ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

  • Crime
  • February 24, 2023
  • No Comment
  • 142

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ಮಂಡ್ಯ,ಫೆ24,Tv10 ಕನ್ನಡ
ಮಂಡ್ಯದಲ್ಲಿ ವ್ಯಕ್ತಿಯೊಬ್ಬನ
ಕೊಲೆಗೈದು ಮೃತದೇಹ ಕತ್ತರಿಸಿ ನಾಲೆಗೆ ಎಸೆದ ಪ್ರಕರಣ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಯ ಭೀಕರ ಹತ್ಯೆಗೆ ಸಕ್ಕರೆ ನಾಡು ಬೆಚ್ಚಿಬಿದ್ದಿದೆ.
ತುಂಡು ತುಂಡಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ಹೊಡಾಘಟ್ಟ,ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ತುಂಡುತುಂಡಾದ ಮೃತದೇಹ ಪತ್ತೆಯಾಗಿದೆ.
ದುಷ್ಕರ್ಮಿಗಳು ಕೊಲೆಗೈದು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ಸುಮಾರು
30 ರಿಂದ 40 ವರ್ಷದ ವ್ಯಕ್ತಿಯ ಮೃತದೇಹದ ಭಾಗಗಳು ಕಂಡುಬಂದಿದರ.
ಹೊಡಾಘಟ್ಟ ಬಳಿ ತೊಡೆ ಮತ್ತು ಸೊಂಟದ ಭಾಗ, ಶಿವಾರದ ಸಮೀಪ ಒಂದು ಕಾಲು ಪತ್ತೆಯಾಗಿದೆ.
ಡಣಾಯಕನಪುರ ಬಳಿ ಎರಡು ಕೈ, ಒಂದು ಕಾಲು, ಗೂಳೂರು ಬಳಿ ತಲೆಯ ಭಾಗ ಪತ್ತೆಯಾಗಿದೆ.
ಎಡಗೈ ಮೇಲೆ ಕಾವ್ಯ, ರಘು, ಬಲಗೈಯಲ್ಲಿ ವನಜಾ ಎಂದು ಹಚ್ಚೆ ಬರೆಯಲಾಗಿದೆ.
ಮೃತದೇಹದ ಭಾಗಗಳನ್ನ ಪೊಲೀಸರು ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದ ತನಿಖೆಗೆ ಪ್ರತ್ಯೇಕ ತಂಡ ರಚನೆಗೆ ಎಸ್ಪಿ ಮುಂದಾಗಿದ್ದಾರೆ.
ಮೊದಲು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದು
ಎಲ್ಲಾ ಪೊಲೀಸ್ ಠಾಣೆಗಳಿಂದ ನಾಪತ್ತೆ ಪ್ರಕರಣಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *