ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

  • Crime
  • February 9, 2023
  • No Comment
  • 325

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಮೈಸೂರು,ಫೆ9,Tv10 ಕನ್ನಡ
ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ 14 ಲಕ್ಷ ಮೌಲ್ಯದ 8 ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ.ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.ಮಂಜು(32) ಹಾಗೂ ಚಂದನ್(27) ಬಂಧಿತ ಆರೋಪಿಗಳು.ಚಂದು ತಲೆ ಮರೆಸಿಕೊಂಡಿರುವ ಆರೋಪಿ.

ರಾತ್ರಿ ಗಸ್ತಿನ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.ಮೊದಲ ಆರೋಪಿ ಮಂಜು ಈಗಾಗಲೇ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.ಜೈಲಿನಲ್ಲಿದ್ದಾಗಲೇ ಚಂದನ್ ನ ಪರಿಚಯ ಮಾಡಿಕೊಂಡು ಮೂವರು ಆರೋಪಿಗಳು ಸೇರಿ ಕೃತ್ಯವೆಸಗಿದ್ದಾರೆ.

ಜಯಲಕ್ಷ್ಮಿಪುರಂ,ಕುವೆಂಪುನಗರ,ಆಲನಹಳ್ಳಿ,ಉದಯಗಿರಿ,ಕೊಳ್ಳೇಗಾಲ,ನಂಜನಗೂಡು,ಕೆ.ಆರ್.ನಗರ,ಟಿ.ನರಸೀಪುರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಸರಗಳುವು ಪ್ರಕರಣಗಳು ಪತ್ತೆಯಾಗಿದೆ.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಮುತ್ತುರಾಜ್ ಹಾಗೂ ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥನಾರಾಯಣ್ ರವರ ಮೇಲ್ವಿಚಾರಣೆಯಲ್ಲಿ ಜಯಲಕ್ಷ್ಮಿಪುರಂ ನ ಇನ್ಸ್ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ಪಿಎಸ್ಸೈ ರಂಗಸ್ವಾಮಿ ಸಿಬ್ಬಂದಿಗಳಾದ ಪ್ರಭುರಾಜ್,ಅಭಿಷೇಕ್ ಬೆಂಜಮಿನ್,ದೇವರಾಜು,ಅಮಿಸಿದ್ದ ಖೋತ್,ಕಾಂತರಾಜು,ಮಾಯಪ್ಪ ಕರಂಗಾವಿ,ಮನೋಹರ್,ಕುಮಾರ್.ಎನ್.ಅರ್.ಎಸಿಪಿ ಸ್ಕ್ವಾಡ್ ನ ಎಎಸ್ಸೈ ಅನಿಲ್ ಶಂಕಪಾಲ್,ರಮೇಶ್,ಲಿಂಗರಾಜಪ್ಪ,ಸುರೇಶ್,ಜೀವನ್,ಹರೀಶ್,ಹನುಮಂತ ಕಲ್ಲೇದ್ ನಗರ ಪೊಲೀಸ್ ಆಯುಕ್ತರ ಕಚೇರಿಯ ತತ್ರಿಕ ವಿಭಾಗದ ಸಿಬ್ಬಂದಿಗಳಾದ ಕುಮಾರ್,ಗುರುದೇವಾರಾಧ್ಯ,ಮಂಜು,ಶ್ಯಾಂಸುಂದರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.

ಅಧಿಕಾರಿ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *