ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್.

ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್.

ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು: ಎನ್.ಎಂ.ಶಿವಪ್ರಕಾಶ್.

ಕೆ.ಆರ್.ಪೇಟೆ: ಪರೀಕ್ಷೆ ಎಂಬುದು ಭವಿಷ್ಯ ಕಟ್ಟಿಕೊಡುವ ಭವ್ಯ ಮಂದಿರದಂತೆ. ಸಮಾಧಾನದ ಅಧ್ಯಯನದ ಮೂಲಕ ಅದನ್ನು ಪ್ರವೇಶಿಸಿ ಸಾಧನೆ ಮಾಡಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಕಲಿಕೋತ್ಸಾಹದಿಂದ ಮುನ್ನಡೆಯಬೇಕು ಎಂದು ಪಾಂಡವಪುರದ ಸ.ಪ.ಪೂ.ಕಾಲೇಜಿನ ಉಪನ್ಯಾಸಕರಾದ ಎನ್.ಎಂ.ಶಿವಪ್ರಕಾಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವದಲ್ಲಿ ಸಮಾರೋಪ ಭಾಷಣ ಮಾಡಿದರು. ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಗುರಿಯನ್ನು ತಲುಪಬೇಕು. ಉತ್ಸಾಹ ಮತ್ತು ಆಸಕ್ತಿಯಿಂದ ಮಾತ್ರ ಗುರಿಸಾಧನೆ ಸಾಧ್ಯ. ಆಸಕ್ತಿ ಇರುವ ವಿದ್ಯಾರ್ಥಿಗಳು ಅನ್ಯ ವಿಷಯಗಳ ಕಡೆಗೆ ಗಮನ ಕೊಡದೆ, ಅಧ್ಯಯನದಲ್ಲಿ ಮಾತ್ರ ಏಕಾಗ್ರತೆಯಿಂದಿರುತ್ತಾರೆ. ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಾ ಹೋಗುತ್ತಾರೆ. ಬದುಕಿನ ಸಾರ್ಥಕತೆಯನ್ನು ಮೆರೆಯುತ್ತಾರೆ. ಅದಕ್ಕಾಗಿ ಎಲ್ಲರೂ ಉತ್ಸಾಹ ಮತ್ತು ಆಸಕ್ತಿಯಿಂದ ಅಧ್ಯಯನ ಮಾಡಬೇಕೆಂದೂ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿಗೆ ಸಾಕ್ಷಿಯಾದ ಕಾಲೇಜು ಸಂಚಿಕೆಯಾದ ಸೇವಂತಿಗೆ-೩ ಎಂಬ ಕಿರುಹೊತ್ತಿಗೆಯನ್ನು ಉಪಪ್ರಾಂಶುಪಾಲರಾದ ಶ್ರೀ ಅಸ್ಗರ್ ಅಲಿಯವರು ಬಿಡುಗಡೆ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಮಾತನಾಡಿದರು. ಇಂದಿನ ಕಿರುಗವನಗಳ ಬರವಣಿಗೆಯು ಮುಂದಿನ ಮಹಾಕಾವ್ಯಕ್ಕೆ ನಾಂದಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿ.ಟಿ.ಪ್ರಕಾಶ್ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ತಮ್ಮದಾಗಲೆಂದು ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಂದೆ ತಾಯಿಯ ಕನಸನ್ನು ಮಕ್ಕಳು ನನಸು ಮಾಡಬೇಕು. ಬಡತನ ಎಂಬುದನ್ನು ಸಮಸ್ಯೆಯನ್ನಾಗಿಸಿಕೊಳ್ಳದೆ, ಸವಾಲಾಗಿಸಿಕೊಂಡು ಅದನ್ನು ಮೆಟ್ಟಿ ನಿಲ್ಲಬೇಕು ಎಂದು ಹೇಳಿ ಈ ವರ್ಷ ವಿದ್ಯಾರ್ಥಿಗಳಿಗೆ ನಾನಾ ರೂಪಗಳಲ್ಲಿ ಸಹಾಯಹಸ್ತ ಚಾಚಿದ ಕೊಡುಗೈ ದಾನಿಗಳನ್ನು ಸ್ಮರಿಸಿದರು. ದಾನಿಗಳು ಹಾಗೂ ಮಹಾನ್ ಸಾಧಕರ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಪರೀಕ್ಷೆಯ ಸಮಯದಲ್ಲಿ ಮೊಬೈಲ್ ನಿಂದ ದೂರವಿರಬೇಕು. ಆರೋಗ್ಯವನ್ನು ಕಾಪಾಡಿಕೊಂಡು ಪರೀಕ್ಷೆಯನ್ನು ಎದುರಿಸಿರೆಂದು ಕಿವಿ ಮಾತು ಹೇಳಿದರು. ಕ್ರೀಡೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ನೆನಪಿನ ಕಾಣಿಕೆಯನ್ನು ವಿದ್ಯುತ್‌ ಗುತ್ತಿಗೆದಾರ ಬಿ.ಎಸ್ ರಾಮು ವಿತರಿಸಿದರು. ಕಾಲೇಜಿನ ವರದಿಯನ್ನು ಸಂಜಯ್ ಬಿ.ಆರ್. ನಿರೂಪಣೆಯನ್ನು ರಕ್ಷತಾ ಮಾಡಿದರು .ಕಾರ್ಯಕ್ರಮದಲ್ಲಿ ರಂಗರಾಜು ರಾಜೇ ಗೌಡ ಬೃಂದಾ ವೀಣಾ ಚೈತ್ರ ಅನಿಲ್ ಶ್ರೀಕಾಂತ ಉಪಸ್ಥಿತರಿದ್ದರು .

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *