ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಮೈಸೂರು : ಯಾವುದೇ ಒಂದು ದೇಶ ಸದೃಢ ದೇಶವಾಗ ಬೇಕಾದರೆ ಆ ದೇಶದ ಕಾನೂನು ಪಾಲಿಸಬೇಕು. ನಿಜವಾದ ಸಂಪತ್ತು ಆ ದೇಶದ ಆರೋಗ್ಯವಂತ ಪ್ರಜೆಗಳು ಅದರಲ್ಲೂ ಯುವಕರು. ಹಾಗಾಗಿ ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಪ್ರಾಂಶುಪಾಲರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಲಯನ್ ಸಿ ಆರ್ ದಿನೇಶ್ ತಿಳಿಸಿದರು.

SBRR ಮಹಾಜನ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮಾಡಿ ಯುವಕರನ್ನು ಸದೃಢ ಪ್ರಜೆಗಳನ್ನಾಗಿ ರೂಪಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದೆ. ಹಾಗಾಗಿ ಯುವಕರು ವಿದ್ಯಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು. ವಿವಿಧತೆಯಲ್ಲಿ ಏಕತೆಯ ಮಂತ್ರಕ್ಕೆ ಬದ್ಧರಾಗಿ ಎಲ್ಲರೊಡನೆ ಬೆರೆಯಬೇಕು. ಸಂಕುಚಿತ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಒಳಗಾಗಬಾರದು. ಚುನಾವಣೆಯಲ್ಲಿ ಸಚ್ಚಾರಿತ್ರ್ಯದ ಅಭ್ಯರ್ಥಿಯನ್ನು ಯಾವುದೇ ಆಮಿಷಗಳಿಗೆ ಒಳಗಾಗದೇ ಆಯ್ಕೆ ಮಾಡಬೇಕು. ಅಭ್ಯರ್ಥಿಗಳೇ ಆಗುವ ಅವಕಾಶ ಸಿಕ್ಕಾಗ ನೈತಿಕ ನಿಷ್ಠೆಯಿಂದ ಮುನ್ನಡೆಯಬೇಕು. ಭೋಗಜೀವನಕ್ಕೆ ಪಕ್ಕಾಗದೆ ಇತರರಿಗೆ ಮಾದರಿಯಾಗಬೇಕು. ನಮ್ಮ ದೇಶವನ್ನು ಕಟ್ಟಿದ ಹಿರಿಯ ಚೇತನಗಳಾದ ಕಡುಗಲಿಗಳ, ಶಾಂತಿಪ್ರಿಯರ, ಧರ್ಮ ಸಹಿಷ್ಣುಗಳ ಇತಿಹಾಸವನ್ನು ಅರಿತು ಆ ಗುಣಗಳನ್ನು ಅಳವಡಿಸಿಕೊಂಡು ಅವರ ಕನಸಿನ ನನಸಾಗಬೇಕು. ಕಾಯಕಕ್ಕಾಗಿ ಆಯ್ದುಕೊಳ್ಳುವ ಕ್ಷೇತ್ರ ಯಾವುದೇ ಆಗಿರಲಿ ಪ್ರಾಮಾಣಿಕತೆ, ಸರಳತೆ, ಸಜ್ಜನಿಕೆಗಳನ್ನು ಮೈಗೂಡಿಸಿಕೊಳ್ಳಬೇಕು. ಧಾರ್ಮಿಕವಾಗಿ ಒಡಕುಗಳು ಮೂಡಿದಾಗ ಸಾಮರಸ್ಯದಿಂದ ಬಗೆಹರಿಸಿಕೊಳ್ಳಬೇಕು. ದುಡುಕಬಾರದು. ಇದೇ ಭಾರತೀಯರೆಲ್ಲರ ಪ್ರಮುಖ ಹಾಗೂ ಅನಿವಾರ್ಯ ಲಕ್ಷಣವಾಗಿದೆ. ಹನಿಹನಿಗೂಡಿದರೆ ಹಳ್ಳವೆಂಬಂತೆ ಒಬ್ಬೊಬ್ಬರೂ ಸರಿ ಹೋದಾಗ ಸಮುದಾಯವೇ ಸಬಲಗೊಳ್ಳುತ್ತದೆ. ಪ್ರಧಾನಿಯವರ ಆಶಯದಂತೆ ಸೈನ್ಯದಲ್ಲಷ್ಟೇ ಅಲ್ಲದೆ ಎಲ್ಲೆಡೆಯೂ ಅಗ್ನಿವೀರರಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ . ಪ್ರಭುಸ್ವಾಮಿ ಎಮ್ ಎಮ್ ರವರು ವಹಿಸಿ ಇಂದಿನ ಯುವಜನರಲ್ಲಿ ಮೌಲ್ಯಗಳು ಕಡಿಮೆಯಾಗುತ್ತಿದೆ ಹಾಗಾಗಿ ಮೌಲ್ಯಯುತ ಬದುಕನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುಬೇಕೆಂದು ಹೇಳಿದರು . ಘಟಕದ ಕಾರ್ಯಕ್ರಮ ಅಧಿಕಾರಿ ಸಿದ್ದರಾಜು ಉಪಸ್ಥಿತರಿದ್ದರು.

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *