ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ

ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ

ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ

2023 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ ರೂ.11750/ ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದವರು ಖರೀದಿ ಪ್ರಕ್ರಿಯೆ ನಡೆಸಲಿದ್ದು, ನಾಗಮಂಗಲ ತಾಲ್ಲೂಕಿನ ಕದಬಳ್ಳಿ ಹಾಗೂ ಕೆ.ಆರ್.ಪೇಟೆ ಎ.ಪಿ.ಎಂ.ಸಿ ಆವರಣದಲ್ಲಿ‌ ನೊಂದಣಿ ಪ್ರಕ್ರಿಯೆ ಪ್ರಾರಮಭವಾಗಲಿದೆ ಎಂದರು.

ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಪ್ರತಿ ಎಕರೆಗೆ 6 ಕ್ವಿಂಟಾಲ್ ನಂತೆ ಖರೀದಿಸಬೇಕು. ರೈತರ ನೊಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳ ವರೆಗೆ ನಿಗದಿಪಡಿಸಿಲಾಗಿದೆ ಎಂದರು.

ನೊಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಲು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿ ಪ್ರಾರಂಭಿಸುವುದು ಸೂಕ್ತ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಕೆ.ಆರ್ ಪೇಟೆ ಹಾಗೂ ನಾಗಮಂಗಲ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 68466 ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಮರಗಳಿದ್ದು, ಒಟ್ಟು ಉತ್ಪಾದನೆ 5096 ಲಕ್ಷ ಕಾಯಿಕಳಾಗಿರುತ್ತವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಎಪಿಎಂಸಿ ಉಪ ನಿರ್ದೆಶಕ ಕೆ.ಶ್ರೀನಿವಾಸ ರೆಡ್ಡಿ, ಕೆ.ಆರ್ ಪೇಟೆ ಎಪಿಎಂಸಿ ಕಾರ್ಯದರ್ಶಿ ರಫಿಕ್ ಅಹಮ್ಮದ್, ನಾಗಮಂಗಲ ಎಪಿಎಂಸಿಯ ಸೋಮಶೇಖರ್, ರಜೀತ್, ನಫೇಢ್ ಸಂಸ್ಥೆಯ ಸತೀಶ್, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *