ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಫೆ,28:-ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಬಹಳಷ್ಟು ಮತಗಟ್ಟೆಗಳು ಶಾಲೆ ಹಾಗೂ ಅಂಗನವಾಡಿಗಳಲ್ಲಿ ಇದೆ. ಮತಗಟ್ಟೆಗಳಲ್ಲಿ ಮತದಾನದ ಕೆಲಸಕ್ಕಾಗಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ, ನೀರಿನ ವ್ಯವಸ್ಥೆ ಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತಂದು ಸರಿಪಡಿಸಿಕೊಳ್ಳಿ. ಮತದಾನದ ದಿನದಂದು ಗ್ರಾಮ ಪಂಚಾಯಿತಿ ಕಚೇರಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ ಇಲ್ಲದಿದ್ದರೆ ಶ್ಯಾಮಿಯಾನದ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿರುವ ಬೆಂಚ್ ಗಳನ್ನು ಸರಣಿ ಸಾಲಿನಲ್ಲಿ ಜೋಡಿಸಿದರೆ ಮತದಾರರು ಕುಳಿತುಕೊಳ್ಳಲು ಸಹಾಯವಾಗುತ್ತದೆ ಎಂದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ , ವೀಲ್ ಚೇರ್, ಮ್ಯಾಗ್ನಿಫೈಯಿಂಗ್ ಗ್ಲಾಸ್ ಸೇರಿದಂತೆ ಇನ್ನಿತರೆ ವ್ಯವಸ್ಥೆಯ ಬಗ್ಗೆ ವರದಿ ನೀಡುವಂತೆ ತಿಳಿಸಿದರು.

2018 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರಣ ತಿಳಿದುಕೊಂಡು, ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *