ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಮೈಸೂರು,ಫೆ15,Tv10 ಕನ್ನಡ*
ಹುಡುಗಿಯರನ್ನ ಚುಡಾಯಿಸುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯನ್ನ ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿದ ಘಟನೆ ಎನ್.ಆರ್.ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಯ್ಯದ್ ಮನ್ಸೂರ್ (32) ಕೊಲೆಯಾದ ದುರ್ದೈವಿ.
ಮನ್ಸೂರ್ ಮೈಸೂರಿನ ಕಲ್ಯಾಣಗಿರಿ ನಿವಾಸಿ.ಕಬಾಬ್ ಸೆಂಟರ್ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ.
ಭಾನುವಾರ ಮನ್ಸೂರ್ ಧಿಢೀರ್ ನಾಪತ್ತೆಯಾಗಿದ್ದ.
ಎನ್ ಆರ್ ಠಾಣೆಯಲ್ಲಿ ಜಬೀ ಸೈಯದ್ ಝೈನುಲ್ಲಾ ವಿರುದ್ದ ಪ್ರಕರಣ ದಾಖಲಾಗಿತ್ತು.ಕಬಾಬ್ ಸೆಂಟರ್ ಬಳಿ
ಹುಡಗಿಯರನ್ನು ಚುಡಾಯಿಸುತ್ತಿದ್ದ ಹಿನ್ನಲೆ ಜಬೀ ಗೆ ಮನ್ಸೂರ್ ಬುದ್ದಿವಾದ ಹೇಳಿದ್ದರು.ಈ ವಿಚಾರದಲ್ಲಿ ಜಬೀ ತನ್ನ ಸ್ನೇಹಿತರ ಜೊತೆ ಬಂದು ಗಲಾಟೆ ಮಾಡಿದ್ದ.ನಂತರ ಮನ್ಸೂರ್ ನಾಪತ್ತೆಯಾಗಿದ್ದರು.
ಸದ್ಯ ಪಾಂಡವಪುರ ನಾಲೆಯಲ್ಲಿ ಮನ್ಸೂರ್ ಶವ ಪತ್ತೆಯಾಗಿದೆ.
ಜಬೀ ಹಾಗೂ ಝೈನುಲ್ಲಾ ಹಾಗೂ ಮತ್ತಿಬ್ಬರು ಮನ್ಸೂರ್ ನನ್ನು ಅಪಹರಿಸಿ ಕೊಲೆ ಮಾಡಿರುವುದಾಗಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಸದ್ಯ ಇಬ್ಬರನ್ನು ವಶಕ್ಕೆ ಪಡೆದಿರುವ
ಎನ್ ಆರ್ ಠಾಣೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *