ ನ್ಯಾಯಾಲಯ ಕೈಬಿಟ್ಟಿದೆ.ವಿಶ್ವಹಿಂದೂಪರಿಷತ್ ಹೋರಾಟಗಾರರಿಗೆ ಹಿನ್ನಡೆಯಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *