ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ್

ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ್

ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ್

ಮಂಡ್ಯದ ರೈತರು ಭತ್ತ ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘದ ಅದ್ಯಕ್ಷರಾದ ಅಮರನಾರಾಯಣ್ ರೈತರಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘ, ಬೆಂಗಳೂರು ಮತ್ತು OISCA ಇಂಟರ್ ನ್ಯಾಷನಲ್ ಕರ್ನಾಟಕ ವಲಯ ಇವರ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಆತ್ಮ ಯೋಜನೆಯಡಿ ಶ್ರೀಗಂಧ, ವನಕೃಷಿ ಮತ್ತು ಸಮಗ್ರ ಕೃಷಿ ಪದ್ದತಿ ಕುರಿತು ತರಬೇತಿ ಹಾಗೂ ವಿಚಾರ ಸಂಕೀರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯದಲ್ಲಿ 51 ಭಾಗ ನೀರಾವರಿ ಜಮೀನು ಇದೆ. 42 ಸಾವಿರ ಹೆಕ್ಟೇರ್ ಖುಷ್ಕಿ ಭೂಮಿ ಇದೆ. ರೈತರು ನೀರಾವರಿ ಇಲ್ಲದ ಕೃಷಿ ಭೂಮಿಯಲ್ಲಿ ಶ್ರೀಗಂಧ ಬೆಳೆ ಬೆಳೆದು ಆರ್ಥಿಕವಾಗಿ ಲಾಭ ಪಡೆದುಕೊಳ್ಳಬಹುದು ಎಂದರು.

ಅಂದಿನ ಮೈಸೂರಿನ ಮಹಾರಾಜರು ಹೆಚ್ಚಾಗಿ ಸಿಗುತ್ತಿದ್ದ ಶ್ರೀಗಂಧ ಬೆಳೆಯನ್ನು ಕಂಡು ಮೈಸೂರು ಸ್ಯಾಂಡಲ್ ಸೋಪ್, ಗಂಧದ‌ ಎಣ್ಣೆ ಕಾರ್ಖಾನೆಗೆ ಬುನಾದಿ ಹಾಕಿದರು. ಅದರ ಪರಿಣಾಮ ಇಂದು ದೇಶ ವಿದೇಶಗಳಲೆಲ್ಲಾ ಶ್ರೀಗಂಧದ ಬೆಳೆ ಶ್ರೀಮಂತವಾಗಿದೆ. ಇಡೀ ಭಾರತದಲ್ಲೇ ಕರ್ನಾಟಕ 71% ಶ್ರೀಗಂಧ ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ರೈತರು ಶ್ರೀಗಂಧದ ಬೆಳೆಯ ಬಗ್ಗೆ ತಿಳಿದುಕೊಂಡು ಶ್ರೀಗಂಧ ಬೆಳೆಯಬೇಕಿದೆ ಎಂದರು.

ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಸಂಚರಿಸಿ ಶ್ರೀಗಂಧ ಬೆಳೆಯ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಸರ್ಕಾರ ಶ್ರೀಗಂಧ ಬೆಳೆಯನ್ನು ತೋಟಗಾರಿಕೆ ಬೆಳೆ ಎಂದು ಪರಿಗಣಿಸಿ, ಇದನ್ನು ಪರಿಣಾಮಕಾರಿವಾಗಿ ತೋಟಗಾರಿಕೆ ಇಲಾಖೆಯಿಂದ ಸಾಲ, ಸೌಲಭ್ಯ ಹಾಗೂ ವಿಮೆ ಇನ್ನಿತರ ಸೌಲಭ್ಯ ಸಿಗುವಂತಾಗಬೇಕು ಎಂದರು.

ಶ್ರೀ ಗಂಧದ ಕೃಷಿಯಲ್ಲಿ ಅತಿಥಿ ಸಸ್ಯ ಉಪಯೋಗಿಸುವ ಗೊಬ್ಬರ, ಗಿಡಗಳ ನಡುವೆ ಅಂತರ, ರೋಗ ನಿಗ್ರಾಹ ಕುರಿತಂತೆ ರೈತರಿಗೆ ಮಾಹಿತಿ ಕೈಪಿಡಿ ಒದಗಿಸಬೇಕು ಎಂದರು.

ಪ್ರಗತಿಪರ ರೈತರ ಯಶೋಗಾಥೆಯನ್ನು ಹಂಚಿಕೊಳ್ಳಿ: ಶಾಂತ ಎಲ್‌ ಹುಲ್ಮನಿ

ಪ್ರಗತಿಪರ ರೈತರು ತಮ್ಮ ಕೃಷಿಯಲ್ಲಿ ಅಳವಡಿಸಿಕೊಂಡಿರುವ ವಿಧಾನ ಹಾಗೂ ಹೊಸ ತಂತ್ರಜ್ಞಾನಗಳ ಬಳಕೆ ಕುರಿತ ಯಶೋಗಾಥೆಗಳನ್ನು ಇತರೆ ರೈತರೊಂದಿಗೆ ಹಂಚಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು.

ರೈತರಿಗೆ ಹೆಚ್ಚು ಕಾರ್ಯಾಗಾರಗಳನ್ನು‌ ಆಯೋಜಿಸಿ, ರೈತರು ಕೃಷಿಯಲ್ಲಿ ಖುದ್ದು ತಮ್ಮ ಅನುಭವ, ತೊಂದರೆಗಳು ಮತ್ತು ಸುಧಾರಣೆ ಅಂಶಗಳನ್ನು ಹಂಚಿಕೊಳ್ಳಲಿದ್ದಾರೆ. ಇಲ್ಲಿ ಮೂಡುವ ಅಭಿಪ್ರಾಯಗಳು ಸರ್ಕಾರದ ಹಂತಕ್ಕೆ ತಲುಪಿದರೆ ರೈತರ ಪರವಾಗಿ ಯೋಜನೆಗಳನ್ನು ರೂಪಿಸಲು ಸಹಕಾರಿ ಎಂದರು.
ಗ್ರಾಮೀಣ ಭಾಗದಲ್ಲಿ ಮನರೇಗಾ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ 1200 ಆಟದ ಮೈದಾನ ನಿರ್ಮಾಣ ಕೆಲಸ ಕೈಗೊಳ್ಳಲಾಗುತ್ತಿದೆ, ಸ್ಮಾಸನದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ಎಂ ಬಾಬು, ಸಂಜಿವಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಎಸ್ ಅಶೋಕ್, ತೋಟಗಾರಿಕೆ ಇಲಾಖೆ ನಿರ್ದೇಶಕ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಹರ್ಷ, ಕೃಷಿ ಇಲಾಖೆಯ ವಿಷಯ ತಜ್ಞೆ ಸುಚಿತ್ರ ಕೆ.ಪಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *