ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

  • Crime
  • February 24, 2023
  • No Comment
  • 141

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ಮಂಡ್ಯ,ಫೆ24,Tv10 ಕನ್ನಡ
ಮಂಡ್ಯದಲ್ಲಿ ವ್ಯಕ್ತಿಯೊಬ್ಬನ
ಕೊಲೆಗೈದು ಮೃತದೇಹ ಕತ್ತರಿಸಿ ನಾಲೆಗೆ ಎಸೆದ ಪ್ರಕರಣ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಯ ಭೀಕರ ಹತ್ಯೆಗೆ ಸಕ್ಕರೆ ನಾಡು ಬೆಚ್ಚಿಬಿದ್ದಿದೆ.
ತುಂಡು ತುಂಡಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ಹೊಡಾಘಟ್ಟ,ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ತುಂಡುತುಂಡಾದ ಮೃತದೇಹ ಪತ್ತೆಯಾಗಿದೆ.
ದುಷ್ಕರ್ಮಿಗಳು ಕೊಲೆಗೈದು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ಸುಮಾರು
30 ರಿಂದ 40 ವರ್ಷದ ವ್ಯಕ್ತಿಯ ಮೃತದೇಹದ ಭಾಗಗಳು ಕಂಡುಬಂದಿದರ.
ಹೊಡಾಘಟ್ಟ ಬಳಿ ತೊಡೆ ಮತ್ತು ಸೊಂಟದ ಭಾಗ, ಶಿವಾರದ ಸಮೀಪ ಒಂದು ಕಾಲು ಪತ್ತೆಯಾಗಿದೆ.
ಡಣಾಯಕನಪುರ ಬಳಿ ಎರಡು ಕೈ, ಒಂದು ಕಾಲು, ಗೂಳೂರು ಬಳಿ ತಲೆಯ ಭಾಗ ಪತ್ತೆಯಾಗಿದೆ.
ಎಡಗೈ ಮೇಲೆ ಕಾವ್ಯ, ರಘು, ಬಲಗೈಯಲ್ಲಿ ವನಜಾ ಎಂದು ಹಚ್ಚೆ ಬರೆಯಲಾಗಿದೆ.
ಮೃತದೇಹದ ಭಾಗಗಳನ್ನ ಪೊಲೀಸರು ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದ ತನಿಖೆಗೆ ಪ್ರತ್ಯೇಕ ತಂಡ ರಚನೆಗೆ ಎಸ್ಪಿ ಮುಂದಾಗಿದ್ದಾರೆ.
ಮೊದಲು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದು
ಎಲ್ಲಾ ಪೊಲೀಸ್ ಠಾಣೆಗಳಿಂದ ನಾಪತ್ತೆ ಪ್ರಕರಣಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *