ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಮೈಸೂರು : ಯಾವುದೇ ಒಂದು ದೇಶ ಸದೃಢ ದೇಶವಾಗ ಬೇಕಾದರೆ ಆ ದೇಶದ ಕಾನೂನು ಪಾಲಿಸಬೇಕು. ನಿಜವಾದ ಸಂಪತ್ತು ಆ ದೇಶದ ಆರೋಗ್ಯವಂತ ಪ್ರಜೆಗಳು ಅದರಲ್ಲೂ ಯುವಕರು. ಹಾಗಾಗಿ ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಪ್ರಾಂಶುಪಾಲರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಲಯನ್ ಸಿ ಆರ್ ದಿನೇಶ್ ತಿಳಿಸಿದರು.

SBRR ಮಹಾಜನ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮಾಡಿ ಯುವಕರನ್ನು ಸದೃಢ ಪ್ರಜೆಗಳನ್ನಾಗಿ ರೂಪಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದೆ. ಹಾಗಾಗಿ ಯುವಕರು ವಿದ್ಯಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು. ವಿವಿಧತೆಯಲ್ಲಿ ಏಕತೆಯ ಮಂತ್ರಕ್ಕೆ ಬದ್ಧರಾಗಿ ಎಲ್ಲರೊಡನೆ ಬೆರೆಯಬೇಕು. ಸಂಕುಚಿತ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಒಳಗಾಗಬಾರದು. ಚುನಾವಣೆಯಲ್ಲಿ ಸಚ್ಚಾರಿತ್ರ್ಯದ ಅಭ್ಯರ್ಥಿಯನ್ನು ಯಾವುದೇ ಆಮಿಷಗಳಿಗೆ ಒಳಗಾಗದೇ ಆಯ್ಕೆ ಮಾಡಬೇಕು. ಅಭ್ಯರ್ಥಿಗಳೇ ಆಗುವ ಅವಕಾಶ ಸಿಕ್ಕಾಗ ನೈತಿಕ ನಿಷ್ಠೆಯಿಂದ ಮುನ್ನಡೆಯಬೇಕು. ಭೋಗಜೀವನಕ್ಕೆ ಪಕ್ಕಾಗದೆ ಇತರರಿಗೆ ಮಾದರಿಯಾಗಬೇಕು. ನಮ್ಮ ದೇಶವನ್ನು ಕಟ್ಟಿದ ಹಿರಿಯ ಚೇತನಗಳಾದ ಕಡುಗಲಿಗಳ, ಶಾಂತಿಪ್ರಿಯರ, ಧರ್ಮ ಸಹಿಷ್ಣುಗಳ ಇತಿಹಾಸವನ್ನು ಅರಿತು ಆ ಗುಣಗಳನ್ನು ಅಳವಡಿಸಿಕೊಂಡು ಅವರ ಕನಸಿನ ನನಸಾಗಬೇಕು. ಕಾಯಕಕ್ಕಾಗಿ ಆಯ್ದುಕೊಳ್ಳುವ ಕ್ಷೇತ್ರ ಯಾವುದೇ ಆಗಿರಲಿ ಪ್ರಾಮಾಣಿಕತೆ, ಸರಳತೆ, ಸಜ್ಜನಿಕೆಗಳನ್ನು ಮೈಗೂಡಿಸಿಕೊಳ್ಳಬೇಕು. ಧಾರ್ಮಿಕವಾಗಿ ಒಡಕುಗಳು ಮೂಡಿದಾಗ ಸಾಮರಸ್ಯದಿಂದ ಬಗೆಹರಿಸಿಕೊಳ್ಳಬೇಕು. ದುಡುಕಬಾರದು. ಇದೇ ಭಾರತೀಯರೆಲ್ಲರ ಪ್ರಮುಖ ಹಾಗೂ ಅನಿವಾರ್ಯ ಲಕ್ಷಣವಾಗಿದೆ. ಹನಿಹನಿಗೂಡಿದರೆ ಹಳ್ಳವೆಂಬಂತೆ ಒಬ್ಬೊಬ್ಬರೂ ಸರಿ ಹೋದಾಗ ಸಮುದಾಯವೇ ಸಬಲಗೊಳ್ಳುತ್ತದೆ. ಪ್ರಧಾನಿಯವರ ಆಶಯದಂತೆ ಸೈನ್ಯದಲ್ಲಷ್ಟೇ ಅಲ್ಲದೆ ಎಲ್ಲೆಡೆಯೂ ಅಗ್ನಿವೀರರಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ . ಪ್ರಭುಸ್ವಾಮಿ ಎಮ್ ಎಮ್ ರವರು ವಹಿಸಿ ಇಂದಿನ ಯುವಜನರಲ್ಲಿ ಮೌಲ್ಯಗಳು ಕಡಿಮೆಯಾಗುತ್ತಿದೆ ಹಾಗಾಗಿ ಮೌಲ್ಯಯುತ ಬದುಕನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುಬೇಕೆಂದು ಹೇಳಿದರು . ಘಟಕದ ಕಾರ್ಯಕ್ರಮ ಅಧಿಕಾರಿ ಸಿದ್ದರಾಜು ಉಪಸ್ಥಿತರಿದ್ದರು.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *