ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

  • Crime
  • February 9, 2023
  • No Comment
  • 289

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಮೈಸೂರು,ಫೆ9,Tv10 ಕನ್ನಡ
ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ 14 ಲಕ್ಷ ಮೌಲ್ಯದ 8 ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ.ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.ಮಂಜು(32) ಹಾಗೂ ಚಂದನ್(27) ಬಂಧಿತ ಆರೋಪಿಗಳು.ಚಂದು ತಲೆ ಮರೆಸಿಕೊಂಡಿರುವ ಆರೋಪಿ.

ರಾತ್ರಿ ಗಸ್ತಿನ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.ಮೊದಲ ಆರೋಪಿ ಮಂಜು ಈಗಾಗಲೇ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.ಜೈಲಿನಲ್ಲಿದ್ದಾಗಲೇ ಚಂದನ್ ನ ಪರಿಚಯ ಮಾಡಿಕೊಂಡು ಮೂವರು ಆರೋಪಿಗಳು ಸೇರಿ ಕೃತ್ಯವೆಸಗಿದ್ದಾರೆ.

ಜಯಲಕ್ಷ್ಮಿಪುರಂ,ಕುವೆಂಪುನಗರ,ಆಲನಹಳ್ಳಿ,ಉದಯಗಿರಿ,ಕೊಳ್ಳೇಗಾಲ,ನಂಜನಗೂಡು,ಕೆ.ಆರ್.ನಗರ,ಟಿ.ನರಸೀಪುರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಸರಗಳುವು ಪ್ರಕರಣಗಳು ಪತ್ತೆಯಾಗಿದೆ.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಮುತ್ತುರಾಜ್ ಹಾಗೂ ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥನಾರಾಯಣ್ ರವರ ಮೇಲ್ವಿಚಾರಣೆಯಲ್ಲಿ ಜಯಲಕ್ಷ್ಮಿಪುರಂ ನ ಇನ್ಸ್ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ಪಿಎಸ್ಸೈ ರಂಗಸ್ವಾಮಿ ಸಿಬ್ಬಂದಿಗಳಾದ ಪ್ರಭುರಾಜ್,ಅಭಿಷೇಕ್ ಬೆಂಜಮಿನ್,ದೇವರಾಜು,ಅಮಿಸಿದ್ದ ಖೋತ್,ಕಾಂತರಾಜು,ಮಾಯಪ್ಪ ಕರಂಗಾವಿ,ಮನೋಹರ್,ಕುಮಾರ್.ಎನ್.ಅರ್.ಎಸಿಪಿ ಸ್ಕ್ವಾಡ್ ನ ಎಎಸ್ಸೈ ಅನಿಲ್ ಶಂಕಪಾಲ್,ರಮೇಶ್,ಲಿಂಗರಾಜಪ್ಪ,ಸುರೇಶ್,ಜೀವನ್,ಹರೀಶ್,ಹನುಮಂತ ಕಲ್ಲೇದ್ ನಗರ ಪೊಲೀಸ್ ಆಯುಕ್ತರ ಕಚೇರಿಯ ತತ್ರಿಕ ವಿಭಾಗದ ಸಿಬ್ಬಂದಿಗಳಾದ ಕುಮಾರ್,ಗುರುದೇವಾರಾಧ್ಯ,ಮಂಜು,ಶ್ಯಾಂಸುಂದರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.

ಅಧಿಕಾರಿ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *