ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

  • Crime
  • February 9, 2023
  • No Comment
  • 267

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಮೈಸೂರು,ಫೆ9,Tv10 ಕನ್ನಡ
ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ 14 ಲಕ್ಷ ಮೌಲ್ಯದ 8 ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ.ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.ಮಂಜು(32) ಹಾಗೂ ಚಂದನ್(27) ಬಂಧಿತ ಆರೋಪಿಗಳು.ಚಂದು ತಲೆ ಮರೆಸಿಕೊಂಡಿರುವ ಆರೋಪಿ.

ರಾತ್ರಿ ಗಸ್ತಿನ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.ಮೊದಲ ಆರೋಪಿ ಮಂಜು ಈಗಾಗಲೇ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.ಜೈಲಿನಲ್ಲಿದ್ದಾಗಲೇ ಚಂದನ್ ನ ಪರಿಚಯ ಮಾಡಿಕೊಂಡು ಮೂವರು ಆರೋಪಿಗಳು ಸೇರಿ ಕೃತ್ಯವೆಸಗಿದ್ದಾರೆ.

ಜಯಲಕ್ಷ್ಮಿಪುರಂ,ಕುವೆಂಪುನಗರ,ಆಲನಹಳ್ಳಿ,ಉದಯಗಿರಿ,ಕೊಳ್ಳೇಗಾಲ,ನಂಜನಗೂಡು,ಕೆ.ಆರ್.ನಗರ,ಟಿ.ನರಸೀಪುರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಸರಗಳುವು ಪ್ರಕರಣಗಳು ಪತ್ತೆಯಾಗಿದೆ.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಮುತ್ತುರಾಜ್ ಹಾಗೂ ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥನಾರಾಯಣ್ ರವರ ಮೇಲ್ವಿಚಾರಣೆಯಲ್ಲಿ ಜಯಲಕ್ಷ್ಮಿಪುರಂ ನ ಇನ್ಸ್ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ಪಿಎಸ್ಸೈ ರಂಗಸ್ವಾಮಿ ಸಿಬ್ಬಂದಿಗಳಾದ ಪ್ರಭುರಾಜ್,ಅಭಿಷೇಕ್ ಬೆಂಜಮಿನ್,ದೇವರಾಜು,ಅಮಿಸಿದ್ದ ಖೋತ್,ಕಾಂತರಾಜು,ಮಾಯಪ್ಪ ಕರಂಗಾವಿ,ಮನೋಹರ್,ಕುಮಾರ್.ಎನ್.ಅರ್.ಎಸಿಪಿ ಸ್ಕ್ವಾಡ್ ನ ಎಎಸ್ಸೈ ಅನಿಲ್ ಶಂಕಪಾಲ್,ರಮೇಶ್,ಲಿಂಗರಾಜಪ್ಪ,ಸುರೇಶ್,ಜೀವನ್,ಹರೀಶ್,ಹನುಮಂತ ಕಲ್ಲೇದ್ ನಗರ ಪೊಲೀಸ್ ಆಯುಕ್ತರ ಕಚೇರಿಯ ತತ್ರಿಕ ವಿಭಾಗದ ಸಿಬ್ಬಂದಿಗಳಾದ ಕುಮಾರ್,ಗುರುದೇವಾರಾಧ್ಯ,ಮಂಜು,ಶ್ಯಾಂಸುಂದರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.

ಅಧಿಕಾರಿ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *