ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾವೇಶಾತಿ ಪ್ರಾರಂಭ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರಸಕ್ತ ವರ್ಷ 1 ಲಕ್ಷ ಪ್ರಾವೇಶಾತಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ಅವರು ತಿಳಿಸಿದರು.

ನಗರದ ಕೆಎಸ್ಓಯು ನ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 1046 ಲರ್ನಿಂಗ್ ಸೆಂಟರ್ ಗಳು ಇದ್ದು, 1050 ಕ್ಕೂ ಹೆಚ್ಚು ಉಪನ್ಯಾಸಕರು ಹಾಗೂ 900 ಅತಿಥಿ ಉಪನ್ಯಾಸಕರಿದ್ದಾರೆ. ಪ್ರಸ್ತುತ 64 ಕೋರ್ಸ್ ಗಳು ಇವೆ, ಜೊತೆಗೆ ಈ ವರ್ಷದಿಂದ 10 ಹೊಸ ಕೋರ್ಸ್ ಗಳು ಸೇರ್ಪಡೆಯಾಗಲಿವೆ ಎಂದರು.

ಅಂಕಪಟ್ಟಿಯು ಸಂಪೂರ್ಣ ಡಿಜಿಟಲಿಕರಣವಾಗಿದ್ದು, ಪ್ರಾವೇಶಾತಿಯನ್ನು ಆನ್ ಲೈನ್ ಮೂಲಕವೇ ನಡೆಸಲಾಗುತ್ತದೆ. ಸಂಪೂರ್ಣ ಪಾರದರ್ಶಕತೆಗೆ ಅನುಗುಣವಾಗಿ ಶುಲ್ಕವನ್ನು ಆನ್ ಲೈನ್ ಮುಖಾಂತರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ತಾವಿರುವ ಜಿಲ್ಲೆಯಲ್ಲಿಯೇ ಶೈಕ್ಷಣಿಕ ಪ್ರಯೋಜನೆ ಪಡೆದುಕೊಳ್ಳಲು ಸುಸಜ್ಜಿತ ಕಟ್ಟಡಗಳ ಪ್ರಾದೇಶಿಕ ಕೇಂದ್ರಗಳು ಲಭ್ಯವಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಅವಕಾಶ ಕಲ್ಪಿಸಲಾಗಿದೆ. ವಿಶ್ವ ವಿದ್ಯಾನಿಲಯವು ಪ್ಲೇಸ್ಮೆಂಟ್ಸ್ ಮುಖಾಂತರ ನಿಯಮಿತವಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಪ್ರವೇಶಾತಿ ಸಂಬಂಧ ಭಿತ್ತಿಪತ್ರ ಬಿಡುಗಡೆ ಮಾಡಿದರು.

ಪ್ರಾವೇಶಾತಿಯ ವಿಶೇಷಗಳು
ಯು.ಜಿ.ಸಿ ನಿಯಮಾವಳಿಯಂತೆ ವಿಶ್ವವಿದ್ಯಾನಿಲಯವು ದ್ವಿ ಪದವಿಗೆ ಅವಕಾಶ ಕಲ್ಪಿಸಿದೆ. ಆಟೋ/ಕ್ಯಾಬ್ ಡ್ರೈವರ್ ಗಳ ಕುಟುಂಬಕ್ಕೆ ಬೋಧನಾ ಶುಲ್ಕದಲ್ಲಿ ಶೇ.30% ರಷ್ಟು ವಿನಾಯಿತಿ ಪಡೆಯಬಹುದು. ವಿದ್ಯಾರ್ಥಿಗಳ ಪೋಷಕರು ಕೋವಿಡ್-19 ಸಾಂಕ್ರಮಿಲ ರೋಗದಿಂದ ಮರಣ ಹೊಂದಿದ್ದಲ್ಲಿ, ಪ್ರಾವೇಶಾತಿ ಶುಲ್ಕವನ್ನು 100%ರಷ್ಟು ವಿನಾಯಿತಿಯನ್ನು ಪಡೆಯಬಹುದು.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವರಾದ ಪ್ರೊ.ಕೆ.ಎಲ್.ಎನ್ ಮೂರ್ತಿ, ಅಧ್ಯಯನ ವಿಭಾಗದ ಡೀನ್ ಪ್ರೊ.ರಾಮನಾಥ್, ಪ್ರಾದೇಶಿಕ ನಿರ್ದೆಶಕರಾದ ಮಿಲನಾ ಆರ್ ಹಾಜರಿದ್ದರು.

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *